ಆ್ಯಪ್ನಗರ

ನಿಧಾನವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಚ್‌ಡಿಡಿ

ಆಪರೇಷನ್ ಕಮಲದಿಂದ ನಮಗೆ ಅನುಭವ ಆಗಿದೆ. ಅದಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು‌ ನಿಧಾನವಾಗಿ ಬಿಡುಗಡೆ ಮಾಡಲು‌ ತಿಳಿಸಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಹೇಳಿದ್ದಾರೆ.

Vijaya Karnataka Web 6 Jul 2017, 5:35 pm
ಬೆಂಗಳೂರು: ಆಪರೇಷನ್ ಕಮಲದಿಂದ ನಮಗೆ ಅನುಭವ ಆಗಿದೆ. ಅದಕ್ಕೆ ಅಭ್ಯರ್ಥಿಗಳ ಪಟ್ಟಿಯನ್ನು‌ ನಿಧಾನವಾಗಿ ಬಿಡುಗಡೆ ಮಾಡಲು‌ ತಿಳಿಸಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ದೇವೇಗೌಡ ಹೇಳಿದ್ದಾರೆ.
Vijaya Karnataka Web jds candidates list release issue
ನಿಧಾನವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಎಚ್‌ಡಿಡಿ


ಹಿಂದೆ ನಮ್ಮ ಏಳೆಂಟು‌ ಅಭ್ಯರ್ಥಿಗಳನ್ನು ಆಪರೇಷನ್ ಮಾಡಿದ್ದರು. ಹೀಗಾಗಿ ಪಟ್ಟಿ ರಿಲೀಸ್ ಮಾಡುವುದು ಬೇಡ ಎಂದಿದ್ದೇನೆ. ನಮ್ಮಲ್ಲಿ‌ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಒಂದೆರಡು ಜಿಲ್ಲೆ ಬಿಟ್ಟು ಎಲ್ಲಾ ಜಿಲ್ಲೆಗಳಲ್ಲೂ ನಮ್ಮ ಪಕ್ಷಕ್ಕೆ ಪ್ರಬಲ ಅಭ್ಯರ್ಥಿಗಳು ಇದ್ದಾರೆ ಎಂದರು.

ಜೆಡಿಎಸ್ ಶಾಸಕಾಂಗ ಪಕ್ಷ ಮತ್ತು ಕೋರ್ ಕಮಿಟಿ ಸಭೆಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಜೆಡಿಎಸ್ ಕಾರ್ಯಾಧ್ಯಕ್ಷ ಬಸವರಾಜ ಹೊರಟ್ಟಿ, ಮಾಜಿ ಸಚಿವ ವಿಶ್ವನಾಥ್, ಸಂಸದ ಪುಟ್ಟರಾಜು, ಶಾಸಕ ಮಧುಬಂಗಾರಪ್ಪ, ಬಿ.ಬಿ.ನಿಂಗಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರತಿ ತಿಂಗಳು ರೈತ, ಮಹಿಳಾ, ಯುವಕ, ಅಲ್ಪಸಂಖ್ಯಾತ, ಒಬಿಸಿ, ಪರಿಶಿಷ್ಟ ಸಮಾವೇಶ ಆಯೋಜಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯ ಘಟಕಕ್ಕೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಗುವುದು.
ಶಾಂತಿ ಕಾಪಾಡಲು ಬಂಟ್ವಾಳ, ಮಂಗಳೂರಿನಲ್ಲಿ ಪಾದಯಾತ್ರೆ ನಡೆಸಲು ನಿರ್ಣಯಿಸಿರುವುದಾಗಿ ದೇವೇಗೌಡ ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ