ಆ್ಯಪ್ನಗರ

ಯಡಿಯೂರಪ್ಪ ನಿವಾಸದಲ್ಲಿ ಕುಮಾರ ಬಂಗಾರಪ್ಪ

ಮಾಜಿ ಸಿಎಂ ದಿವಂಗತ ಎಸ್‌.ಬಂಗಾರಪ್ಪ ಅವರ ಪುತ್ರ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವುದಕ್ಕೆ ವೇದಿಕೆ ಸಜ್ಜಾಗಿದೆ.

ವಿಕ ಸುದ್ದಿಲೋಕ 28 Feb 2017, 9:25 am
ಬೆಂಗಳೂರು: ಮಾಜಿ ಸಿಎಂ ದಿವಂಗತ ಎಸ್‌.ಬಂಗಾರಪ್ಪ ಅವರ ಪುತ್ರ ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರ್ಪಡೆಗೊಳ್ಳುವುದಕ್ಕೆ ವೇದಿಕೆ ಸಜ್ಜಾಗಿದೆ.
Vijaya Karnataka Web kumar bangarappa to join bjp formally soon
ಯಡಿಯೂರಪ್ಪ ನಿವಾಸದಲ್ಲಿ ಕುಮಾರ ಬಂಗಾರಪ್ಪ


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಮಾರ್ಚ್‌ 5 ರಂದು ಸೊರಬದಲ್ಲಿಯೇ ಪಕ್ಷ ಸೇರುವ ಸಾಧ್ಯತೆಗಳಿವೆ. ಇದಕ್ಕೆ ಪೂರಕ ಎಂಬಂತೆ ಸೋಮವಾರ ಬೆಂಗಳೂರಿನ ಡಾಲರ್ಸ್‌ ಕಾಲೊನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಕುಮಾರ ಬಂಗಾರಪ್ಪ,‘‘ಆದಷ್ಟು ಬೇಗ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರುವ ಬಗ್ಗೆ ಸುದ್ದಿಗೋಷ್ಠಿ ಕರೆಯುವೆ. ನಾನು ಮತ್ತು ನನ್ನ ಬೆಂಬಲಿಗರು ಯಡಿಯೂರಪ್ಪ ಜತೆ ಇರಲು ನಿರ್ಧರಿಸಿದ್ದೇವೆ,’’ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ