ಆ್ಯಪ್ನಗರ

ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್‌

ಹೈದೆರಾಬಾದ್‌ ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ನಿರುದ್ಯೋಗಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಒಂದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ನೀಡಿದ್ದಾರೆ...

Vijaya Karnataka Web 18 Nov 2020, 9:51 am
ಹೈದೆರಾಬಾದ್‌ ಕರ್ನಾಟಕ (ಕಲ್ಯಾಣ ಕರ್ನಾಟಕ) ಭಾಗದ ನಿರುದ್ಯೋಗಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ ಒಂದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‌ಕುಮಾರ್ ನೀಡಿದ್ದಾರೆ. ಈ ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Vijaya Karnataka Web hyderabad karnataka teachers recruitment 2020
hyderabad karnataka teachers recruitment 2020


'ಇತ್ತೀಚೆಗಷ್ಟೇ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಿದೆ. ವೃಂದ ನೇಮಕಾತಿ ನಿಯಮಗಳ ತಿದ್ದುಪಡಿಗೂ ಅವಕಾಶ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಹೆಚ್ಚು ಶಿಕ್ಷಕರ ಖಾಲಿ ಹುದ್ದೆಗಳಿದ್ದು, ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲು ಪ್ರಸ್ತಾವ ಸಲ್ಲಿಸಿ' ಎಂದು ಸುರೇಶ್‌ಕುಮಾರ್ ರವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇತ್ತೀಚೆಗಷ್ಟೇ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗದ ಹಿಂದಿ ಭಾಷಾ ಶಿಕ್ಷಕರು ಹುದ್ದೆಗೆ ಪರಿಷ್ಕೃತ 1:1 ಆಯ್ಕೆಪಟ್ಟಿ ಪ್ರಕಟಿಸಿದೆ.

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಲು ಸಿಎಂ ಸೂಚನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ