ಆ್ಯಪ್ನಗರ

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕ: ಪ್ರವೇಶ ಪತ್ರ ಲಭ್ಯ

ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಯೂಸರ್‌ ನೇಮ್‌ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್‌ ಆಗಿ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷೆಯ ಸಮಯದ ಮಾಹಿತಿಯನ್ನು ನೀಡಲಾಗಿರುತ್ತದೆ. ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

Vijaya Karnataka Web 30 May 2019, 11:57 pm
ಬೆಂಗಳೂರು: ರಾಜ್ಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ಕರ್ನಾಟಕದ ಅಭ್ಯರ್ಥಿಗಳಿಗೆ ಜೂನ್‌ 1 ಮತ್ತು 2 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರವನ್ನು ಶಿಕ್ಷಣ ಇಲಾಖೆಯ ವೆಬ್‌ನಲ್ಲಿ ಒದಗಿಸಲಾಗಿದೆ.
Vijaya Karnataka Web job2


ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಯೂಸರ್‌ ನೇಮ್‌ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್‌ ಆಗಿ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷಾ ಕೇಂದ್ರ ಮತ್ತು ಪರೀಕ್ಷೆಯ ಸಮಯದ ಮಾಹಿತಿಯನ್ನು ನೀಡಲಾಗಿರುತ್ತದೆ. ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹೈದರಾಬಾದ್‌ ಕರ್ನಾಟಕ ಶೇ. 80 ಸ್ಥಳೀಯ ವೃಂದದ ಹುದ್ದೆಗಳಿಗೆ ಮತ್ತು ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಹೈದರಾಬಾದ್‌ ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದ ಶೇ.8 ಹುದ್ದೆಗಳಿಗೆ (ಪರೀಕ್ಷೆ-1) ಈ ಪರೀಕ್ಷೆ ನಡೆಯುತ್ತಿದೆ. ಹೈದರಾಬಾದ್‌ ಕರ್ನಾಟಕ ಶೇ. 20 ಮಿಕ್ಕುಳಿದ ಹುದ್ದೆಗೆಳಿಗೆ ಮತ್ತು ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯ ಹೈದರಾಬಾದ್‌ ಕರ್ನಾಟಕ ರಾಜ್ಯ ಮಟ್ಟದ ಸ್ಥಳೀಯ ವೃಂದದ ಶೇ.8 ಹೊರತುಪಡಿಸಿ ಶೇ.92 ಹುದ್ದೆಗಳಿಗೆ ಮತ್ತು ಇತರೆ ಜಿಲ್ಲೆಗಳ ಶೇ.100 ಹುದ್ದೆಗಳಿಗೆ ಈಗಾಗಲೇ ಪರೀಕ್ಷೆ ನಡೆದಿದೆ.

ದಿನಾಂಕ ಬದಲಿಲ್ಲ: ಯುಪಿಎಸ್‌ಸಿಯು ನಾಗರಿಕ ಸೇವಾ ಹುದ್ದೆಗಳಿಗೆ (ಐಎಎಸ್‌-ಐಎಫ್‌ಎಸ್‌) ಜೂನ್‌ 2ರಂದು ಪೂರ್ವಭಾವಿ ಪರೀಕ್ಷೆ ನಡೆಸುವುದಾಗಿ ಈಗಾಗಲೇ ಪ್ರಕಟಿಸಿದೆ. ಅದೇ ದಿನ ಶಿಕ್ಷಕರ ನೇಮಕಕ್ಕೂ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಕೆಲ ಅಭ್ಯರ್ಥಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಇದಕ್ಕೆ ಮನ್ನಣೆ ನೀಡದೆ ನಿಗದಿಯಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ನೋಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ