ಆ್ಯಪ್ನಗರ

ಗ್ರಾಮ ಸಹಾಯಕ ಹುದ್ದೆಗಳ ನೇಮಕ: ಜೂ.30 ರೊಳಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನಲ್ಲಿನ ಅಗತ್ಯ ಇರುವ ಗ್ರಾಮ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅಪ್ಲಿಕೇಶನ್‌ ಸಲ್ಲಿಸಬಹುದು.

Vijaya Karnataka Web 23 Jun 2021, 4:28 pm

ಹೈಲೈಟ್ಸ್‌:

  • ವಿಲೇಜ್‌ ಅಸಿಸ್ಟಂಟ್‌ ಹುದ್ದೆಗೆ ಅರ್ಜಿ ಆಹ್ವಾನ.
  • ಒಟ್ಟು 6 ಹುದ್ದೆಗಳ ಭರ್ತಿ.
  • ಅರ್ಜಿಗೆ ಜೂ.30 ಕೊನೆ ದಿನ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web chikkamagaluru village assistant recruitment 2021
chikkamagaluru village assistant recruitment 2021
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನಲ್ಲಿನ ಅಗತ್ಯ ಇರುವ ಗ್ರಾಮ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು.

ಕಸಬಾ ಹೋಬಳಿಯ ಬಡಗಬೈಲು ಮತ್ತು ಕಡಹಿನಬೈಲು ವೃತ್ತ ಹಾಗೂ ಬಾಳೆಹೊನ್ನೂರು ಹೋಬಳಿಯ ಮೇಗರಮಕ್ಕಿ, ಬಾಳೆ, ಕಾನೂರು, ಕಟ್ಟಿನಮನೆ ಕಂದಾಯ ವೃತ್ತಗಳಲ್ಲಿ ಒಟ್ಟು 6 ಗ್ರಾಮ ಸಹಾಯಕರ ಹುದ್ದೆಗಳು ಖಾಲಿ ಇವೆ ಎಂದು ನೇಮಕ ಪ್ರಕಟಣೆ ತಿಳಿಸಿದೆ. ಓದಲು ಬರೆಯಲು ಬರುವಂತಹ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 25 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಪಾರ್ಟ್‌ಟೈಮ್‌ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಜೂನ್ 30, 2021 ಕೊನೆ ದಿನವಾಗಿದೆ.

ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ, ಆಯ್ಕೆಪ್ರಕ್ರಿಯೆ, ವೇತನ ಮತ್ತು ಇತರೆ ಹೆಚ್ಚಿನ ಮಾಹಿತಿಗಾಗಿ ನರಸಿಂಹಾರಾಜಪುರ ತಾಲ್ಲೂಕು ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ನರಸಿಂಹಾರಾಜಪುರ ತಾಲ್ಲೂಕಿನ ತಹಸೀಲ್ದಾರ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

MGNREGA ಯೋಜನೆಯಡಿ ಐಇಸಿ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವಾಗ ಕೆಳಗಿನ ದಾಖಲೆಗಳನ್ನು ಲಗತ್ತಿಸಬೇಕು

- ವಿದ್ಯಾರ್ಹತೆ ಪ್ರಮಾಣ ಪತ್ರಗಳು.

- ಕಾರ್ಯಾನುಭವ ಇದ್ದಲ್ಲಿ ಪ್ರಮಾಣ ಪತ್ರಗಳು.

- ಆಧಾರ್‌ಕಾರ್ಡ್‌

- ಇತರೆ ಅಗತ್ಯ ದಾಖಲೆಗಳು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ