ತಮ್ಮ ತವರು ಜಿಲ್ಲೆ ಶಿವಮೊಗ್ಗದ ಗ್ರಾಮವೊಂದನ್ನು ದತ್ತು ಪಡೆದ 'ಕಿಚ್ಚ' ಸುದೀಪ್!
ನಟ ಸುದೀಪ್ ಅವರು ರಾಜ್ಯಾದ್ಯಂತ ಅನೇಕ ಸಮಾಜಮುಖಿ ಕೆಲಸಗಳಿಗೆ ಕೈಹಾಕಿದ್ದಾರೆ. ಅದರಲ್ಲಿ ಮುಖ್ಯವಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವುದು ಒಂದು. ಇದೀಗ ಅವರು ಶಿವಮೊಗ್ಗ ಜಿಲ್ಲೆಯ ಗ್ರಾಮವೊಂದನ್ನು ದತ್ತು ಪಡೆದುಕೊಂಡಿದ್ದಾರೆ.
Vijaya Karnataka Web 20 Feb 2021, 11:37 am
ಹೈಲೈಟ್ಸ್:
- ಶಿವಮೊಗ್ಗ ಜಿಲ್ಲೆಯ ಆವಿಗೆ ಗ್ರಾಮವನ್ನು ದತ್ತು ಪಡೆದ ಸುದೀಪ್
- ತಮ್ಮ ಚಾರಿಟೇಬಲ್ ಸೊಸೈಟಿ ಮೂಲಕ ಗ್ರಾಮವನ್ನು ದತ್ತು ಪಡೆದ ನಟ
- ಗಡಿಭಾಗದಲ್ಲಿರುವ ಗ್ರಾಮದ ಅಭಿವೃದ್ಧಿಗೆ ಮುಂದಾದ ಕಿಚ್ಚ
ನಟ 'ಕಿಚ್ಚ' ಸುದೀಪ್ ಅವರು ಸಾಮಾಜಿಕ ಸೇವೆ ಮಾಡುವುದರಲ್ಲಿ ಒಂದು ಹೆಜ್ಜೆ ಮುಂದೆ ಇರತ್ತಾರೆ. ತಮ್ಮದೇ ಚಾರಿಟೇಬಲ್ ಸೊಸೈಟಿ ಮೂಲಕ ಅನೇಕ ಕೆಲಸಗಳನ್ನು ಈಗಾಗಲೇ ಮಾಡಿಕೊಂಡು ಬರುತ್ತಿದ್ದಾರೆ. ರಾಜ್ಯದ ವಿವಿಧೆಡೆ ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದ್ದಾರೆ. ಇದೀಗ ತಮ್ಮ ತವರೂರು ಶಿವಮೊಗ್ಗದ ಒಂದು ಹಳ್ಳಿಯನ್ನೇ ಸೊಸೈಟಿ ಮೂಲಕ ಸುದೀಪ್ ದತ್ತು ಪಡೆದುಕೊಂಡಿದ್ದಾರೆ. ಹೌದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆವಿಗೆ ಗ್ರಾಮವನ್ನು ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿಯು ದತ್ತು ತೆಗೆದುಕೊಂಡಿದೆ.
ಸಾಗರ ತಾಲ್ಲೂಕು ಕೇಂದ್ರದಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ, ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಆವಿಗೆ ಗ್ರಾಮದಲ್ಲಿ 27 ಮನೆಗಳಿದೆ. ಇಲ್ಲಿ 1ನೇ ತರಗತಿಯಿಂದ 5ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ಇದ್ದು, ಅಲ್ಲಿ 13 ಮಕ್ಕಳು ಕಲಿಯುತ್ತಿದ್ದಾರೆ. ಆರಂಭದಲ್ಲಿ ಈ ಊರಿನ ಶಾಲೆಯನ್ನು ದತ್ತು ಪಡೆಯಬೇಕು ಎಂಬುದು ಸೊಸೈಟಿಯ ಉದ್ದೇಶವಾಗಿತ್ತು. ಆ ಹಿನ್ನೆಲೆಯಲ್ಲಿ ಸೊಸೈಟಿಯ ಸದಸ್ಯರು ಆವಿಗೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಆದರೆ, ಹೊರಜಗತ್ತಿನೊಂದಿಗೆ ಸಂಪರ್ಕವನ್ನೇ ಕಳೆದುಕೊಂಡ ಗ್ರಾಮಕ್ಕೆ ಮೂಲಸೌಕರ್ಯ ಕೊರತೆ ಇತ್ತು. ಹಾಗಾಗಿ, ಇಡೀ ಗ್ರಾಮವನ್ನೇ ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ.
ದತ್ತು ಪಡೆಯುವ ಸಲುವಾಗಿ ಜಿಲ್ಲಾಡಳಿತ ಹಾಗೂ ಶಾಸಕರ ಅನುಮತಿ ಪಡೆದುಕೊಂಡಿರುವ ಸೊಸೈಟಿಯ ಸದಸ್ಯರು, ಆವಿಗೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಿದ್ದಾರೆ. ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸುವ ಪಣ ತೊಟ್ಟಿದ್ದಾರೆ. ಗ್ರಾಮದ ಅಭಿವೃದ್ಧಿಗೂ ಮುನ್ನ, ಅಲ್ಲಿರುವ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಮಾಡುವ ಉದ್ದೇಶ ತಂಡದ್ದು. ಶಾಲೆಗೆ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಹಾಗೂ ಶಾಲೆಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಸೊಸೈಟಿಯ ಸದಸ್ಯರು ಇಟ್ಟುಕೊಂಡಿದ್ದಾರೆ. ನಂತರದ ದಿನಗಳಲ್ಲಿ ಆವಿಗೆ ಗ್ರಾಮದ ಅಭಿವೃದ್ಧಿ ಕೆಲಸಗಳು ನಡೆಯಲಿವೆ.
ಟೀಕಾಕಾರನ್ನು ತರಾಟೆಗೆ ತೆಗೆದುಕೊಂಡ ನಟ ಕಿಚ್ಚ ಸುದೀಪ್: ಅವರು ಹೇಳಿದ್ದೇನು? ನಟ ಸುದೀಪ್ ಅವರ ಈ ಸಮಾಜಮುಖಿ ಕೆಲಸಗಳಿಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ದಿಲ್ಲದೇ ತಮ್ಮ ಚಾರಿಟೇಬಲ್ ಸೊಸೈಟಿ ಮೂಲಕ ಸುದೀಪ್ ಮಾಡುತ್ತಿರುವ ಈ ಸಮಾಜಸೇವೆಯನ್ನು ಅಭಿಮಾನಿಗಳು ಕೊಂಡಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ 'ಕಿಚ್ಚ' ಸುದೀಪ್
ಸಾಗರ ತಾಲ್ಲೂಕು ಕೇಂದ್ರದಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ, ಶರಾವತಿ ಹಿನ್ನೀರು ಪ್ರದೇಶದಲ್ಲಿರುವ ಆವಿಗೆ ಗ್ರಾಮದಲ್ಲಿ 27 ಮನೆಗಳಿದೆ. ಇಲ್ಲಿ 1ನೇ ತರಗತಿಯಿಂದ 5ನೇ ತರಗತಿಯವರೆಗೆ ಪ್ರಾಥಮಿಕ ಶಾಲೆ ಇದ್ದು, ಅಲ್ಲಿ 13 ಮಕ್ಕಳು ಕಲಿಯುತ್ತಿದ್ದಾರೆ. ಆರಂಭದಲ್ಲಿ ಈ ಊರಿನ ಶಾಲೆಯನ್ನು ದತ್ತು ಪಡೆಯಬೇಕು ಎಂಬುದು ಸೊಸೈಟಿಯ ಉದ್ದೇಶವಾಗಿತ್ತು. ಆ ಹಿನ್ನೆಲೆಯಲ್ಲಿ ಸೊಸೈಟಿಯ ಸದಸ್ಯರು ಆವಿಗೆ ಗ್ರಾಮಕ್ಕೆ ಭೇಟಿ ನೀಡಿದ್ದರು. ಆದರೆ, ಹೊರಜಗತ್ತಿನೊಂದಿಗೆ ಸಂಪರ್ಕವನ್ನೇ ಕಳೆದುಕೊಂಡ ಗ್ರಾಮಕ್ಕೆ ಮೂಲಸೌಕರ್ಯ ಕೊರತೆ ಇತ್ತು. ಹಾಗಾಗಿ, ಇಡೀ ಗ್ರಾಮವನ್ನೇ ದತ್ತು ಪಡೆಯುವ ನಿರ್ಧಾರ ಮಾಡಿದ್ದಾರೆ.
ದತ್ತು ಪಡೆಯುವ ಸಲುವಾಗಿ ಜಿಲ್ಲಾಡಳಿತ ಹಾಗೂ ಶಾಸಕರ ಅನುಮತಿ ಪಡೆದುಕೊಂಡಿರುವ ಸೊಸೈಟಿಯ ಸದಸ್ಯರು, ಆವಿಗೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಿದ್ದಾರೆ. ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸುವ ಪಣ ತೊಟ್ಟಿದ್ದಾರೆ. ಗ್ರಾಮದ ಅಭಿವೃದ್ಧಿಗೂ ಮುನ್ನ, ಅಲ್ಲಿರುವ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಮಾಡುವ ಉದ್ದೇಶ ತಂಡದ್ದು. ಶಾಲೆಗೆ ಬರುವ ಮಕ್ಕಳಿಗೆ ಸರಿಯಾದ ವಾಹನ ವ್ಯವಸ್ಥೆ ಹಾಗೂ ಶಾಲೆಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಸೊಸೈಟಿಯ ಸದಸ್ಯರು ಇಟ್ಟುಕೊಂಡಿದ್ದಾರೆ. ನಂತರದ ದಿನಗಳಲ್ಲಿ ಆವಿಗೆ ಗ್ರಾಮದ ಅಭಿವೃದ್ಧಿ ಕೆಲಸಗಳು ನಡೆಯಲಿವೆ.
ಟೀಕಾಕಾರನ್ನು ತರಾಟೆಗೆ ತೆಗೆದುಕೊಂಡ ನಟ ಕಿಚ್ಚ ಸುದೀಪ್: ಅವರು ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದ 'ಕಿಚ್ಚ' ಸುದೀಪ್