ಆ್ಯಪ್ನಗರ

PM Kisan Samman scheme : ಪಿಎಂ ಕಿಸಾನ್‌ ಸಮ್ಮಾನ್ ಯೋಜನೆಗೆ ಇ-ಕೆವೈಸಿ ಕಡ್ಡಾಯ! ನೋಂದಣಿ ವಿಧಾನ ಹೇಗೆ?

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ರೈತರು ಇ-ಕೆವೈಸಿ ಯನ್ನು ಹೇಗೆ ಮಾಡಬಹುದು. ಪೂರ್ಣ ವಿವರ ಇಲ್ಲಿದೆ.

Authored byಬಾನುಪ್ರಸಾದ ಕೆ.ಎನ್\u200c. | Vijaya Karnataka Web 24 Apr 2022, 5:03 pm

ಹೈಲೈಟ್ಸ್‌:

  • ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಗೆ ಇ-ಕೆವೈಸಿ ಕಡ್ಡಾಯ
  • ಪ್ರತಿಯೊಬ್ಬ ಫಲಾನುಭವಿಯು ಆಧಾರ್‌ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್‌ ಸಂಖ್ಯೆ ದಾಖಲಿಸಬೇಕು
  • ಇ-ಕೆವೈಸಿ ಮಾಡುವುದು ಹೇಗೆ? ಪೂರ್ಣ ವಿವರ ಇಲ್ಲಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web agriculture new
ತುಮಕೂರು: ಕೇಂದ್ರ ಸರಕಾರದ ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ತುಮಕೂರು ಜಿಲ್ಲೆಯ ಸುಮಾರು 3,35,660 ರೈತರು ನೋಂದಾಯಿಸಿಕೊಂಡಿದ್ದು, ನೋಂದಾಯಿಸದೇ ಇರುವ ಅರ್ಹ ರೈತರು ಸ್ವಯಂಘೋಷಣಾ ಪತ್ರ, ಎಲ್ಲ ಸರ್ವೆ ನಂಬರ್‌ಗಳ ಪಹಣಿ, ಆಧಾರ್‌ ಜೆರಾಕ್ಸ್‌ ಪ್ರತಿ, ಬ್ಯಾಂಕ್‌ ಪಾಸ್‌ಬುಕ್‌ ಜೆರಾಕ್ಸ್‌ ಪ್ರತಿಗಳನ್ನು ಸಂಬಂಧಪಟ್ಟ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಲು ಕೋರಲಾಗಿದೆ.
ಕೇಂದ್ರ ಸರಕಾರದ ಪಿಎಂ ಕಿಸಾನ್‌ ಯೋಜನೆಯಡಿ ಜಿಲ್ಲೆಯ ಸುಮಾರು 3,23,197 ರೈತರಿಗೆ ಈಗಾಗಲೇ ನೇರ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಈ ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರಕುತ್ತಿರುವುದನ್ನು ಖಾತ್ರಿಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ತಿಳಿಸಿದ್ದಾರೆ.

ಎರಡು ವಿಧಗಳಲ್ಲಿ ಇ-ಕೆವೈಸಿ ಮಾಡಿಸಬಹುದು
ರೈತ ಫಲಾನುಭವಿಗಳು ಇ-ಕೆವೈಸಿ ಪ್ರಕ್ರಿಯೆಯನ್ನು ಎರಡು ವಿಧಾನಗಳಲ್ಲಿ ಕೈಗೊಳ್ಳಬಹುದಾಗಿದೆ. ಇ-ಕೆವೈಸಿ ಅವಕಾಶದಡಿ ಈಗಾಗಲೇ ಪಿಎಂ ಕಿಸಾನ್‌ ಯೋಜನೆಯಡಿ ಫಲಾನುಭವಿ ಆಗಿರುವ ಪ್ರತಿಯೊಬ್ಬ ರೈತನ ಆಧಾರ್‌ ಸಂಖ್ಯೆಯನ್ನು ನಂತರ ಆಧಾರ್‌ ಸಂಖ್ಯೆಯೊಂದಿಗೆ ನೋಂದಣಿಯಾಗಿರುವ ಮೊಬೈಲ್‌ ಸಂಖ್ಯೆಯನ್ನು ದಾಖಲಿಸುವ ಮೂಲಕ ಇ-ಕೆವೈಸಿ ಮಾಡಿಸಬಹುದು. ಯಾವ ಫಲಾನುಭವಿಯ ಮೊಬೈಲ್‌ ಸಂಖ್ಯೆ ಆಧಾರ್‌ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾರ ಮೊಬೈಲ್‌ ಸಂಖ್ಯೆಗೆ ಒಟಿಪಿಯು ಸ್ವೀಕೃತವಾಗುವುದಿಲ್ಲವೋ ಅವರು ನಾಗರಿಕ ಸೇವಾ ಕೇಂದ್ರಗಳಿಗೆ ತೆರಳಿ, ಅಲ್ಲಿ ಬಯೋಮೆಟ್ರಿಕ್‌ ಆಧರಿತವಾಗಿ ಇ-ಕೆವೈಸಿ ಮಾಡಬಹುದು.

ಈ ಯೋಜನೆಯ ಪ್ರತಿ ಫಲಾನುಭವಿ ರೈತರು, ಕೇಂದ್ರ ಸರಕಾರವು ಮುಂದಿನ ಚಾತುರ್ಮಾಸಿಕದಲ್ಲಿ ಏ.22ರಿಂದ ಜು.22ರವರೆಗೆ ನೀಡುವ ಆರ್ಥಿಕ ನೆರವನ್ನು ಪಡೆಯಲು ಮೇ 22ರೊಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Minimum Support Price : ಕನಿಷ್ಠ ಬೆಂಬಲ ಬೆಲೆ ಎಂದರೇನು? ಬೆಲೆ ನಿಗದಿ ಹೆಗೆ? ಇಲ್ಲಿದೆ ಪೂರ್ಣ ವಿವರ

ಪಿಎಂ ಕಿಸಾನ್‌ ನೋಂದಣಿ ಹೇಗೆ?
  • ಪಿಎಂ ಕಿಸಾನ್‌ನ ಅಧಿಕೃತ ವೆಬ್‌ಸೈಟ್‌ ತೆರೆಯಿರಿ.
  • ಫಾರ್ಮರ್‌ ಕಾರ್ನರ್‌' ತೆರೆಯಿರಿ.
  • ನಂತರ ನ್ಯೂ ಫಾರ್ಮರ್‌ ರಿಜಿಸ್ಪ್ರೇಶನ್‌ ಕ್ಲಿಕ್ಕಿಸಿ
  • ಆಧಾರ್‌ ಸಂಖ್ಯೆಯನ್ನು ನಮೂದಿಸಿ
  • ಕ್ಯಾಪ್ಚ ಕೋಡ್‌ ನಮೂದಿಸಿ
  • ಮುಂದಿನ ಪುಟದಲ್ಲಿ ವಿವರಗಳನ್ನು ಭರ್ತಿಗೊಳಿಸಿ
  • ಬ್ಯಾಂಕ್‌ ಖಾತೆಯ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.
  • ನಂತರ ಸಬ್‌ಮಿಟ್‌ ಮಾಡಿ.

ಅಗತ್ಯ ದಾಖಲಾತಿಗಳು
  • ಆಧಾರ್ ಕಾರ್ಡ್ - ಅರ್ಜಿ ಸಲ್ಲಿಸುವ ರೈತರಿಗೆ ಆಧಾರ್ ಕಾರ್ಡ್ ಇರುವುದು ಅವಶ್ಯಕ.
  • ಆದಾಯ ದಾಖಲಾತಿ ಹಾಗೂ ಕೃಷಿ ಭೂಮಿ ವಿವರಗಳನ್ನು ನೀಡಬೇಕು.
  • ಉಳಿತಾಯ ಖಾತೆ ಅಥವಾ ಜನ್‌ - ಧನ್ ಖಾತೆ ಹೊಂದಿರುವ ಬ್ಯಾಂಕ್ ಪಾಸ್‌ಬುಕ್ ಹೊಂದಿರಬೇಕು.
  • ರೈತರು ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬೇಕು.
  • ರೇಷನ್ ಕಾರ್ಡ್ ಮತ್ತು ಎರಡು ಪಾಸ್‌ಪೋರ್ಟ್‌ ಅಳತೆಯ ಪೋಟೋಗಳು.

Kisan Credit Card Yojana : ಯಾವುದೇ ಅಡಮಾನ ಇಲ್ಲದೆ 50 ಪೈಸೆಗೂ ಕಡಿಮೆ ಬಡ್ಡಿಗೆ ₹1.6 ಲಕ್ಷದವರೆಗೆ ಸಾಲ ಲಭ್ಯ! ಅರ್ಜಿ ಸಲ್ಲಿಕೆ ಹೇಗೆ?

ಯಾರೆಲ್ಲ ಫಲಾನುಭವಿ ಆಗಬಹುದು?
ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದು. ಎರಡು ಹೆಕ್ಟೇರ್‌ವರೆಗಿನ ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.

ಹಣ ಜಮೆಯಾಗದಿದ್ದರೆ ಏನು ಮಾಡಬೇಕು?
ಒಂದು ವೇಳೆ ನಿಮ್ಮ ಖಾತೆಗೆ ಕೃಷಿ ಸಮ್ಮಾನ್‌ ನಿಧಿ ಹಣ ವರ್ಗಾವಣೆ ಆಗಿರದಿದ್ದರೆ, ಸರಕಾರಕ್ಕೆ ನೀವು ನೀಡಿರುವ ಮಾಹಿತಿಯಲ್ಲಿ ಏನಾದರೂ ಲೋಪವಿರಬಹುದು. ಅಥವಾ ನಿಮ್ಮ ಖಾತೆಯಲ್ಲಿ ಸಮಸ್ಯೆ ಇರಬಹುದು ಎಂಬುದನ್ನು ಮೊದಲು ಪರಿಶೀಲಿಸಿ. ಪಿಎಂ ಕಿಸಾನ್ ಮುಂದಿನ ಕಂತಿನ ಹಣ ಬರುವುದರೊಳಗೆ ಈ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ನೀವು ಈ ಯೋಜನೆಯ ಲಾಭ ಪಡೆಯಬಹುದು.

ಈ ತಪ್ಪುಗಳಾಗಿವೆಯೇ ಪರಿಶೀಲಿಸಿ:
ಕಿಸಾನ್‌ ಸಮ್ಮಾನ್‌ ನಿಧಿಗೆ ನೋಂದಣಿಯಾಗುವಾಗ ನೋಂದಣಿಯಾಗುವಾಗ ನೀವು ಸಲ್ಲಿಸಿರುವ ದಾಖಲೆಗಳಲ್ಲಿ ಯಾವುದೇ ಒಂದು ದಾಖಲೆಯ ಕೊರತೆಯಿದ್ದರೆ ಸಮಸ್ಯೆಯಾಗಿರುತ್ತದೆ. ಆಧಾರ್ ಸಂಖ್ಯೆ, ಖಾತೆ ಸಂಖ್ಯೆ ಅಥವಾ ಬ್ಯಾಂಕ್ ವಿವರಗಳಲ್ಲಿನ ವ್ಯತ್ಯಾಸದಿಂದಾಗಿಯೂ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಇಂತಹ ತಪ್ಪುಗಳಾಗಿದ್ದರೆ, ಕೂಡಲೇ ಸರಿಪಡಿಸಬೇಕು. ನಂತರವಷ್ಟೇ ನೀವು ಮುಂದಿನ ಕಂತನ್ನು ಪಡೆಯಬಹುದು.

Operation Green Yojana : ತರಕಾರಿ, ಹಣ್ಣು ಬೆಳೆಯುವ ರೈತರಿಗೆ ತಮ್ಮ ವೆಚ್ಚದ ಶೇ.50ರಷ್ಟು ಸಹಾಯಧನ ಲಭ್ಯ!

ನೀವಿ ನೀಡಿರುವ ವಿವರಗಳನ್ನು ನವೀಕರಿಸಿ :ಪಿಎಂ-ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಿ (https://pmkisan.gov.in/). ಇಲ್ಲಿ ಫಾರ್ಮರ್ ಕಾರ್ನರ್‌ಗೆ ಹೋಗಿ ಮತ್ತು ಎಡಿಟ್ ಟ್ಯಾಬ್‌ ಅನ್ನು ಕ್ಲಿಕ್‌ ಮಾಡಿ. ಆಧಾರ್ ವಿವರಗಳ ಆಯ್ಕೆಯನ್ನು ಕ್ಲಿಕ್ ಮಾಡಿ. ನಿಮ್ಮ ಆಧಾರ್ ಸಂಖ್ಯೆಯನ್ನು ಇಲ್ಲಿ ನಮೂದಿಸಿ. ಕ್ಯಾಪ್ಚಾ ಕೋಡ್ ಕ್ರಿಯೇಟ್‌ ಆಗುತ್ತದೆ. ನಿಗದಿತ ಸ್ಥಳದಲ್ಲಿ ಅದನ್ನು ನಮೂದಿಸಿದ ನಂತರ ಸಲ್ಲಿಸಿ.

ಆನ್‌ಲೈನ್‌ನಲ್ಲಿ ಹೆಸರು ಸರಿಪಡಿಸಿ:
ನಿಮ್ಮ ಹೆಸರು ತಪ್ಪಾಗಿರುವುದರಿಂದಲೂ ಹಣ ಜಮೆಯಾಗಿಲ್ಲದಿರುವ ಸಾಧ್ಯತೆಗಳಿವೆ. ಅಂದರೆ, ವೆಬ್‌ಸೈಟ್‌ನಲ್ಲಿ ನೀವು ನೀಡಿರುವ ಹೆಸರು ಮತ್ತು ಆಧಾರ್‌ನಲ್ಲಿ ನಿಮ್ಮ ಹೆಸರು ವಿಭಿನ್ನವಾಗಿದ್ದರೆ, ಈ ಸಮಸ್ಯೆಯಾಗುತ್ತದೆ. ನಂತರ ನೀವು ಅದನ್ನು ಆನ್‌ಲೈನ್‌ನಲ್ಲಿ ಸರಿಪಡಿಸಬಹುದು. ಬೇರೆ ಏನಾದರೂ ತಪ್ಪು ಇದ್ದರೆ, ಅದನ್ನು ನಿಮ್ಮ ಕೃಷಿ ಇಲಾಖೆ ಕಚೇರಿಯಲ್ಲಿ ಸಂಪರ್ಕಿಸಿ ಸರಿಪಡಿಸಿಕೊಳ್ಳಬಹುದು.
ಲೇಖಕರ ಬಗ್ಗೆ
ಬಾನುಪ್ರಸಾದ ಕೆ.ಎನ್\u200c.
ವಿಜಯ ಕರ್ನಾಟಕ ಡಿಜಿಟಲ್\u200c ಪತ್ರಕರ್ತ. ವಿಜ್ಞಾನ ತಂತ್ರಜ್ಞಾನ, ರಾಷ್ಟ್ರೀಯ- ಅಂತಾರಾಷ್ಟ್ರೀಯ, ಸಾಹಿತ್ಯ-ಕಲೆ, ಶಿಕ್ಷಣ, ಆಸಕ್ತಿಯ ವಿಷಯಗಳು... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ