ಆ್ಯಪ್ನಗರ

ಎಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌ನಲ್ಲಿ ಜಾಬ್ಸ್‌: ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

ಎಂಜಿನಿಯರಿಂಗ್‌ ಕನ್ಸಲ್ಟೆನ್ಸಿ ಕಂಪನಿ ಎಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌ ಸೀನಿಯರ್‌ ಮ್ಯಾನೇಜರ್‌ ಮತ್ತು ಎಚ್‌ಆರ್‌ ಆಫೀಸರ್‌ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ.

Vijaya Karnataka Web 25 May 2019, 5:18 pm
ದೇಶದ ಪ್ರಮುಖ ಎಂಜಿನಿಯರಿಂಗ್‌ ಕನ್ಸಲ್ಟೆನ್ಸಿ ಕಂಪನಿ ಎಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್‌ ಸೀನಿಯರ್‌ ಮ್ಯಾನೇಜರ್‌ ಮತ್ತು ಎಚ್‌ಆರ್‌ ಆಫೀಸರ್‌ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಈಗಾಗಲೇ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನಾಳೆ (ಮೇ 26) ಕೊನೆಯ ದಿನವಾಗಿದೆ.
Vijaya Karnataka Web job2


ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವೀಧರರಾಗಿದ್ದು, ಕನಿಷ್ಠ 12 ವರ್ಷ ಲಾ ಎಕ್ಸಿಕ್ಯುಟಿವ್‌ ಆಗಿ ಕಾರ್ಯನಿರ್ವಹಿಸಿರಬೇಕು. ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ.

ಎಚ್‌ಆರ್‌ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಂಬಿಎ ಪದವಿ ಜೊತೆಗೆ ಎಚ್‌ಆರ್‌/ಪರ್ಸೋನೆಲ್‌ ಮ್ಯಾನೇಜ್‌ಮೆಂಟ್‌ನಲ್ಲಿ ತಜ್ಞತೆ ಪಡೆದಿರಬೇಕು. ಕನಿಷ್ಠ ಒಂದು ವರ್ಷ ಎಕ್ಸಿಕ್ಯುಟಿವ್‌/ಆಫೀಸರ್‌(ಎಚ್‌ಆರ್‌) ಆಗಿ ಕಾರ್ಯನಿರ್ವಹಿಸಿರಬೇಕು. ಗರಿಷ್ಠ ವಯಸ್ಸು 28 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 26 ಕೊನೆಯ ದಿನವಾಗಿದೆ. ದಿಲ್ಲಿಯಲ್ಲಿ ಕಾರ್ಯನಿರ್ವಹಿಸಲು ಸಿದ್ಧರಾಗಿರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಹೆಚ್ಚಿನ ವಿವರಗಳಿಗೆ: ಅಧಿಕೃತ ವೆಬ್‌ಸೈಟ್‌ ನೋಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ