ಆ್ಯಪ್ನಗರ

ಹಿಂದೂ ರಾಜ್ಯವಾಗಿಸಲು ಬಿಡುವುದಿಲ್ಲ: ದೇವೇಗೌಡ

ಈ ರಾಜ್ಯವನ್ನು ಹಿಂದೂ ರಾಜ್ಯವನ್ನಾಗಿ ಮಾಡಲು ನಾನು ಎಂದೂ ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

Vijaya Karnataka 16 Sep 2017, 9:34 am
ಶಹಾಪುರ: ಈ ರಾಜ್ಯವನ್ನು ಹಿಂದೂ ರಾಜ್ಯವನ್ನಾಗಿ ಮಾಡಲು ನಾನು ಎಂದೂ ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
Vijaya Karnataka Web hindu state deve gowda
ಹಿಂದೂ ರಾಜ್ಯವಾಗಿಸಲು ಬಿಡುವುದಿಲ್ಲ: ದೇವೇಗೌಡ


ನಗರದ ಸರಕಾರಿ ಡಿಗ್ರಿ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್‌ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿ, ‘‘ಕರ್ನಾಟಕ ರಾಜ್ಯದಲ್ಲಿ ಜನತೆ ಸುಖ ಶಾಂತಿಯಿಂದ ನೆಮ್ಮದಿಯ ಬದುಕು ಸಾಗಿಸಲು ಬಿಡಿ,’’ ಎಂದು ಹೇಳಿದರು.

ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್‌ ಸರಕಾರಗಳ ಅರಾಜಕತೆಯಿಂದ ಜನತೆ ನೆಮ್ಮದಿ ಕಾಣದಂತಾಗಿದೆ. ಕೋಮು ಗಲಭೆಯ ತಾಣವಾಗಿದ್ದ ಈದ್ಗಾ ಮೈದಾನ ಸಮಸ್ಯೆ ಬಗೆಹರಿಸಿದ ನಂತರ ಇಂದು ಲಕ್ಷಾಂತರ ಮುಸ್ಲಿಂ ಬಂಧುಗಳು ಪ್ರಾರ್ಥನೆ ಮಾಡುವಂತಾಗಿದೆ. ಇದನ್ನು ಎರಡೂ ಸರಕಾರಗಳು ಮಾದರಿಯಾಗಿ ಇಟ್ಟುಕೊಳ್ಳಬೇಕು,’’ ಎಂದು ಹೇಳಿದರು.

‘ರಾಜ್ಯದಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೂ ಆ ರೈತರ ಸಾಲವನ್ನು ರಾಜ್ಯ ಮತ್ತು ಕೇಂದ್ರ ಸರಕಾರಗಳು ಸೇರಿಕೊಂಡು ಸಂಪೂರ್ಣ ಮನ್ನಾ ಮಾಡುವಲ್ಲಿ ವಿಫಲವಾಗಿವೆ. ನಾನು ಪ್ರಧಾನಿಯಾಗಿದ್ದ ಅವಧಿಯಲ್ಲಿ ಒಬ್ಬ ರೈತನೂ ಆತ್ಮಹತ್ಯೆ ಮಾಡಿಕೊಂಡಿರಲಿಲ್ಲ. ಈ ಸರಕಾರಗಳಿಗೆ ನಾಚಿಕೆಯಾಗಬೇಕು,’’ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ