ಆ್ಯಪ್ನಗರ

ನೈವೇಲಿ ಲಿಗ್ನೈಟ್ ಕಾರ್ಪೋರೇಷನ್'ನಿಂದ ವಿವಿಧ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

NLC Job Notification 2023: ಎನ್‌ಎಲ್‌ಸಿ ಇಂಡಿಯಾ ಲಿಮಿಟೆಡ್ ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಫಿಟ್ಟರ್, ಇಲೆಕ್ಟ್ರೀಷಿಯನ್, ವೆಲ್ಡರ್, ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಆಸಕ್ತರು ಕೊನೆ ಕ್ಷಣದ ವರೆಗೆ ಕಾಯದೇ ಬೇಗ ಬೇಗ ಅರ್ಜಿ ಹಾಕಿರಿ.

Authored byಸುನೀಲ್ ಬಿ ಎನ್ | Vijaya Karnataka Web 24 May 2023, 10:13 am

ಹೈಲೈಟ್ಸ್‌:

  • ಎನ್‌ಎಲ್‌ಸಿ ಇಂಡಿಯಾದಿಂದ ವಿವಿಧ ಹುದ್ದೆಗಳ ನೇಮಕ.
  • 85 ಹುದ್ದೆಗಳನ್ನು ವಿವಿಧ ಟ್ರೇಡ್‌ ನಲ್ಲಿ ಭರ್ತಿ ಮಾಡಲಾಗುತ್ತದೆ.
  • ಅರ್ಜಿ ಸಲ್ಲಿಸಲು ಕಂಪ್ಲೀಟ್ ಡೀಟೇಲ್ಸ್‌ ಇಲ್ಲಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web neyveli lignite corporation india limited recruitment 2023
nlc india ltd recruitment 2023
ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ವಿವಿಧ ಟ್ರೇಡ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಮೇ 24 ರಿಂದ ಜೂನ್ 09 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 14 ವರ್ಷ ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಹುದ್ದೆಗಳ ವಿವರ
ಫಿಟ್ಟರ್ ಫ್ರೆಶರ್ : 20
ಇಲೆಕ್ಟ್ರೀಷಿಯನ್ ಫ್ರೆಶರ್ : 20
ವೆಲ್ಡರ್ ಫ್ರೆಶರ್ : 20
ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪೆಥಾಲಜಿ : 15
ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ : 10


ವಿದ್ಯಾರ್ಹತೆ
ಫಿಟ್ಟರ್ ಫ್ರೆಶರ್ : ಎಸ್‌ಎಸ್‌ಎಲ್‌ಸಿ
ಇಲೆಕ್ಟ್ರೀಷಿಯನ್ ಫ್ರೆಶರ್ : ಎಸ್‌ಎಸ್‌ಎಲ್‌ಸಿ
ವೆಲ್ಡರ್ ಫ್ರೆಶರ್ : ಎಸ್‌ಎಸ್‌ಎಲ್‌ಸಿ
ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪೆಥಾಲಜಿ : 12ನೇ ತರಗತಿ
ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ : 12ನೇ ತರಗತಿ

10ನೇ ತರಗತಿ ಪಾಸಾದವರಿಗೆ ಬೆಸ್ಟ್‌ ಆಫ್‌ಲೈನ್‌ ಪಾರ್ಟ್‌ಟೈಮ್‌ ಉದ್ಯೋಗಾವಕಾಶಗಳಿವು..

ವಯಸ್ಸಿನ ಅರ್ಹತೆ : ಕನಿಷ್ಠ 14 ವರ್ಷ ಆಗಿರಬೇಕು. ಗರಿಷ್ಠ ವರ್ಗಾವಾರು ಆಧಾರದಲ್ಲಿ ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 24-05-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 09-06-2023 ರ ಸಂಜೆ 05 ಗಂಟೆವರೆಗೆ.
ಹಾರ್ಡ್‌ಕಾಪಿ ಸ್ವೀಕಾರ ಮಾಡಲು ಕೊನೆ ದಿನಾಂಕ : 15-06-2023

ಮಾಸಿಕ ಸಂಭಾವನೆ : Rs.8,766-10,019.

ಭಾರತ ನೌಕಾಪಡೆಯಲ್ಲಿ ಚಾರ್ಜ್‌ಮನ್ ಹುದ್ದೆಗಳ ನೇಮಕ: ಡಿಪ್ಲೊಮ, ಪದವಿ ಪಾಸಾದವರಿಗೆ ಭರ್ಜರಿ ಆಫರ್

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು / ಮಾಹಿತಿಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಆಧಾರ್ ಕಾರ್ಡ್
ದ್ವಿತೀಯ ಪಿಯುಸಿ ಅಂಕಪಟ್ಟಿ
ಹೆಸರು
ವೈಯಕ್ತಿಕ ವಿವರಗಳು
ಇ-ಮೇಲ್ ವಿಳಾಸ
ಮೊಬೈಲ್ ನಂಬರ್
ಇತರೆ ಮಾಹಿತಿಗಳು

ಸದ್ಯದಲ್ಲೇ ಬಿಡುಗಡೆ ಆಗಲಿರುವ ಕರ್ನಾಟಕ ಸರ್ಕಾರಿ ಹುದ್ದೆಗಳ ಅಧಿಸೂಚನೆಗಳಿವು..
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ