ಆ್ಯಪ್ನಗರ

ದಸರಾಗೆ ಚಾಲನೆ ನೀಡಿ ಮೈಸೂರು ಬಾಲ್ಯದ ದಿನ ನೆನಪಿಸಿಕೊಂಡ ಎಸ್‌ಎಂ ಕೃಷ್ಣ

12 ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟರು. ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆ. ಯುವರಾಜ ಕಾಲೇಜು, ಮಹರಾಜ ಕಾಲೇಜಿನಲ್ಲಿ ಕಲಿತೆ‌. ನಾನು ಮೈಸೂರಿನ ಜೊತೆಯಲ್ಲೇ ಬೆಳೆದೆ.‌ ಪ್ರತಿದಿನ ಚಾಮುಂಡಿ ಬೆಟ್ಟ ನೋಡಿ ಕೈ ಮುಗಿಯುತ್ತಿದ್ದೆ

Vijaya Karnataka Web 7 Oct 2021, 12:31 pm
ಮೈಸೂರು: ದಸರಾ ಹಬ್ಬ ಕಳೆಗಟ್ಟಿದೆ. ಮೈಸೂರು ದಸರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿದ್ಯುಕ್ತವಾಗಿ ಚಾಲನೆ ನೀಡಿದರು.
Vijaya Karnataka Web ದಸರಾ ಉದ್ಘಾಟನೆ
ದಸರಾ ಉದ್ಘಾಟನೆ


ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಎಸ್.ಎಂ ಕೃಷ್ಣ 411ನೇ ದಸರಾ ಮಹೋತ್ಸವ ಉದ್ಘಾಟಿಸಿದರು.

ಉದ್ಘಾಟನಾ ಭಾಷಣ ಮಾಡಿದ ಎಸ್.ಎಂ ಕೃಷ್ಣ ಅವರು, ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ಮೈಸೂರು ದಸರಾ ಉದ್ಘಾಟನೆ ಮಾಡುವ ಅವಕಾಶ ಸಿಕ್ಕಿದೆ. ಮುಖ್ಯಮಂತ್ರಿಗಳು ಹಾಗೂ ಅವರ ತಂದೆ ಅವರ ಜೊತೆ ಕೆಲಸ ಮಾಡಿದ ಸೌಭಾಗ್ಯ ನನ್ನದಾಗಿದೆ. ಅತ್ಯಂತ ಗೌರವಯುತವಾಗಿ ಈ ಕ್ಷಣವನ್ನ ನನ್ನದಾಗಿಸಿದ್ದೀರಿ. ನಿಮಗೆ ನನ್ನ ಅನಂತ ಧನ್ಯವಾದಗಳು ಎಂದು ನುಡಿದರು.

12 ವರ್ಷ ಇದ್ದಾಗಲೇ ನಮ್ಮ ತಂದೆ ಓದಲು ಕಳುಹಿಸಿಕೊಟ್ಟರು. ಒಂಟಿಕೊಪ್ಪಲು ಶಾಲೆಯಲ್ಲಿ ಓದಿ, ಮಹಾಜನ ಶಾಲೆ. ಯುವರಾಜ ಕಾಲೇಜು, ಮಹಾರಾಜ ಕಾಲೇಜಿನಲ್ಲಿ ಕಲಿತೆ‌. ನಾನು ಮೈಸೂರಿನ ಜೊತೆಯಲ್ಲೇ ಬೆಳೆದೆ.‌ ಪ್ರತಿದಿನ ಚಾಮುಂಡಿ ಬೆಟ್ಟ ನೋಡುತ್ತಿದ್ದೆ, ಕೈ ಮುಗಿಯುತ್ತಿದ್ದೆ ಎಂದು ನೆನಪಿನಗಂಗಳಕ್ಕೆ ಕೃಷ್ಣ ಜಾರಿದರು.

ದಸರಾ ಆ ವೇಳೆ ಸಂಭ್ರಮದಿಂದ ನಡೆಯುತ್ತಿತ್ತು. ರಾಜ್ಯದ ನಾನಾ ಕಡೆ ಹಾಗೂ ವಿದೇಶದಿಂದ ಬರುತ್ತಿದ್ದರು. ಪ್ರಜಾಪ್ರತಿನಿಧಿ ಜಗನ್ಮೋಹನ ಅರಮನೆಯಲ್ಲಿ ನಡೆಯುತ್ತಿತ್ತು. ಪೀಟಿಲ್ ಚೌಡಯ್ಯ, ದೇವೇಂದ್ರಪ್ಪ ಹಲವರು ಪ್ರಾತಃ ಸ್ಮರಣಿಯರು ಇದ್ದರು ಎಂದು ಸ್ಮರಿಸಿದರು.

Mysuru Dasara 2021 Video: ನಾಡ ಹಬ್ಬ ದಸರಾಗೆ ಚಾಲನೆ ನೀಡಿದ ಎಸ್‌.ಎಂ ಕೃಷ್ಣ

ಕುಸ್ತಿಗೆ ಮೈಸೂರು ಹೆಸರಾಂತ ಜಿಲ್ಲೆ. ಸಾಹುಕಾರ್ ಚನ್ನಯ್ಯ ಅವರು ಕುಸ್ತಿಗೆ ಸಹಮತ ಹೆಚ್ಚಾಗಿತ್ತು. ಯದುವಂಶದವರು ದಸರಾ ಉತ್ಸವಕ್ಕೆ ಮೆರಗು ತಂದಿದ್ದಾರೆ. ನಾಲ್ವಡಿ ಒಡೆಯರ್, ಜಯಚಾಮರಾಜ ಒಡೆಯರ್ ಕೊಡುಗೆ ಅಪಾರ‌. ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಇದೆ ಎಂದು ಬಾಲ್ಯದ ದಿನ ಸೇರಿದಂತೆ ಮೈಸೂರಿನ ಪ್ರಮುಖರನ್ನ ನೆನೆದರು.

ವಿದ್ಯಾರ್ಥಿಯಾಗಿದ್ದಾಗ ನಾನು ದಸರಾ ನೋಡುತ್ತಿದ್ದೆ. ಮಂಡ್ಯ ಬಹಳ ಕಾಲ ಮೈಸೂರಿನ ಒಂದು ತಾಲೂಕಾಗಿತ್ತು. ಆ ಬಳಿಕ ಮಂಡ್ಯ ಒಂದು ಪ್ರತ್ಯೇಕ ಜಿಲ್ಲೆಯಾಯ್ತು ಎಂದು ಎಸ್.ಎಂ ಕೃಷ್ಣ ತಿಳಿಸಿದರು.

ಇತ್ತೀಚೆಗೆ ಭಾರತ ಪ್ರಚಂಡ ಅಭಿವೃದ್ಧಿಯನ್ನು ಮಾಡುತ್ತಿದೆ; ಎಸ್‌ಎಂ ಕೃಷ್ಣ

ಹಿಂದೆ ಕುಸ್ತಿ ಪಂದ್ಯಾವಳಿ ನಡೆಯುತ್ತಿತ್ತು. ಕೋವಿಡ್ ಕಾರಣದಿಂದ ಈಗ ನಿಂತು ಹೋಗಿದೆ. ಮುಂದೆ ದಸರಾಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಲಿ, ಸಿಂಗಾಪುರ ಮಾದರಿಯಲ್ಲಿ ಮೈಸೂರನ್ನ ಅಭಿವೃದ್ಧಿ ಪಡಿಸಲಿ ಅಂತ ಎಸ್ ಎಂ ಕೃಷ್ಣ ಸಲಹೆ ನೀಡಿದರು.

ಇದೇ ವೇಳೆ ಹಳೆ ದಿನಗಳನ್ನ ಎಸ್ ಎಂ ಕೃಷ್ಣ ನೆನೆಪು ಮಾಡಿಕೊಂಡರು.

ಪ್ರಧಾನಿ ಮೋದಿ ಆಡಳಿತ ಶ್ಲಾಘಿಸಿದ ಎಸ್‌ಎಂಕೆ


ಪ್ರಧಾನಿ ನರೇಂದ್ರ ಮೋದಿ ಬಹಳ ಶ್ರದ್ಧೆಯಿಂದ ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ಮೋದಿ ಬಹಳ ಒಳ್ಳೆಯ ಕೆಲಸ ಮಾಡಿ ದೇಶ ಕಟ್ಟುತ್ತಿದ್ದಾರೆ. ನಾನು ಬಹಳಷ್ಟು ಜನಪ್ರತಿನಿಧಿಗಳ ಆಡಳಿತ ನೋಡಿದ್ದೇನೆ. ಮೋದಿ , ಅಚ್ಚುಕಟ್ಟಾಗಿ ದೇಶ ಕಟ್ಟುತ್ತಿದ್ದಾರೆ. ತಾಯಿ ಚಾಮುಂಡಿ ಮೋದಿ ಅವರಿಗೆ ಇನ್ನಷ್ಟು ಶಕ್ತಿ ಕೊಡಲಿ ಎಂದು ಮಾಜಿ ಸಿಎಂ ಪ್ರಾರ್ಥಿಸಿದರು.

ನಾಡ ಹಬ್ಬ ದಸರಾಕ್ಕೆ ಗತವೈಭವ ಮತ್ತೆ ಮರುಕಳಿಸಲಿ, ಕೋವಿಡ್ ಪಿಡುಗು ಬಿಟ್ಟು ತೊಲಗಲಿ, ನಾಡು ಸುಖ, ಸಮೃದ್ಧಿಯಿಂದ ತುಂಬಲಿ ಎಂದು ಮಾಜಿ ಸಿಎಂ ಎಸ್‌ಎಂ ಕೃಷ್ಣ ಹಾರೈಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ