ಆ್ಯಪ್ನಗರ

ಬಳ್ಳಾರಿಯ ವಿಜಯನಗರ ಕೃಷ್ಣದೇವರಾಯ ವಿವಿಯಲ್ಲಿ ನೇಮಕ: ಅರ್ಜಿ ಸಲ್ಲಿಸಲು ಇಂದು ಡೆಡ್‌ಲೈನ್‌

ಗ್ರೂಪ್‌ ಎ, ಬಿ ಮತ್ತು ಸಿ ವೃಂದದ ಬೋಧಕೇತರ ಹುದ್ದೆಗಳ ನೇಮಕಕ್ಕೆ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಅಭ್ಯರ್ಥಿಗಳ ನೇಮಕಕ್ಕೆ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಇಂದು (ಮೇ 17ರೊಳಗೆ) ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Vijaya Karnataka Web 17 May 2019, 9:59 am
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ಗ್ರೂಪ್‌ ಎ, ಬಿ ಮತ್ತು ಸಿ ವೃಂದದ ಬೋಧಕೇತರ ಹುದ್ದೆಗಳ ನೇಮಕಕ್ಕೆ ಮರು ಅಧಿಸೂಚನೆ ಹೊರಡಿಸಿದೆ. ಇನ್ನೂ ಅರ್ಜಿ ಸಲ್ಲಿಸದ ಅರ್ಹ ಅಭ್ಯರ್ಥಿಗಳು ಇಂದು (ಮೇ 17ರೊಳಗೆ) ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. 2017ರ ಏಪ್ರಿಲ್‌ 17 ಮತ್ತು 2018ರ ಡಿಸೆಂಬರ್‌ 15ರ ಅಧಿಸೂಚನೆಗೆ ಅನುಗುಣವಾಗಿ ಈ ಬೋಧಕೇತರ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
Vijaya Karnataka Web job1


ಹುದ್ದೆ ಮತ್ತು ಅರ್ಹತೆ

ಗ್ರೂಪ್‌ ಎ: ಖಾಲಿ ಇರುವ ಉಪ ಕುಲಸಚಿವರು ಹಾಗೂ ಸಹಾಯಕ ಕುಲ ಸಚಿವರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲ ದರ್ಜೆಯಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಅಡ್ಮಿನಿಸ್ಪ್ರೇಟಿವ್‌/ಅಕಾಡೆಮಿಕ್‌ ಕ್ಷೇತ್ರದಲ್ಲಿ ಉಪ ಕುಲಸಚಿವರ ಹುದ್ದೆಗೆ 10 ವರ್ಷ ಹಾಗೂ ಸಹಾಯಕ ಕುಲ ಸಚಿವರ ಹುದ್ದೆಗೆ ಐದು ವರ್ಷ ಕಾರ್ಯನಿರ್ವಹಿಸಿದ ಅನುಭವ ಇರಬೇಕು. ಸಹಾಯಕ ಗ್ರಂಥಪಾಲಕ ಹುದ್ದೆಗೆ ಯುಜಿಸಿ ನಿಯಮಗಳ ಪ್ರಕಾರ ಅರ್ಹತೆ ನಿಗದಿಪಡಿಸಲಾಗಿದೆ.

ಗ್ರೂಪ್‌ ಬಿ: ಕಚೇರಿ ಅಧೀಕ್ಷಕರ ಹುದ್ದೆಗೆ ಪದವೀಧರರು, ಸಹಾಯಕ ಗ್ರಂಥಪಾಲಕ ಗ್ರೇಡ್‌-2 ಹುದ್ದೆಗೆ ಲೈಬ್ರರಿ ಇನ್‌ಫಾರ್ಮೇಶನ್‌ ಸೈನ್ಸ್‌ ವಿಷಯದಲ್ಲಿ ಪದವಿ ಪಡೆದವರು ಹಾಗೂ ಕಂಪ್ಯೂಟರ್‌ ಎಂಜಿನಿಯರ್‌ ಹುದ್ದೆಗೆ ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು. ಅಸಿಸ್ಟೆಂಟ್‌ ಎಂಜಿನಿಯರ್‌ ಹುದ್ದೆಗೆ ಬಿಇ (ಮೆಕ್ಯಾನಿಕಲ್‌/ಎಲೆಕ್ಟ್ರಿಕಲ್‌) ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಗ್ರೂಪ್‌ ಸಿ: ಈ ವೃಂದದಲ್ಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ, ಸಹಾಯಕ ಕಚೇರಿ ಅಧೀಕ್ಷಕರು, ಶೀಘ್ರಲಿಪಿಗಾರರು, ಸ್ಟೋರ್‌ ಕೀಪರ್‌ ಮತ್ತು ಲ್ಯಾಬ್‌ ಅಸಿಸ್ಟೆಂಟ್‌ ಹುದ್ದೆಗೆ ಸಂಬಂಧಪಟ್ಟ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಇನ್ನುಳಿದಂತೆ ಕಂಪ್ಯೂಟರ್‌ ಟೆಕ್ನಿಷಿಯನ್‌ ಮತ್ತು ಡ್ರಾಟ್ಸ್‌ಮನ್‌ ಹುದ್ದೆಗೆ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. ದ್ವಿತೀಯ ದರ್ಜೆ ಸಹಾಯಕರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಓದಿದವರು ಅರ್ಜಿ ಸಲ್ಲಿಸಬಹುದು. ವಾಹನ ಚಾಲಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಚಾಲನಾ ಪರವಾನಗಿ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 18ರಿಂದ 35 ವರ್ಷದೊಳಗಿರಬೇಕು. 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 200 ರೂ. ಶುಲ್ಕ ನಿಗದಿಪಡಿಸಲಾಗಿದೆ. ಉಳಿದ ಎಲ್ಲಾ ಅಭ್ಯರ್ಥಿಗಳು 500 ರೂ. ಶುಲ್ಕ ಪಾವತಿಸಬೇಕು.

ಒಟ್ಟು ಹುದ್ದೆಗಳು : 55

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 17, 2019

ಸಹಾಯವಾಣಿ ಸಂಖ್ಯೆ: 08392- 242703

ಅರ್ಜಿ ಸಲ್ಲಿಸಬೇಕಾದ ವಿಳಾಸ: ಕುಲ ಸಚಿವರು, ವಿಜಯನಗರ ಕೃಷ್ಣದೇವರಾಯ ವಿವಿ, ಜ್ಞಾನಸಾಗರ ಆವರಣ, ವಿನಾಯಕ ನಗರ, ಕಂಟೋನ್ಮೆಂಟ್‌, ಬಳ್ಳಾರಿ

ಲಿಖಿತ ಪರೀಕ್ಷೆ: ಮೇ 23 ಮತ್ತು 24, 2019

ಹೆಚ್ಚಿನ ವಿವರಗಳಿಗೆ: http://vskub.ac.in/

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ