ಆ್ಯಪ್ನಗರ

KPSC ನೇರ ನೇಮಕಾತಿಗೆ ಸಂಬಂಧಿಸಿದ ಶುಭ ಸುದ್ದಿ ಇದು

ಕೋವಿಡ್‌-19 ಕಾರಣದಿಂದ ಆರ್ಥಿಕ ಸಮಸ್ಯೆ ಚೇತರಿಸುವ ಸಲುವಾಗಿ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಬೇಕೆಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

Vijaya Karnataka Web 16 Jul 2020, 8:27 am
ಕೋವಿಡ್‌-19 ಕಾರಣದಿಂದ ಆರ್ಥಿಕ ಸಮಸ್ಯೆ ಚೇತರಿಸುವ ಸಲುವಾಗಿ ಎಲ್ಲಾ ನೇರ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಬೇಕೆಂದು ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈ ಬಗ್ಗೆ 'ವಿಕ' ವೆಬ್‌ನಲ್ಲಿ ಸುದ್ದಿ ಪ್ರಕಟಿಸಲಾಗಿತ್ತು. ಆದರೆ ಈಗ ಸ್ಪರ್ಧಾತ್ರಿಗಳಿಗೆ ಶುಭ ಸುದ್ದಿಯೊಂದು ಕೇಳಿಬಂದಿದೆ.
Vijaya Karnataka Web karnataka govt jobs latest news
karnataka govt jobs latest news


2020-21ನೇ ಸಾಲಿನ ಎಲ್ಲ ನೇರ ನೇಮಕಾತಿಗಳನ್ನು ತಡೆಹಿಡಿದು, ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದರೂ ಕೆಪಿಎಸ್‌ಸಿ'ಯೂ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದೆ.

ಈ ಹಿಂದಿನ ನೋಟಿಫಿಕೇಶನ್‌ ಅನ್ವಯ ಅರ್ಜಿ ಆಹ್ವಾನಿಸಲು ಮತ್ತು ಈಗಾಗಲೇ ನಿಗದಿಪಡಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ಮುಂದುವರಿದಿದೆ. ಆದ್ದರಿಂದ ಲಕ್ಷಾಂತರ ಉದ್ಯೋಗಾಂಕ್ಷಿಗಳಿಗೆ ಒಂದು ರೀತಿಯ ಸಿಹಿ ಸುದ್ದಿ ಆದರೂ, ಗೊಂದಲವು ಉಂಟಾಗಿದೆ.

ದ್ವಿತೀಯ ಪಿಯು ಇಂಗ್ಲಿಷ್‌ನಲ್ಲೇ ಹೆಚ್ಚು ವಿದ್ಯಾರ್ಥಿಗಳು ಫೇಲ್‌.. ಏಕೆ ಗೊತ್ತೇ?

ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್ ಅವರು ಜುಲೈ 06 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ' HK, Non-HK, ಬ್ಯಾಕ್‌ಲಾಗ್‌ ಸೇರಿದಂತೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ. ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಈ ಆದೇಶ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದ್ದರು.

ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮುಂದುವರಿಸುತ್ತಿರುವುದು ಏಕೆ?

ಆರ್ಥಿಕ ಇಲಾಖೆಯ ಸುತ್ತೋಲೆ ಪ್ರತಿಯನ್ನು ಕೆಪಿಎಸ್‌ಸಿಗೆ ಕಳುಹಿಸಿಲ್ಲ. ಅಲ್ಲದೆ, ಕೆಪಿಎಸ್‌ಸಿ ಸ್ವಾಯತ್ತ ಸಂಸ್ಥೆಯಾಗಿದ್ದು, ಈಗಾಗಲೇ ತನ್ನ ವೇಳಾಪಟ್ಟಿಯಂತೆ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರಿಸಲು ತೀರ್ಮಾನಿಸಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ವೃಂದಗಳ ಹುದ್ದೆಗಳಿಗೆ 2020 ರ ಜನವರಿ, ಫೆಬ್ರವರಿ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕ್ರಿಯೆಗಳನ್ನು ಮುಂದುವರೆಸಲಿದೆ.

ರಾಷ್ಟ್ರೀಯ ಪರೀಕ್ಷಾ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

ಕೊರೊನಾ ಲಾಕ್‌ಡೌನ್‌ ಕಾರಣದಿಂದ ಮುಂದೂಡಲಾಗಿದ್ದ, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್‌ 'ಎ' ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳಿಗೆ ಆಗಸ್ಟ್‌ 17 ರಂದು ಮತ್ತು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್‌ 'ಎ' ಮತ್ತು 'ಬಿ ವೃಂದದ 106 ಹುದ್ದೆಗಳಿಗೆ ಆಗಸ್ಟ್‌ 24 ಕ್ಕೆ ಪೂರ್ವಭಾವಿ ಪರೀಕ್ಷೆ ನಡೆಸಲು ಆಯೋಗವು ನಿರ್ಧರಿಸಿದೆ.

"ಜನವರಿ, ಫೆಬ್ರವರಿಯಲ್ಲಿ ಹೊರಡಿಸಲಾದ ಕೆಲವು ಅಧಿಸೂಚನೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಇಷ್ಟೊತ್ತಿಗೆ ನಡೆಸಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲಾಗಿದೆ. ಪ್ರಸ್ತುತ, ನಾನೂ ಕೊರೊನಾ ನಿಯಂತ್ರಣ ಕಾರ್ಯದ ಹೊಣೆಗಾರಿಕೆಯಲ್ಲಿದ್ದೇನೆ," ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ