ಆ್ಯಪ್ನಗರ

ವೈರಲ್‌ ಫಿವರ್‌ ಬಗ್ಗೆ ನಿಮಗೆಷ್ಟು ಗೊತ್ತು?

ಹವಾಮಾನ ಬದಲಾಗುತ್ತ ಹೋದಂತೆ ನಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ತುಂಬ ಮಹತ್ವವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ಸಣ್ಣ ನಿರ್ಲಕ್ಷ ಭಾರಿ ಅನಾಹುತಕ್ಕೆ ಕಾರಣವಾಗುವುದಂತೂ ಖಂಡಿತ.

ಟೈಮ್ಸ್ ಆಫ್ ಇಂಡಿಯಾ 23 Jan 2017, 12:48 pm
ಹವಾಮಾನ ಬದಲಾಗುತ್ತ ಹೋದಂತೆ ನಮ್ಮ ಆರೋಗ್ಯದ ಕಡೆ ಗಮನ ಹರಿಸುವುದು ತುಂಬ ಮಹತ್ವವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ಸಣ್ಣ ನಿರ್ಲಕ್ಷ ಭಾರಿ ಅನಾಹುತಕ್ಕೆ ಕಾರಣವಾಗುವುದಂತೂ ಖಂಡಿತ.
Vijaya Karnataka Web changing weather increases viral fever cases in delhi
ವೈರಲ್‌ ಫಿವರ್‌ ಬಗ್ಗೆ ನಿಮಗೆಷ್ಟು ಗೊತ್ತು?


ರಾಷ್ಟ್ರ ರಾಜಧಾನಿ ದಿಲ್ಲಿಯ ವೈದ್ಯರ ಪ್ರಕಾರ ಹವಾಮಾನದಲ್ಲಾಗುವ ಬದಲಾವಣೆಗಳು ನೇರವಾಗಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹಿಂದೊಮ್ಮೆ ಮಳೆಗಾಲದ ಸಂದರ್ಭದಲ್ಲಿ ಹೆಚ್ಚು ಜನರು ಅನಾರೋಗ್ಯದಿಂದ ಬಳಲಿದ ಉದಾಹರಣೆಯನ್ನ ಅವರು ನೀಡುತ್ತಾರೆ. ಅದರಲ್ಲೂ ಇಂಥ ಸಂದರ್ಭದಲ್ಲಿ ಮಕ್ಕಳ ಕಡೆಗೆ ಗಮನ ಹರಿಸಿ, ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡು, ಕಾಳಜಿಯಿಂದ ನೋಡಿಕೊಳ್ಳುವುದು ಉತ್ತಮ.

ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಡೆಂಗ್ಯೂ ಪರೀಕ್ಷೆಗೆ ಒಳಗಾಗುವುದು ಉತ್ತಮ. ಒಂದು ವೇಳೆ ಡೆಂಗ್ಯೂ ಇದೆ ಎಂದಾದಲ್ಲಿ ಸೂಕ್ತ ರೀತಿಯ ಚಿಕಿತ್ಸೆ ನೀಡುವ ಮೂಲಕ ಆಗಬೇಕಾದ ಅಪಾಯವನ್ನು ತಡೆಗಟ್ಟಬಹುದು. ಅದರಲ್ಲೂ ಹೆಚ್ಚಾಗಿ ಮಕ್ಕಳು ಈ ರೀತಿಯ ಕಾಯಿಲೆಗಳಿಗೆ ಬೇಗನೆ ತುತ್ತಾಗುತ್ತಾರೆ.

ಡೆಂಗ್ಯೂ ಕಾಯಿಲೆಗೆ ತುತ್ತಾದವರಲ್ಲಿ 90 ಪ್ರತಿಶತ ರೋಗಿಗಳು ಸಾವನ್ನಪ್ಪಿದ ಘಟನೆ ಈ ಹಿಂದೆ ದಿಲ್ಲಿಯಲ್ಲಿ ನಡೆದಿತ್ತು. ಅಷ್ಟೇ ಅಲ್ಲದೆ ಒಂದೇ ಆಸ್ಪತ್ರೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳು ಜ್ವರದಿಂದ ಬಳಲಿದ ಘಟನೆ ಕೂಡ ಬೆಳಕಿಗೆ ಬಂದಿತ್ತು.

ಹಿರಿಯ ವೈದ್ಯರಾದ ಶಂತಾನು ಡಗರ್‌, ಡೆಂಗ್ಯೂ ಕಾಯಿಲೆಯ ಪ್ರಮುಖ ಲಕ್ಷಣಗಳನ್ನ ಈ ರೀತಿಯಾಗಿ ವಿವರಿಸಿದ್ದಾರೆ. 'ಮೊದಲು ನಿರ್ಜಲೀಕರಣದಿಂದಾಗಿ ದೇಹ ವಿಪರೀತ ಬೆವರುತ್ತದೆ. ದೇಹದ ಉಷ್ಣಾಂಶದಲ್ಲಿ ಏರುಪೇರಾಗುವುದಲ್ಲದೆ ತಲೆನೋವು, ಬಲಹೀನತೆ ಮತ್ತು ಶೀತದ ಲಕ್ಷಣಗಳು ಕಂಡುಬರುತ್ತವೆ. ಸಾಮಾನ್ಯ ಜ್ವರದ ಲಕ್ಷಣಗಳಾಗಿದ್ದಲ್ಲಿ ಸೂಕ್ತ ಚಿಕಿತ್ಸೆಯೊಂದಿಗೆ ಅದು ಮೂರು ದಿನಗಳಲ್ಲಿಯೇ ವಾಸಿಯಾಗುತ್ತದೆ. ಆದರೆ ಈ ಲಕ್ಷಣಗಳು ಒಂದು ವಾರದ ತನಕ ಇದ್ದಲ್ಲಿ ರೋಗಿಯೂ ಕಡ್ಡಾಯವಾಗಿ ರಕ್ತ ಪರೀಕ್ಷೆ ಮತ್ತು ಡೆಂಗ್ಯೂ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ' ಎಂದು ಸೂಚನೆ ನೀಡಿದ್ದಾರೆ.

ಅದರಲ್ಲೂ ಮಕ್ಕಳ ಬಗ್ಗೆ ಈ ಸಂದರ್ಭದಲ್ಲಿ ಅತಿ ಹೆಚ್ಚು ಕಾಳಜಿ ವಹಿಸುವುದು ಉತ್ತಮ. ಈ ರೀತಿಯ ಲಕ್ಷಣಗಳು ಕಂಡುಬಂದಲ್ಲಿ 2-3 ದಿನಗಳಲ್ಲಿಯೇ ರಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಒಂದು ವೇಳೆ ನಿರ್ಲಕ್ಷಿಸಿದ್ದೇ ಆದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಬದಲಾಗುವ ಹವಾಮಾನದೊಂದಿಗೆ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಉಂಟಾಗುವ ಅಪಾಯವನ್ನು ತಪ್ಪಿಸಬಲ್ಲದು. Read in English

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ