ಆ್ಯಪ್ನಗರ

ರಾಜ್ಯ ಸರಕಾರಿ ನೌಕರರಿಗೆ ಸಿಗುವುದೇ ಏಪ್ರಿಲ್ ಸಂಬಳ?

ಕೊರೊನಾ ಸಮಸ್ಯೆಯ ಸಂಕಷ್ಟದ ಹಿನ್ನೆಲೆಯಲ್ಲಿ ನೌಕರರ ಸಂಬಳ, ಪಿಂಚಣಿ, ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ವೆಚ್ಚ ಮಾಡಬೇಕು.

Vijaya Karnataka Web 29 Apr 2020, 9:22 am

ಕೊರೊನಾ ಸಮಸ್ಯೆಯ ಸಂಕಷ್ಟದ ಹಿನ್ನೆಲೆಯಲ್ಲಿ ನೌಕರರ ಸಂಬಳ, ಪಿಂಚಣಿ, ಸಾಮಾಜಿಕ ಭದ್ರತಾ ಪಿಂಚಣಿ ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ವೆಚ್ಚ ಮಾಡಬೇಕು. ಹೊಸ ಕಾರು, ಪೀಠೋಪಕರಣ ಖರೀದಿ, ಕಟ್ಟಡ ದುರಸ್ತಿ ಮಾಡಕೂಡದೆಂದು ಹಣಕಾಸು ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಈ ನಡುವೆ ರಾಜ್ಯ ಸರಕಾರಿ ನೌಕರರ ವೇತನ ಕಡಿತ ಮಾಡದೇ ಇರಲು ಸರಕಾರ ನಿರ್ಧರಿಸಿದೆ.
Vijaya Karnataka Web karnataka govt employees salary
karnataka govt employees salary


ಹಾಗಾಗಿ ರಾಜ್ಯ ಸರಕಾರಿ ನೌಕರರಿಗೆ ಏಪ್ರಿಲ್ ತಿಂಗಳ ಸಂಬಳ ನೀಡುವುದು ಸುಗಮವಾಗಲಿದೆ. ಉಳಿದಂತೆ ಕೋವಿಡ್ ನಿರ್ವಹಣೆ ಸಂಬಂಧಿತವಾಗಿ ಖರ್ಚು ವೆಚ್ಚ ನೋಡಿಕೊಳ್ಳಬೇಕು. ಆಡಳಿತಾತ್ಮಕ ವೆಚ್ಚವನ್ನು ಕನಿಷ್ಠ ಮಟ್ಟಕ್ಕೆ ಇಳಿಸಬೇಕು. ಆಹಾರ ಭದ್ರತಾ ಯೋಜನೆಗಳಿಗೆ ಆದ್ಯತೆ ಕೊಟ್ಟು ವೆಚ್ಚ ಮಾಡಬಹುದು ಎಂದು ಸೂಚಿಸಲಾಗಿದೆ.

ನಾನಾ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಸಾಲ ಸೌಲಭ್ಯ ತೆಗೆದುಕೊಳ್ಳುವುದಿದ್ದರೆ 15 ದಿನ ಮುಂಚಿತವಾಗಿ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನಿತ ಸಂಸ್ಥೆಗಳು ಜೂನ್ 30 ರೊಳಗೆ ಹೆಚ್‌ಆರ್‌ಎಂಎಸ್‌ ಅಳವಡಿಸಿಕೊಳ್ಳಬೇಕು ಎಂಬ ನಿರ್ದೇಶನ ನೀಡಲಾಗಿದೆ.

ಕೇಂದ್ರ ಸರಕಾರಿ ನೌಕರರಿಗಿಲ್ಲ ತುಟ್ಟಿಭತ್ಯೆ

ಇನ್ನು ಕೇಂದ್ರ ಸರ್ಕಾರ ಮಾತ್ರ ಈಗಾಗಲೇ 2021 ರ ಜುಲೈ 30 ರವರೆಗೆ ನೌಕರರಿಗೆ ತುಟ್ಟಿಭತ್ಯೆ ನೀಡದೇ ಇರಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಕೇಂದ್ರ ಸರಕಾರದ ಪಿಂಚಣಿದಾರರಿಗೂ ಇದು ಅನ್ವಯವಾಗಲಿದೆ.

2020 ರ ಜನವರಿಯಿಂದ ಪೂರ್ವಾನ್ವಯವಾಗುವಂತೆ ಶೇ.4 ರಷ್ಟು ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಲು ಮಾರ್ಚ್‌ನಲ್ಲಿ ಕೇಂದ್ರ ಸರಕಾರ ತೀರ್ಮಾನಿಸಿತ್ತು. ಬಳಿಕ ಆ ತೀರ್ಮಾನವನ್ನು ತಡೆಹಿಡಿಯಲು ನಿರ್ಧರಿಸಲಾಗಿತ್ತು. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ವಿವರವಾದ ಚರ್ಚೆ ನಡೆದಿತ್ತು. ಅಂತಿಮವಾಗಿ ತುಟ್ಟಿಭತ್ಯೆ ನೀಡದಿರುವ ತೀರ್ಮಾನವನ್ನು ಹಣಕಾಸು ಸಚಿವಾಲಯ ಗುರುವಾರ ಅಧಿಕೃತವಾಗಿ ಪ್ರಕಟಿಸಿದೆ.

ಭಾರತೀಯ ಸಾಂಸ್ಕೃತಿಕ ಸಂಬಂಧ ಮಂಡಳಿಯಲ್ಲಿ ನೇಮಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ