ಆ್ಯಪ್ನಗರ

2018ನೇ ಸಾಲಿನ ಅಬಕಾರಿ ಉಪನಿರೀಕ್ಷಕರಿಗೆ ಮೂಲ ದಾಖಲೆಗಳ ಪರಿಶೀಲನೆಗಾಗಿ ನೋಟಿಫಿಕೇಶನ್‌ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ)2018ನೇ ಸಾಲಿನ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ..

Vijaya Karnataka Web 24 Nov 2020, 4:45 pm
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ)2018ನೇ ಸಾಲಿನ ಅಬಕಾರಿ ಇಲಾಖೆಯಲ್ಲಿನ ಅಬಕಾರಿ ಉಪನಿರೀಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರು ಪಡೆದ ಅಭ್ಯರ್ಥಿಗಳು ಮೂಲ ದಾಖಲೆಗಳನ್ನು ಪರಿಶೀಲನೆಗಾಗಿ ಕಳುಹಿಸುವಂತೆ ಪ್ರಕಟಣೆ ಮೂಲಕ ತಿಳಿಸಿದೆ.
Vijaya Karnataka Web kpsc recruitment 2020
excise sub inspector document verification


ಆಯೋಗವು ಸದರಿ ಹುದ್ದೆಗಳಿಗೆ ದಿನಾಂಕ 19-11-2020 ರಂದು 1:2 ಅನುಪಾತದಲ್ಲಿ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ಸದರಿ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಪರಿಶೀಲನೆಗಾಗಿ ದಿನಾಂಕ 05-12-2020 ರೊಳಗೆ ತಲುಪುವಂತೆ ಖುದ್ದಾಗಿ ಅಥವಾ ಸ್ಪೀಡ್ ಪೋಸ್ಟ್‌ ಮೂಲಕ ಸಲ್ಲಿಸುವಂತೆ ತಿಳಿಸಿದೆ.

ದಾಖಲೆಗಳನ್ನು ಮುಚ್ಚಿದ ಲಕೋಟೆ ಮೇಲೆ "ಪ್ರಥಮ ದರ್ಜೆ ಸಹಾಯಕರ ಹುದ್ದೆಯ ಅಭ್ಯರ್ಥಿಗಳು "EXCISE SUB INSPECTOR 2018" ಎಂಬ ಶೀರ್ಷಿಕೆಯೊಂದಿಗೆ ವಿಳಾಸ - ' ಕಾರ್ಯದರ್ಶಿಗಳು, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001' ಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಲು ಸೂಚಿಸಲಾಗಿದೆ.

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟ

ಪರಿಶೀಲನೆಗಾಗಿ ಸಲ್ಲಿಸಬೇಕಾದ ದಾಖಲೆಗಳು

- ಸದರಿ ಹುದ್ದೆಗಳ ಆನ್‌ಲೈನ್‌ ಅರ್ಜಿಯಲ್ಲಿ ಕೋರಲಾದ ಮೀಸಲಾತಿಗನುಗುಣವಾಗಿ ಪೂರಕ ಪ್ರಮಾಣ ಪತ್ರಗಳು.

- ಜನ್ಮ ದಿನಾಂಕ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಪೂರಕ ಪ್ರಮಾಣ ಪತ್ರ.

- ಎರಡು ಭಾವಚಿತ್ರ

- ಆನ್‌ಲೈನ್‌ ಅರ್ಜಿ ಪ್ರತಿ

- ಪ್ರವೇಶ ಪತ್ರ ಪ್ರತಿಗಳು

- ಯಾವುದಾದರೊಂದು ಗುರುತಿನ ಚೀಟಿ.

ಈ ದಾಖಲೆಗಳ ಎರಡೆರಡು ಜೆರಾಕ್ಸ್‌ ಪ್ರತಿಗಳ ಮೇಲೆ ಅಭ್ಯರ್ಥಿಗಳು ಸಹಿ, ಹೆಸರು, ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

ಒಂದು ವೇಳೆ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳು ಯಾವುದೇ ದಾಖಲೆಗಳನ್ನು ಸಲ್ಲಿಸಲು ವಿಫಲರಾದಲ್ಲಿ, ಸದರಿ ದಾಖಲೆಗಳನ್ನು ಹಾಜರುಪಡಿಸಲು ಮತ್ತೊಂದು ಅವಕಾಶ ನೀಡಲಾಗುವುದಿಲ್ಲ. ಮತ್ತು ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಕೈಬಿಡಲಾಗುವುದು ಎಂದು ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ಹಿಂಬರಹಗಳನ್ನು ಮಾಡಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ