ಆ್ಯಪ್ನಗರ

ರಾಜ್ಯದ 9 ಜಿಲ್ಲೆಗಳಲ್ಲಿ ನರ್ಸ್‌ ಹುದ್ದೆಗಳ ನೇಮಕ: 522 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಶುಶ್ರೂಷಕಿ (MLHP) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದವಗಿರಿ, ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ಈ ಕೆಳಗಿನಂತಿದೆ.

Vijaya Karnataka Web 19 Nov 2019, 1:27 pm
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಮಧ್ಯಮ ಹಂತದ ಆರೋಗ್ಯ ಪೂರೈಕೆದಾರ ಶುಶ್ರೂಷಕಿ (MLHP) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದವಗಿರಿ, ಕಲಬುರ್ಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗ್ಗೆ ಹೆಚ್ಚಿನ ವಿವರ ಈ ಕೆಳಗಿನಂತಿದೆ.
Vijaya Karnataka Web applications invited for 2019 nurse posts under national health mission for various districts in karnataka
ರಾಜ್ಯದ 9 ಜಿಲ್ಲೆಗಳಲ್ಲಿ ನರ್ಸ್‌ ಹುದ್ದೆಗಳ ನೇಮಕ: 522 ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ


ಹುದ್ದೆಗಳ ವಿವರ

ಒಟ್ಟು ಹುದ್ದೆಗಳ ಸಂಖ್ಯೆ : 552

ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ : 18-11-2019

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 10-12-2019

ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ : 21-12-2019

ಮೂಲ ದಾಖಲೆಗಳ ಪರಿಶೀಲನೆ ದಿನಾಂಕ: 26-12-2019

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಚಿತ್ರದುರ್ಗದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ

ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್/ ಪೋಸ್ಟ್‌ ಬಿಎಸ್ಸಿ ನರ್ಸಿಂಗ್ ಜೊತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್ K.N.C/I.N.C ನಲ್ಲಿ ನೋಂದಣಿ ಹೊಂದಿರಬೇಕು. ಕನ್ನಡ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಪ್ರಾವಿಣ್ಯತೆ ಹೊಂದಿರಬೇಕು.

BWSSB: ಬಿ, ಸಿ ದರ್ಜೆ ಹುದ್ದೆಗಳ ನೇಮಕ.. ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಮಾಸಿಕ ಸಂಬಳ

ಹುದ್ದೆಗೆ ನೇಮಕಗೊಂಡವರಿಗೆ ಮಾಸಿಕ ರೂ.24,200 ಸಂಭಾವನೆ ನೀಡಲಾಗುತ್ತದೆ. ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ನೇಮಕಗೊಂಡವರಿಗೆ ರೂ.22,000 ನೀಡಲಾಗುತ್ತದೆ. ಜೊತೆಗೆ ಕಾರ್ಯಕ್ಷಮತೆ ಆಧಾರದ ಮೇಲೆ ಮತ್ತು ಇನ್ಸೆಂಟಿವ್ ಜತೆಗೆ ಮಾಸಿಕವಾಗಿ ಇತರೆ ಹೆಚ್ಚಿನ ಹಣ ಗಳಿಸಬಹುದು.

KSRP ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್‌ ಪ್ರಕಟ

ವಯೋಮಿತಿ

ವರ್ಗಾವಾರು ಗರಿಷ್ಠ ವಯೋಮಿತಿ ಈ ಕೆಳಗಿನಂತೆ ನಿಗದಿಗೊಳಿಸಲಾಗಿದೆ.

- ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ.

- ಎಸ್‌.ಸಿ. ಎಸ್‌.ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ.

- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ.

ವಿಶೇಷ ಸೂಚನೆ : ಪ್ರಸ್ತುತ ಅಧಿಸೂಚನೆ ಮೂರನೇ ನೇಮಕಾತಿ ಪ್ರಕಟಣೆಯಾದ್ದರಿಂದ ಕಲ್ಯಾಣ ಕರ್ನಾಟಕ (HK) ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ರೋಸ್ಟರ್ ನಿಯಮಾನುಸಾರ ಇತರೆ ಅಭ್ಯರ್ಥಿಗಳನ್ನು ಹೈದೆರಾಬಾದ್-ಕರ್ನಾಟಕ ಜಿಲ್ಲೆಗಳಲ್ಲಿ ನೇಮಕಾತಿಗಾಗಿ ಪರಿಗಣಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಧಾನ

ಅಪ್ಲಿಕೇಶನ್‌ ಅನ್ನು ಕೇವಲ ಆನ್‌ಲೈನ್‌ ಮುಖಾಂತರ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಸಲ್ಲಿಸಬೇಕಾಗಿದೆ.

ನೇಮಕಾತಿ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪರೀಕ್ಷೆಯನ್ನು ಆನ್‌ಲೈನ್‌ ಮುಖಾಂತರ ನಡೆಸಿ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ.

ಇತರೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವೆಬ್‌ಸೈಟ್‌ ವಿಳಾಸ www.karnataka.gov.in/hfw ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ.

ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸಲು ಕ್ಲಿಕ್ ಮಾಡಿ

ಅಧಿಸೂಚನೆಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ