ಆ್ಯಪ್ನಗರ

ಯುವದಸರಾ ವೇದಿಕೆಯಲ್ಲಿ ಪ್ರೇಮ ನಿವೇದನೆ: ಚಂದನ್ ಶೆಟ್ಟಿ–ನಿವೇದಿತಾ ವಿರುದ್ಧ 3 ಕೇಸ್

ಬಿಗ್ ಬಾಸ್ ವಿನ್ನರ್ ಹಾಗೂ ರ‍್ಯಾಂಪ್ ಸಿಂಗರ್ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆ ಮೈಸೂರು ಯುವ ದಸರಾ ವೇದಿಕೆ ಮೇಲೆ ಪ್ರೇಮ ನಿವೇದನೆ ಮಾಡಿ ಮದುವೆ ಆಗುವುದಾಗಿ ಘೋಷಿಸಿಕೊಂಡಿದ್ದರು.

Vijaya Karnataka Web 7 Oct 2019, 12:50 pm
ಮೈಸೂರು: ಯುವದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದನ್ ಶೆಟ್ಟಿ ಬಿಗ್ ಬಾಸ್ ಖ್ಯಾತಿಯ ನಿವೇದಿತಾ ವಿರುದ್ಧ ಮೈಸೂರಿನಲ್ಲಿ ಮೂರು ದೂರುಗಳು ದಾಖಲಾಗಿವೆ.
Vijaya Karnataka Web dasara3


ವಿಲ್ ಯೂ ಮ್ಯಾರಿ ಮೀ?

ನಗರದ ಲಕ್ಷೀಪುರಂ ಪೊಲೀಸ್ ಠಾಣೆಯಲ್ಲಿ ಚಂದನ್ ಮೇಲೆ ದೂರು ದಾಖಲಾಗಿದೆ. ಸರಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚು ರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲಾಗಿದೆ. ಮೈಸೂರು ಯೂತ್ ಕಾಂಗ್ರೆಸ್, ಕರ್ನಾಟಕ ಪ್ರಜಾಪಾರ್ಟಿ ಮತ್ತು ಸಾಮಾಜಿಕ ಹೋರಾಟಗಾರ ಗಂಗರಾಜುರಿಂದ ಕೇಸ್ ದಾಖಲು ಮಾಡಿದ್ದಾರೆ.

ಚಂದನ್ ಶೆಟ್ಟಿ- ನಿವೇದಿತಾ ಗೌಡ ಪ್ರೇಮ ನಿವೇದನೆ

ಪ್ರಕರಣದ ಕುರಿತು ಮಾತನಾಡಿದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್, ಇದು ಮೈಸೂರಿಗರು ತಲೆ ತಗ್ಗಿಸುವ ಕೃತ್ಯ. ಸುಮಾರು 400 ವರ್ಷಗಳ ಇತಿಹಾಸವನ್ನು ಕೆಡಸುವ ಕೆಲಸವಾಗಿದೆ. ತಮ್ಮ ವೈಯುಕ್ತಿಕ ಕೆಲಸ ಕಾರ್ಯಕ್ಕೆ ಸರಕಾರಿ ಕಾರ್ಯಕ್ರಮ ಬಳಸಿಕೊಂಡದ್ದು ತಪ್ಪು. ಆಹ್ವಾನ ಇಲ್ಲದಿದ್ದರೂ ನಿವೇದಿತಾ ಅವರನ್ನ ವೇದಿಕೆ ಮೇಲೆ ಬಿಡಲಾಗಿದೆ. ಇದು ಭದ್ರತಾ ಲೋಪಕ್ಕೆ ಹಿಡಿದ ಕೈಗನ್ನಡಿ. ಸರಕಾರಿ ಕಾರ್ಯಕ್ರಮವನ್ನ ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿಗೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ದೂರು ದಾಖಲು ಮಾಡಿದ್ದೇವೆ ಎಂದು ತಿಳಿಸಿದರು.

ಒಟ್ಟಾರೆ ಸಂಭ್ರಮದಲ್ಲಿದ್ದ ಚಂದನ್ ಶೆಟ್ಟಿ- ನಿವೇದಿತಾ ಗೌಡಗೆ ಈ ದೂರಿನ ಉರುಳು ಸುತ್ತಿಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ