ಆ್ಯಪ್ನಗರ

ಅಗ್ನಿಶಾಮಕರ ಹುದ್ದೆಗೆ ಅರ್ಹತೆಗಳೇನು? ಯಾವೆಲ್ಲಾ ಪರೀಕ್ಷೆಗಳಿರುತ್ತವೆ?

ಕರ್ನಾಟಕ ರಾಜ್ಯ ಅಗ್ನಿಶಾಮಕರ ಹುದ್ದೆಗಳನ್ನು ಭರ್ತಿ ಮಾಡಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಅರ್ಹತೆಗಳೇನು ಮತ್ತು ಯಾವೆಲ್ಲಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಇಲ್ಲಿ ತಿಳಿಸಲಾಗಿದೆ.

Vijaya Karnataka Web 26 Oct 2020, 8:31 pm
ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 1222 ಅಗ್ನಿಶಾಮಕ ಪೋಸ್ಟ್‌ಗಳನ್ನು ನೇಮಕಾತಿ ಮಾಡಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಕೊರೊನಾ ಹಿನ್ನೆಲೆ ಈ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಸ್ತುತ ನಿಂತಿದೆ. ಆದರೆ ಮುಂದಿನ ದಿನಗಳಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎಲ್ಲಾ ರೀತಿಯ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರೆಸಲಾಗುತ್ತದೆ. ಈ ಹುದ್ದೆಗಳಿಗೆ ಅರ್ಹತೆಗಳೇನು ಮತ್ತು ಯಾವೆಲ್ಲಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.
Vijaya Karnataka Web karnataka fireman selection process eligibility list of tests firemen salary check here in kannada
ಅಗ್ನಿಶಾಮಕರ ಹುದ್ದೆಗೆ ಅರ್ಹತೆಗಳೇನು? ಯಾವೆಲ್ಲಾ ಪರೀಕ್ಷೆಗಳಿರುತ್ತವೆ?



ಅಗ್ನಿಶಾಮಕ ಹುದ್ದೆಗಳಿಗೆ ವಿದ್ಯಾರ್ಹತೆ

ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅಗ್ನಿಶಾಮಕರಿಗೆ ವೇತನ ಶ್ರೇಣಿ: ರೂ. 23000 ದಿಂದ ರೂ.47650 ವರೆಗೆ.

ಅಗ್ನಿಶಾಮಕರಿಗೆ ದೇಹದಾರ್ಢ್ಯತೆ ಪರೀಕ್ಷೆ ಈ ಕೆಳಗಿನಂತಿರುತ್ತದೆ.

ಎತ್ತರ : ಕನಿಷ್ಠ 168 ಸೆಂ.ಮೀ.

ಎದೆ ಸುತ್ತಳತೆ : ಕನಿಷ್ಠ 81 ಸೆಂ.ಮೀ ಎದೆ ಸುತ್ತಳತೆ ಹೊಂದಿರಬೇಕು.

ತೂಕ : ಕನಿಷ್ಠ 50 kg.

ಅನರ್ಹತೆಗಳು : ಬಾಗಿದ ಕಾಲು, ತಾಗು ಮಂಡಿ, ಚಪ್ಪಟೆ ಪಾದ ಹೊಂದಿದ ಅಭ್ಯರ್ಥಿಗಳು ಅನರ್ಹರಾಗುವರು.

ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಶೇಕಡ 1:5 ರ ಅನುಪಾತದಲ್ಲಿ ಎಲ್ಲಾ ಹುದ್ದೆಗಳ ದೇಹದಾರ್ಢ್ಯತೆ ಪರೀಕ್ಷೆಗೆ ಕರೆಯಲಾಗುವುದು.

ದೈಹಿಕ ಸಾಮರ್ಥ್ಯ ಪರೀಕ್ಷೆ

ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ಓಟ, ಭಾರ ಎತ್ತುವಿಕೆ, ಗುಂಡು ಎಸೆತ ವಿಭಾಗಗಳಲ್ಲಿ ಸಾಮನ್ಯ ಅಭ್ಯರ್ಥಿಗಳಿಗೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಈ ಮೇಲಿನ ಪಟ್ಟಿಯಲ್ಲಿರುವಂತೆ ನಡೆಸಲಾಗುತ್ತದೆ.

ಅಭ್ಯರ್ಥಿಗಳು ಅರ್ಹತೆ ಪಡೆಯಲು ಮೇಲಿನ 5 ದೈಹಿಕ ಸಾಮರ್ಥ್ಯ ಪರೀಕ್ಷೆಗಳ ಪೈಕಿ ಕನಿಷ್ಠ 3 ರಲ್ಲಿ ಉತ್ತೀರ್ಣರಾಗಬೇಕು. ಪ್ರತಿಯೊಂದು ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ 20 ಅಂಕಗಳನ್ನು ನೀಡಲಾಗುತ್ತದೆ.

ಅಗ್ನಿಶಾಮಕ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿ ಹೇಗೆ ತಯಾರಿಸಲಾಗುತ್ತದೆ?

ಅಗ್ನಿಶಾಮಕ ಹುದ್ದೆಯ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಕ್ರೋಢೀಕರಿಸಿ ಶೇಕಡಾವಾರು ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುವುದು. ಈ ಅರ್ಹತಾ ಪಟ್ಟಿಯಿಂದ ಪ್ರತಿ ವರ್ಗದಲ್ಲಿ ಅಧಿಸೂಚಿತ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು 1:1 ರ ಅನುಪಾತ ಪ್ರಮಾಣದಲ್ಲಿ ತಯಾರಿಸಲಾಗುತ್ತದೆ.

ವೈದ್ಯಕೀಯ ಪರೀಕ್ಷೆ

ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದ ನಂತರ ಪಟ್ಟಿಯಲ್ಲಿ ಸ್ಥಾನ ಪಡೆದ ಎಲ್ಲಾ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು. ಅದಕ್ಕೂ ಮುನ್ನ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ಮೂಲ ದಾಖಲಾತಿಗಳನ್ನು ಹಾಜರುಪಡಿಸಿ ಪರಿಶೀಲನೆ ನಡೆಸಿಕೊಳ್ಳಬೇಕು. ಎಲ್ಲವೂ ಸರಿಯಾಗಿದ್ದಲ್ಲಿ ಮಾತ್ರ ವೈದ್ಯಕೀಯ ಪರೀಕ್ಷೆಗೆ ಹಾಜರಾಗಲು ಅನುಮತಿ ದೊರೆಯುತ್ತದೆ. ವೈದ್ಯಕೀಯ ಪರೀಕ್ಷೆ ಈ ಮೇಲಿನಂತಿರುತ್ತದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಪಾಸ್‌ ಆದವರನ್ನು ಅಂತಿಮ ಆಯ್ಕೆಪಟ್ಟಿಗೆ ಆಯ್ಕೆ ಮಾಡಲಾಗುತ್ತದೆ.

ಅಗ್ನಿಶಾಮಕ ದಳದ 1567 ಹುದ್ದೆಗಳ ಆನ್‌ಲೈನ್‌ ಅರ್ಜಿಗೆ ದಿನಾಂಕ ವಿಸ್ತರಣೆ

ದೈಹಿಕ ಸಾಮರ್ಥ್ಯ ಮತ್ತು ದೇಹದಾರ್ಢ್ಯತೆ ಪರೀಕ್ಷೆಗೆ ಹಾಜರಾಗುವಾಗ ಸಲ್ಲಿಸಬೇಕಾದ ಗುರುತಿನ ಚೀಟಿಗಳು

ಈ ಕೆಳಗಿನ ಯಾವುದಾದರೂ ಒಂದು ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು.

- ಪಾಸ್‌ಪೋರ್ಟ್‌

- ಚಾಲನಾ ಪರವಾನಗಿ ಪತ್ರ

- ಪ್ಯಾನ್‌ ಕಾರ್ಡ್‌

- ರಾಜ್ಯ ಸರ್ಕಾರ / ಕೇಂದ್ರ ಸರ್ಕಾರ / ಸಾರ್ವಜನಿಕ ಸ್ವಾಮ್ಯದ ಅಥವಾ ಸರ್ಕಾರದ ಅಧೀನಕ್ಕೊಳಪಟ್ಟ ಖಾಸಗಿ ಕಂಪನಿಗಳು ವಿತರಿಸಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ

- ಅಥವಾ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿಗಳು.

ಅಗ್ನಿಶಾಮಕ ಠಾಣಾಧಿಕಾರಿ ನೇಮಕ: ಲಿಖಿತ ಪರೀಕ್ಷೆ ಮಾದರಿ ಹೇಗಿರಲಿದೆ ಗೊತ್ತೇ?

ವಯೋಮಿತಿ ಅರ್ಹತೆ

ಅರ್ಜಿಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 20-07-2020 ಕ್ಕೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಎಸ್‌ಸಿ / ಎಸ್‌ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ