ಕರ್ನಾಟಕ ಸರ್ಕಾರ ಇತ್ತಿಚಿನ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದೆ. ಸರ್ಕಾರ ಬಡ ಮಕ್ಕಳು, ಹಿಂದುಳಿದ ವರ್ಗದ ಮಕ್ಕಳು, ಮತ್ತು ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು, ಮತ್ತು ಅವರು ಕೂಡಾ ಶಿಕ್ಷಣವನ್ನು ಪಡೆಯಬೇಕು ಎನ್ನುವ ದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದವರನ್ನ ಅಲ್ಪ ಸಂಖ್ಯಾತರು ಎಂದು ಗುರಿತಿಸಲಾಗಿದೆ. ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಅವರಿಗಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಹಲವು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೆಲವು ಯೋಜನೆಗಳ ನೀಡುತ್ತಿದ್ದು, ಆ ಯೋಜನೆಗಳ ಪಟ್ಟಿ ಈ ಕೆಳಗಿನಂತಿವೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡುತ್ತದೆ. 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಈ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಶಿಕ್ಷಕರು, ಅವರ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಸಿಗುವ ಸೌಲಭ್ಯಗಳಾವವು..ಇಲ್ಲಿದೆ ಮಾಹಿತಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡುತ್ತದೆ. ಪಿಯುಸಿ ಮತ್ತು ಪಿಯುಸಿ ನಂತರದ ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವೃತ್ತಿಪರ ಕೋರ್ಸ್ಗಳು ಮತ್ತು ತಾಂತ್ರಿಕ ಕೋರ್ಸ್ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಬಹುದಾಗಿದೆ.
ಕಾಲೇಜು ಶುಲ್ಕ ಮರುಪಾವತಿ
ಪೊಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಮ್ ಮೀನ್ಸ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾಲೇಜು ಶುಲ್ಕ ಮರುಪಾವತಿ ಮಾಡಲಾಗುತ್ತದೆ.
ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ : ವಿದ್ಯಾರ್ಥಿಗಳು ಈ ಯೋಜನೆ ಪಡೆಯುದು ಹೇಗೆ..? ಇಲ್ಲಿದೆ ಮಾಹಿತಿ
ವಿದ್ಯಾಸಿರಿ
ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿದ್ಯಾ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಅಲ್ಪಸಂಖ್ಯಾತ ಮೆಟ್ರಿಕ್ (ಎಸ್ಎಸ್ಎಲ್ಸಿ ನಂತರ ) ನಂತರದ ವಿದ್ಯಾರ್ಥಿಗಳಿಗಾಗಿಯೇ ಈ ಯೋಜನೆ ಜಾರಿಗೆ ತಂದಿದೆ. ಮನೆಯಿಂದ ಕಾಲೇಜಿಗೆ ಐದು ಕಿ.ಮೀ. ಅಥವಾ ಅದಕ್ಕಿಂತಲೂ ಹೆಚ್ಚಿನ ದೂರ ಪ್ರಯಾಣ ಮಾಡುವ ಅಲ್ಪ ಸಂಖ್ಯಾತ ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯಡಿ ಮಾಸಿಕ 1500 ರೂ. ಪಡೆಯಬಹುದಾಗಿದೆ.
ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಫ್
ವಿಶ್ವ ವಿದ್ಯಾಲಯಗಳಲ್ಲಿ ಪಿಹೆಚ್ಡಿ ವ್ಯಾಸಂಗ ಮಾಡುವ ಅಲ್ಪ ಸಂಖ್ಯಾತರ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೂರು ವರ್ಷಕ್ಕೆ ಹಾಗೂ ಎಂ ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಸರ್ಕಾರದಿಂದ 25,000 ರೂ. ಗಳನ್ನು ನೀಡಲಾಗುತ್ತದೆ. ಪ್ರತಿ ವರ್ಷ 10,000 ರೂ. ಗಳನ್ನು ನಿರ್ವಹಣಾ ವೆಚ್ಚವನ್ನು ಫೆಲೋಶಿಫ್ ಮೂಲಕ ನೀಡಲಾಗುತ್ತದೆ.
ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಅನುದಾನ
ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ನೀಡಲಾಗುತ್ತದೆ. ಪ್ರತಿ ವರ್ಷ ಕೋರ್ಸ್ ಮುಗಿಯುವ ವರೆಗೆ 35,000 ರೂ . ಅನುಧಾನ ನೀಡಲಾಗುತ್ತದೆ. ಈ ಯೋಜನೆಗಳನ್ನು ಪಡೆಯಲು ಕೆಲವು ಷರತ್ತುಗಳಿದ್ದು ಅವುಗಳನ್ನು ನೀವು ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ನೋಡಬಹುದು.
ಎಸ್ಎಸ್ಎಲ್ಸಿ ನಂತರ ಮುಂದೇನು..? ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ.. ಇಲ್ಲಿದೆ ಉತ್ತರ
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಹೊರದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ತೆರಳಿದರೆ ಅವರಿಗೆ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸ್ನಾತಕೋತ್ತರ, ಪಿಹೆಚ್ಡಿ ಮತ್ತು ಡೆಂಟಲ್ ಕೋರ್ಸ್ ಸೇರಿದಂತೆ ಮುಂತಾದ ಕೋರ್ಸ್ಗಳನ್ನು ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿವೇತನ ನೀಡಲಾಗುತ್ತದೆ.
6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವಂತಹ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ ಗರಿಷ್ಠ 20 ಲಕ್ಷದ ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. 6 ಲಕ್ಷದಿಂದ 15 ಲಕ್ಷದ ವರೆಗೆ ಆದಾಯ ಇರುವ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 10 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುವುದು. 1 ಅಥವಾ 2 ವರ್ಷಗಳ ಅವಧಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ವಿದ್ಯಾರ್ಥಿಗಳ ವ್ಯಾಸಂಗದ ಅವಧಿಯ ಮೇರೆಗೆ ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗುವುದ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಸಮುದಾಯದವರನ್ನ ಅಲ್ಪ ಸಂಖ್ಯಾತರು ಎಂದು ಗುರಿತಿಸಲಾಗಿದೆ. ಅಲ್ಪ ಸಂಖ್ಯಾತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಅವರಿಗಾಗಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೂಲಕ ಹಲವು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಸರ್ಕಾರದಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೆಲವು ಯೋಜನೆಗಳ ನೀಡುತ್ತಿದ್ದು, ಆ ಯೋಜನೆಗಳ ಪಟ್ಟಿ ಈ ಕೆಳಗಿನಂತಿವೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡುತ್ತದೆ. 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಈ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಶಿಕ್ಷಕರು, ಅವರ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಸಿಗುವ ಸೌಲಭ್ಯಗಳಾವವು..ಇಲ್ಲಿದೆ ಮಾಹಿತಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡುತ್ತದೆ. ಪಿಯುಸಿ ಮತ್ತು ಪಿಯುಸಿ ನಂತರದ ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ಮೆರಿಟ್ ಕಮ್ ಮೀನ್ಸ್ ವಿದ್ಯಾರ್ಥಿವೇತನ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವೃತ್ತಿಪರ ಕೋರ್ಸ್ಗಳು ಮತ್ತು ತಾಂತ್ರಿಕ ಕೋರ್ಸ್ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನವನ್ನು ಪಡೆಯಬಹುದಾಗಿದೆ.
ಕಾಲೇಜು ಶುಲ್ಕ ಮರುಪಾವತಿ
ಪೊಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಮ್ ಮೀನ್ಸ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾಲೇಜು ಶುಲ್ಕ ಮರುಪಾವತಿ ಮಾಡಲಾಗುತ್ತದೆ.
ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ : ವಿದ್ಯಾರ್ಥಿಗಳು ಈ ಯೋಜನೆ ಪಡೆಯುದು ಹೇಗೆ..? ಇಲ್ಲಿದೆ ಮಾಹಿತಿ
ವಿದ್ಯಾಸಿರಿ
ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿದ್ಯಾ ಸಿರಿ ಯೋಜನೆಯನ್ನು ಜಾರಿಗೆ ತಂದಿದೆ. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಅಲ್ಪಸಂಖ್ಯಾತ ಮೆಟ್ರಿಕ್ (ಎಸ್ಎಸ್ಎಲ್ಸಿ ನಂತರ ) ನಂತರದ ವಿದ್ಯಾರ್ಥಿಗಳಿಗಾಗಿಯೇ ಈ ಯೋಜನೆ ಜಾರಿಗೆ ತಂದಿದೆ. ಮನೆಯಿಂದ ಕಾಲೇಜಿಗೆ ಐದು ಕಿ.ಮೀ. ಅಥವಾ ಅದಕ್ಕಿಂತಲೂ ಹೆಚ್ಚಿನ ದೂರ ಪ್ರಯಾಣ ಮಾಡುವ ಅಲ್ಪ ಸಂಖ್ಯಾತ ಕಾಲೇಜು ವಿದ್ಯಾರ್ಥಿಗಳು ಈ ಯೋಜನೆಯಡಿ ಮಾಸಿಕ 1500 ರೂ. ಪಡೆಯಬಹುದಾಗಿದೆ.
ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಫ್
ವಿಶ್ವ ವಿದ್ಯಾಲಯಗಳಲ್ಲಿ ಪಿಹೆಚ್ಡಿ ವ್ಯಾಸಂಗ ಮಾಡುವ ಅಲ್ಪ ಸಂಖ್ಯಾತರ ಸಮುದಾಯಗಳ ವಿದ್ಯಾರ್ಥಿಗಳಿಗೆ ಮೂರು ವರ್ಷಕ್ಕೆ ಹಾಗೂ ಎಂ ಫಿಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ಸರ್ಕಾರದಿಂದ 25,000 ರೂ. ಗಳನ್ನು ನೀಡಲಾಗುತ್ತದೆ. ಪ್ರತಿ ವರ್ಷ 10,000 ರೂ. ಗಳನ್ನು ನಿರ್ವಹಣಾ ವೆಚ್ಚವನ್ನು ಫೆಲೋಶಿಫ್ ಮೂಲಕ ನೀಡಲಾಗುತ್ತದೆ.
ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳಿಗೆ ಅನುದಾನ
ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಸೌಲಭ್ಯ ನೀಡಲಾಗುತ್ತದೆ. ಪ್ರತಿ ವರ್ಷ ಕೋರ್ಸ್ ಮುಗಿಯುವ ವರೆಗೆ 35,000 ರೂ . ಅನುಧಾನ ನೀಡಲಾಗುತ್ತದೆ. ಈ ಯೋಜನೆಗಳನ್ನು ಪಡೆಯಲು ಕೆಲವು ಷರತ್ತುಗಳಿದ್ದು ಅವುಗಳನ್ನು ನೀವು ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ನೋಡಬಹುದು.
ಎಸ್ಎಸ್ಎಲ್ಸಿ ನಂತರ ಮುಂದೇನು..? ಯಾವ ಕೋರ್ಸ್ ಆಯ್ಕೆ ಮಾಡಿದರೆ ಉತ್ತಮ.. ಇಲ್ಲಿದೆ ಉತ್ತರ
ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ
ರಾಜ್ಯದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಹೊರದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ತೆರಳಿದರೆ ಅವರಿಗೆ ಸರ್ಕಾರದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಸ್ನಾತಕೋತ್ತರ, ಪಿಹೆಚ್ಡಿ ಮತ್ತು ಡೆಂಟಲ್ ಕೋರ್ಸ್ ಸೇರಿದಂತೆ ಮುಂತಾದ ಕೋರ್ಸ್ಗಳನ್ನು ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿವೇತನ ನೀಡಲಾಗುತ್ತದೆ.
6 ಲಕ್ಷಕ್ಕಿಂತ ಕಡಿಮೆ ಆದಾಯ ಇರುವಂತಹ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ ಗರಿಷ್ಠ 20 ಲಕ್ಷದ ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. 6 ಲಕ್ಷದಿಂದ 15 ಲಕ್ಷದ ವರೆಗೆ ಆದಾಯ ಇರುವ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 10 ಲಕ್ಷ ವಿದ್ಯಾರ್ಥಿವೇತನವನ್ನು ನೀಡಲಾಗುವುದು. 1 ಅಥವಾ 2 ವರ್ಷಗಳ ಅವಧಿಗೆ ಮಾತ್ರ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ವಿದ್ಯಾರ್ಥಿಗಳ ವ್ಯಾಸಂಗದ ಅವಧಿಯ ಮೇರೆಗೆ ವಿದ್ಯಾರ್ಥಿವೇತನವನ್ನು ನಿಗದಿಪಡಿಸಲಾಗುವುದ.