ಆ್ಯಪ್ನಗರ

ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ವಿಜಯ್ ಸೇತುಪತಿ

ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ.

Agencies 16 Jun 2021, 9:06 pm

ಹೈಲೈಟ್ಸ್‌:

  • 25 ಲಕ್ಷ ರೂಪಾಯಿ ದೇಣಿಗೆ ನೀಡಿದ ವಿಜಯ್ ಸೇತುಪತಿ
  • ಸಿಎಂ ಪರಿಹಾರ ನಿಧಿಗೆ ದೇಣಿಗೆ ಕೊಟ್ಟ ವಿಜಯ್ ಸೇತುಪತಿ
  • ಎಂ.ಕೆ.ಸ್ಟಾಲಿನ್‌ಗೆ ಚೆಕ್ ಹಸ್ತಾಂತರಿಸಿದ ವಿಜಯ್ ಸೇತುಪತಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web vijay sethupathi donates rs 25 lakh to tamil nadu cm relief fund
ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ವಿಜಯ್ ಸೇತುಪತಿ
ತಮಿಳು ನಟ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಸಿಎಂ ಎಂ.ಕೆ.ಸ್ಟಾಲಿನ್‌ರನ್ನು ಭೇಟಿ ಮಾಡಿದ ವಿಜಯ್ ಸೇತುಪತಿ 25 ಲಕ್ಷ ರೂಪಾಯಿಯ ಚೆಕ್‌ಅನ್ನು ಹಸ್ತಾಂತರಿಸಿದ್ದಾರೆ.
ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ರೂಪಿಸಲು ದೇಣಿಗೆ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೋರಿದ್ದರು. ಇದರ ಪರಿಣಾಮ ತಮಿಳು ನಟ ಸೂರ್ಯ, ಕಾರ್ತಿ, ರಜನಿಕಾಂತ್, ಸೌಂದರ್ಯ ರಜನಿಕಾಂತ್, ವಿಕ್ರಂ, ಶಿವಕಾರ್ತಿಕೇಯನ್, ಅಜಿತ್, ನಿರ್ದೇಶಕ ಎ.ಆರ್.ಮುರುಗದಾಸ್ ಮುಂತಾದ ತಾರೆಯರು ತಮಿಳುನಾಡು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದರು.

ತಮಿಳು ನಟರಾದ ಸೂರ್ಯ, ಕಾರ್ತಿ ಮತ್ತು ತಂದೆ ಶಿವಕುಮಾರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದರು. ತಮಿಳು ನಟ ಅಜಿತ್ 25 ಲಕ್ಷ ರೂಪಾಯಿ ಕೊಟ್ಟಿದ್ದರು. ಸೂಪರ್ ಸ್ಟಾರ್ ರಜಿನಿಕಾಂತ್ 50 ಲಕ್ಷ ರೂಪಾಯಿಯ ಚೆಕ್ ಹಸ್ತಾಂತರಿಸಿದ್ದರು. ಸೌಂದರ್ಯ ರಜಿನಿಕಾಂತ್ ಮತ್ತು ಕುಟುಂಬ ಒಂದು ಕೋಟಿ ವರ್ಗಾವಣೆ ಮಾಡಿದ್ದರು. ಶಿವಕಾರ್ತಿಕೇಯನ್, ಎ.ಆರ್.ಮುರುಗದಾಸ್ ತಲಾ 25 ಲಕ್ಷ ರೂಪಾಯಿ ನೀಡಿದ್ದರು. ಇದೀಗ ವಿಜಯ್ ಸೇತುಪತಿ 25 ಲಕ್ಷ ರೂಪಾಯಿ ನೀಡಿದ್ದಾರೆ.

ಜ್ಯೂನಿಯರ್ ಎನ್‌ಟಿಆರ್ ಸಿನಿಮಾದಲ್ಲಿ ಮತ್ತೋರ್ವ ಖ್ಯಾತ ನಟ; ಇದು ಪ್ರಶಾಂತ್ ನೀಲ್ ಪ್ಲ್ಯಾನ್?
ಅಂದ್ಹಾಗೆ, ತಮಿಳು ನಟ ವಿಜಯ್ ಸೇತುಪತಿ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್‌ಗಳಿವೆ. 'ಲಾಭಂ', 'ತುಘಲಕ್ ದರ್ಬಾರ್' ಹಾಗೂ ವೇಟ್ರಿಮಾರನ್ ನಿರ್ದೇಶನದ ಚಿತ್ರಗಳಲ್ಲಿ ವಿಜಯ್ ಸೇತುಪತಿ ಬಿಜಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌