ಆ್ಯಪ್ನಗರ

KPSC ಪರೀಕ್ಷೆಗೆ ವಯೋಮಿತಿ ಸಡಿಲಿಕೆಗಾಗಿ ಪದವೀಧರರ ಪತ್ರ ಚಳವಳಿ

ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್(ಕೆಪಿಎಸ್‌ಸಿ) ನಡೆಸುವ ಕೆಎಎಸ್ (ಗ್ರೂಪ್ ಎ, ಬಿ, ಸಿ ವೃಂದಗಳು ಸೇರಿದಂತೆ) ಇತರೆ ಎಲ್ಲ ...

Vijaya Karnataka Web 19 Oct 2020, 9:07 am
ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್(ಕೆಪಿಎಸ್‌ಸಿ) ನಡೆಸುವ ಕೆಎಎಸ್ (ಗ್ರೂಪ್ ಎ, ಬಿ, ಸಿ ವೃಂದಗಳು ಸೇರಿದಂತೆ) ಇತರೆ ಎಲ್ಲ ಪರೀಕ್ಷೆಗಳಿಗೆ ವಯೋಮಿತಿ ಸಡಿಲಿಸುವಂತೆ ಆಗ್ರಹಿಸಿ ಪತ್ರ ಚಳವಳಿ ಆರಂಭಿಸಲು ನಿರುದ್ಯೋಗಿ ಪದವೀಧರರು ತೀರ್ಮಾನಿಸಿದ್ದಾರೆ.
Vijaya Karnataka Web graduate candidates letter movement
graduate candidates letter movement


ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್‌ಸಿ) ನಡೆಸಿದ 2019 ನೇ ಸಾಲಿನ ಸಿವಿಲ್ ಸರ್ವೀಸ್ ಪರೀಕ್ಷೆಗೆ ಕೊರೊನಾ ಕಾರಣ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ವಯೋಮಿತಿ ಮೀರಿದ್ದರೂ ಮತ್ತೊಂದು ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದೆ. ಅದೇ ರೀತಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಯೋಮಿತಿ ಮೀರಿದವರಿಗೆ, ಎಲ್ಲಾ ಪರೀಕ್ಷೆಗಳಲ್ಲಿ ಕೂರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕದಲ್ಲಿ ಪ್ರತಿ ವರ್ಷ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಒಂದು ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲು ಮೂರು ವರ್ಷವಾಗುತ್ತಿದೆ. ಆದ್ದರಿಂದ ಉದ್ಯೋಗಾಕಾಂಕ್ಷಿಗಳು ವಯೋಮಿತಿ ಸಮಸ್ಯೆಗೆ ಸಿಲುಕುತ್ತಿದ್ದಾರೆ. ಹೀಗಾಗಿ ವಯೋಮಿತಿ ಸಡಿಲಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲು ಈ ಪತ್ರ ಚಳುವಳಿ ಆರಂಭಿಸುವುದಾಗಿ ಉದ್ಯೋಗಾಕಾಂಕ್ಷಿಗಳು ತಿಳಿಸಿದ್ದಾರೆ.

ಸ್ವಯಂ ಉದ್ಯೋಗಕ್ಕಾಗಿ ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ