ಆ್ಯಪ್ನಗರ

ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ ಚರಣ್‌

ಕಳೆದ ವಾರ (ಆ.5) ಕೊರೊನಾ ವೈರಸ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ.

Vijaya Karnataka Web 14 Aug 2020, 10:56 pm
ಜನಪ್ರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಆಗಸ್ಟ್‌ 13ರ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಸದ್ಯ ಅವರು ಚೆನ್ನೈ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಅವರ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿದ್ದವು. ಆ ಬಗ್ಗೆ ಎಸ್‌ಪಿಬಿ ಪುತ್ರ, ನಿರ್ಮಾಪಕ ಎಸ್‌.ಪಿ. ಚರಣ್ ಮಾಹಿತಿ ನೀಡಿದ್ದಾರೆ.
Vijaya Karnataka Web spb charan says sp balasubrahmanyam is critical but is in safe hands
ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ ಚರಣ್‌


'ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ ನಿಜ. ಆದರೆ, ಎಂಜಿಎಂ ಆಸ್ಪತ್ರೆಯ ವೈದ್ಯರ ಆರೈಕೆಯಲ್ಲಿ ಅವರು ಸುರಕ್ಷಿತವಾಗಿದ್ದಾರೆ. ಅವರು ಮತ್ತೆ ಆರೋಗ್ಯವಾಗಿ ಮರಳುತ್ತಾರೆ ಎಂಬ ದೃಢ ನಂಬಿಕೆಯಲ್ಲಿ ನಾವೆಲ್ಲರೂ ಇದ್ದೇವೆ. ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಕಾಳಜಿಗೆ ಧನ್ಯವಾದಗಳು' ಎಂದು ಮಾಹಿತಿ ನೀಡಿದ್ದಾರೆ ಚರಣ್‌.

ಆಗಸ್ಟ್ 5ರಂದು ಎಸ್‌ಪಿಬಿ ಅವರಿಗೆ ಕೊರೊನಾ ಪಾಸಿಟಿವ್ ಆಗಿರುವ ವಿಚಾರ ಬಹಿರಂಗಗೊಂಡಿತ್ತು. ವೈದ್ಯರು ಮನೆಯಲ್ಲೇ ಕ್ವಾರಂಟೈನ್ ಚಿಕಿತ್ಸೆ ಪಡೆಯುಬಹುದು ಎಂದು ಹೇಳಿದ್ದರೂ, ಕೂಡ ಅವರು ಮನೆಯವರ ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ದೇಶಾದ್ಯಂತ ಅವರ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಅವರು, 'ಬಾಲು.. ಬೇಗ ಹುಷಾರಾಗಿ ವಾಪಸ್ ಬಾ...' ಎಂದು ಭಾವುಕರಾಗಿ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 'ಸಂಗೀತ ಪ್ರಿಯರಿಗೆ ದಿಗ್ಗಜ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಬೇಗ ಗುಣಮುಖರಾಗಲಿ ಅಂತ ಪ್ರಾರ್ಥಿಸಿ ಎಂದು ನಿಮ್ಮ ಬಳಿ ನಾನು ಮನವಿ ಮಾಡುತ್ತೇನೆ. ತಮ್ಮ ಧ್ವನಿ ಮೂಲಕ ಅವರು ನಮಗೆ ಖುಷಿ ನೀಡಿದ್ದಾರೆ...' ಎಂದು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್ ಟ್ವೀಟ್ ಮಾಡಿದ್ದಾರೆ. ಹಲವು ಭಾಷೆಯ ಸಂಗೀತ ನಿರ್ದೇಶಕರು, ಗಾಯಕರು ಸೇರಿದಂತೆ ಸಿನಿಮಾರಂಗದ ಅನೇಕ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಎಸ್‌ಪಿಬಿ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.

ಜನಪ್ರಿಯ ಗಾಯಕ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಚಿಂತಾಜನಕ!

ಈ ಮಧ್ಯೆ ಐಸಿಯುನಿಂದಲೇ ಎಸ್‌ಪಿಬಿ 'ಥಂಬ್ಸ್ ಅಪ್‌' ಮಾಡುತ್ತಿರುವ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಯಾವಾಗಿನದ್ದು ಎಂಬ ಬಗ್ಗೆ ಮಾಹಿತಿ ಇಲ್ಲ. ತಮಿಳು ನಟ ಮನೋಬಾಲ ಸೇರಿದಂತೆ ಅನೇಕರು ಆ ಫೋಟೋ ಶೇರ್‌ ಮಾಡಿಕೊಂಡು, 'ಎಸ್‌ಪಿಬಿ ಬೇಗ ಹುಷಾರಾಗಿ' ಎಂದು ಹಾರೈಸಿದ್ದಾರೆ.

ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಗಂಭೀರ; ಶೀಘ್ರ ಗುಣಮುಖರಾಗಲಿ ಎಂದ ರೆಹಮಾನ್!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌