ಆ್ಯಪ್ನಗರ

ಹೆಬ್ಬಾಳ್ಕರ್ ಹೇಳಿಕೆ: ಕಾಂಗ್ರೆಸ್‌ ಸೇರಿದಂತೆ ಎಲ್ಲರಿಂದ ವಿರೋಧ

ಮಹಾರಾಷ್ಟ್ರದ ಪರವಾಗಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ಹೇಳಿಕೆಗೆ ಕಾಂಗ್ರೆಸ್‌ ಮುಖಂಡರು ಸೇರಿದಂತೆ ರಾಜಕೀಯ ನಾಯಕರಿಂದ ತೀವ್ರ ಟೀಕೆ, ಆಕ್ಷೇಪಗಳು ಕೇಳಿ ಬಂದಿವೆ.

Vijaya Karnataka Web 31 Aug 2017, 3:36 pm
ಬೆಂಗಳೂರು: ಮಹಾರಾಷ್ಟ್ರದ ಪರವಾಗಿ ಕಾಂಗ್ರೆಸ್‌ನ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ಹೇಳಿಕೆಗೆ ಕಾಂಗ್ರೆಸ್‌ ಮುಖಂಡರು ಸೇರಿದಂತೆ ರಾಜಕೀಯ ನಾಯಕರಿಂದ ತೀವ್ರ ಟೀಕೆ, ಆಕ್ಷೇಪಗಳು ಕೇಳಿ ಬಂದಿವೆ.
Vijaya Karnataka Web lakshmi hebbalkar statement about belagavi
ಹೆಬ್ಬಾಳ್ಕರ್ ಹೇಳಿಕೆ: ಕಾಂಗ್ರೆಸ್‌ ಸೇರಿದಂತೆ ಎಲ್ಲರಿಂದ ವಿರೋಧ


ಹೆಬ್ಬಾಳ್ಕರ್ ನೀಡಿರುವ ಹೇಳಿಕೆ ತಪ್ಪು, ಹಾಗೆ ಹೇಳಬಾರದಿತ್ತು ಎಂದು ಕಾಂಗ್ರೆಸ್‌ನ ಸತೀಶ್‌ ಜಾರಕಿ ಹೊಳಿ ಹೇಳಿದ್ದಾರೆ. ಬಿಜೆಪಿಯ ಸುರೇಶ್‌ ಕುಮಾರ್‌ ಅವರು ಕೂಡ ಹೆಬ್ಬಾಳ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಪಿಸಿಸಿ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರು ಕೂಡ ಹೆಬ್ಬಾಳ್ಕರ್ ಅವರ ಈ ಹೇಳಿಕೆಗೆ ಸಂಬಂಧಿಸಿದಂತೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರು ಯಾವ ಸನ್ನಿವೇಶದಲ್ಲಿ ಆ ಹೇಳಿಕೆ ನೀಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಹೇಳಿದ್ದಾರೆ.

ಆತಂಕಕಾರಿ ಹೇಳಿಕೆ: ಸುರೇಶ್‌ ಕುಮಾರ್‌

ಹೆಬ್ಬಾಳ್ಕರ್ ಮಹಾರಾಷ್ಟ್ರ ಪರ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದ ದ್ವಿಮುಖ ನೀತಿ ತೋರಿಸುತ್ತಿದೆ. ರಾಜ್ಯದಲ್ಲಿ ಕನ್ನಡಕ್ಕೆ ಹೊಸ ಧ್ವಜ ತರುವ ಪ್ರಯತ್ನ ಒಂದಡೆ ರಾಜ್ಯ ಸರಕಾರ ಮಾಡುತ್ತಿದ್ದು, ಇನ್ನೊಂದೆಡೆ ಬೆಳಗಾವಿಯಲ್ಲಿ ಲಕ್ಷ್ನಿ ಹೆಬ್ಬಾಳ್ಕರ್‌ ಮಹಾರಾಷ್ಟ್ರ ಪರವಾದ ಹೇಳಿಕೆ ನೀಡುತ್ತಿದ್ದಾರೆ. ಇದು ಆಂತಕಕಾರಿ ಹೇಳಿಕೆಯಾಗಿದೆ ಎಂದರು.

ಕಲಬುರಗಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸಿಗರಲ್ಲಿ ನಿಯತ್ತಿನ ಕೊರತೆ ಇದೆ ಎನ್ನುವುದಕ್ಕೆ ಹೇಳಿಕೆಯೇ ಸಾಕ್ಷಿ. ನಾಡುನುಡಿಯ ಬಗ್ಗೆ ನಿಯತ್ತಾಗಿರಬೇಕು. ಅದನ್ನು ಬಿಟ್ಟು ಮಹಾರಾಷ್ಟ್ರಕ್ಕೆ ಬೆಂಬಲಿಸಿರುವ ಹೆಬ್ಬಾಳಕರ್' ಹೇಳಿಕೆ ಖಂಡನೀಯ.ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಡುವುದು ಪಕ್ಷದ ಆಂತರಿಕ ವಿಚಾರ. ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಂದೆ ಬಿಜೆಪಿಯಿಂದ ಯಾವ ರೀತಿ ಹೋರಾಟ ಮಾಡಬೇಕು ಅನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

ಎಂಎಲ್'ಸಿ ಭಾರತಿ ಶೆಟ್ಟಿ ಕೂಡ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ಓಟು ನೀಡಿದ ಮತ್ತು ಅನ್ನ ಸೇವಿಸಿದ ನೆಲಕ್ಕೆ ನಿಯತ್ತಿನಿಂದಿರುವುದನ್ನು ಕಲಿಸಿದೆ. ಅದು ಪಕ್ಷದ ಶಿಸ್ತು. ಆದರೆ, ಕಾಂಗ್ರೆಸ್'ನಲ್ಲಿ ಇದು ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ನ್ಯಾಯಾಲಯದಲ್ಲಿರುವ ಗಡಿ ವಿವಾದ ತೀರ್ಪು ಮಹಾರಾಷ್ಟ್ರದ ಪರವಾಗಿ ಬಂದರೆ 'ಮಹಾ' ಧ್ವಜ ಹಿಡಿದು ಮೊದಲು ನಾನೇ 'ಜೈ ಮಹಾರಾಷ್ಟ್ರ' ಎನ್ನುತ್ತೇನೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಗಡಿ ವಿವಾದ ವಿಚಾರಣೆ ಹಂತದಲ್ಲಿ ಇರುವಾಗಲೇ ನಿರ್ಣಾಯಕ ರೀತಿಯಲ್ಲಿ ಹೆಬ್ಬಾಳ್ಕರ್ ಭಾಷಣ ಮಾಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ