ಆ್ಯಪ್ನಗರ

ರಾಜ್ಯದಲ್ಲಿ 2,113 ಕಾನ್ಸ್‌ಟೇಬಲ್‌ ನೇಮಕ

ಒಂದು ವಾರದ ಹಿಂದೆಯಷ್ಟೇ ಕೆಎಸ್‌ಆರ್‌ಪಿ ಮತ್ತು ಕೆಎಸ್‌ಐಎಸ್‌ಎಫ್‌ ವಿಭಾಗಗಳಲ್ಲಿನ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದ ಇಲಾಖೆ ಈಗ ನಾಗರಿಕ ಕಾನ್ಸ್‌ಟೇಟಬಲ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ.

Vijaya Karnataka 12 Jun 2018, 3:02 pm
ಸಿವಿಲ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ | ಮಹಿಳೆಯರಿಗೆ 423 ಹುದ್ದೆ ಮೀಸಲು
Vijaya Karnataka Web constable

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್‌ 30, 2018
ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ: ಜುಲೈ 3, 2018
ಸಹಾಯವಾಣಿ ಸಂಖ್ಯೆ : 080-22943346
ಹೆಚ್ಚಿನ ಮಾಹಿತಿಗೆ ವೆಬ್‌ ವಿಳಾಸ: www.ksp.gov.in

ರಾಜ್ಯ ಪೊಲೀಸ್‌ ಇಲಾಖೆಯು ಪೊಲೀಸ್‌ ಕಾನ್ಸ್‌ಟೇಬಲ್‌ (ನಾಗರಿಕ) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಒಂದು ವಾರದ ಹಿಂದೆಯಷ್ಟೇ ಕೆಎಸ್‌ಆರ್‌ಪಿ ಮತ್ತು ಕೆಎಸ್‌ಐಎಸ್‌ಎಫ್‌ ವಿಭಾಗಗಳಲ್ಲಿ ನ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದ ಇಲಾಖೆ ಈಗ ನಾಗರಿಕ ಕಾನ್ಸ್‌ಟೇಟಬಲ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. ಒಟ್ಟು 2,113 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಇದರಲ್ಲಿ 423 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್‌ 30ಕೊನೆಯ ದಿನವಾಗಿದೆ.

ಅರ್ಹತೆಗಳೇನು?

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಮತ್ತು ಗರಿಷ್ಠ ವಯೋಮಿತಿ 25 ವರ್ಷ. ಪರಿಶಿಷ್ಟ ಜಾತಿ/ ಪಂಗಡ ಮತ್ತು ಒಬಿಸಿ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 27 ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಠ ವಯೋಮಿತಿ 30 ವರ್ಷ.

ದೈಹಿಕ ಅರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 168 ಸೆಂ.ಮೀ. ಎತ್ತರವಿರಬೇಕು ಮತ್ತು ಎದೆ ಸುತ್ತಳತೆ 86 ಸೆಂ.ಮೀ. (ಪೂರ್ತಿ ವಿಸ್ತರಿಸಿದಾಗ) ಇರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 157 ಸೆಂ.ಮೀ.ಎತ್ತರವಿರಬೇಕು ಮತ್ತು 45 ಕೆ.ಜಿ.ತೂಕ ಹೊಂದಿರಬೇಕು. ಬುಡಕಟ್ಟು ಪುರುಷ ಅಭ್ಯರ್ಥಿಗಳು 155 ಸೆಂ.ಮೀ. ಎತ್ತರವಿರಬೇಕು, ಮಹಿಳಾ ಅಭ್ಯರ್ಥಿಗಳು 150 ಸೆಂ.ಮೀ. ಎತ್ತರವಿರಬೇಕು.

ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 250 ರೂಪಾಯಿ ಮತ್ತು ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಶುಲ್ಕವನ್ನು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಅಥವಾ ಪೋಸ್ಟ್‌ ಆಫೀಸ್‌ನಲ್ಲಿ ಚಲನ್‌ ಮೂಲಕ ಪಾವತಿಸಬಹುದು.

ವೇತನ ಶ್ರೇಣಿ: ರೂ. 11,600-200-12,000-250-13,000-300-14,200-350-15,600-400-17,200-450-19,000-500-21,000

ಮೊದಲಿಗೆ ಲಿಖಿತ ಪರೀಕ್ಷೆ

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡ ನಂತರ ಎಲ್ಲರಿಗೂ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ( 1:5ರ ಅನುಪಾತದಲ್ಲಿ ಆಯ್ಕೆ) ಮಾತ್ರ ದೇಹದಾಢ್ರ್ಯತೆ ಮತ್ತು ಸಹಿಷ್ಠುತೆ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ಸಂಬಂಧಪಟ್ಟ ಪೊಲೀಸ್‌ ಅಧೀಕ್ಷಕರ ಕಚೇರಿಯು ನಿಗದಿಪಡಿಸಿದ ಸ್ಥಳದಲ್ಲಿ ನಡೆಸುತ್ತದೆ. ಲಿಖಿತ ಪರೀಕ್ಷೆಯು ಹಿಂದಿನಂತೆಯೇ ವಸ್ತುನಿಷ್ಠ ಮಾದರಿಯಲ್ಲಿ ನಡೆಯಲಿದ್ದು, ಇದರಲ್ಲಿ ಮತ್ತು ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆಗೊಳಪಡಿಸಿ, ದಾಖಲೆಗಳ ಪರಿಶೀಲನೆ ನಡೆಸಿದ ಬಳಿಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಇತ್ತ ಗಮನಿಸಿ


*ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
*ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್‌ 30, 2018ರೊಳಗೆ ಅಭ್ಯರ್ಥಿಗಳು 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯ ಅಂಕಪಟ್ಟಿಯನ್ನು ಹೊಂದಿರಬೇಕು.
* ನೇಮಕಾತಿಗೆ ಸಂಬಂಧಿಸಿದ ಎಲ್ಲಾ ವಿವರಗಳು ವೆಬ್‌ಸೈಟ್‌ನಲ್ಲಿ ಲಭ್ಯ. ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
* ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ.
* ಅರ್ಜಿ ಸಲ್ಲಿಸುವಾಗ ಸಮಸ್ಯೆಗಳು ಕಂಡು ಬಂದಲ್ಲಿ ಸಹಾಯವಾಣಿಗೆ ಕರೆ ಮಾಡಿ. ಅಂಚೆ ಮೂಲಕ ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡಲಾಗುವುದಿಲ್ಲ.
*ನೇಮಕಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಡೇಟ್‌ ಮಾಡಲಾಗುತ್ತದೆ. ಹಾಗಾಗಿ, ಅಭ್ಯರ್ಥಿಗಳು ಆಗಾಗ ವೆಬ್‌ಸೈಟ್‌ ವೀಕ್ಷಿಸುವಂತೆ ಸೂಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ