ಆ್ಯಪ್ನಗರ

50 ಸಾವಿರ ಹುದ್ದೆಗಳಿಗೆ ಪರೀಕ್ಷೆ ಬರೆದವರ ಸಂಖ್ಯೆ 30 ಲಕ್ಷ!

52,20,335 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರಾದರೂ, ಬರೆಕ್ಷೆ ಬರೆದವರ ಸಂಖ್ಯೆ ಕೇವಲ ಶೇ. 58.26 ಅಭ್ಯರ್ಥಿಗಳು ಮಾತ್ರ.

Vijaya Karnataka 15 Mar 2019, 2:42 pm
ಹೊಸದಿಲ್ಲಿ: ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕೇಂದ್ರ ಶಸ್ತ್ರಾಸ್ತ್ರ ಪಡೆಗಳು ಸೇರಿದಂತೆ ಅಸ್ಸಾಂ ರೈಫಲ್ಸ್‌, ಎಸ್‌ಎಸ್‌ಬಿ ಮತ್ತು ರಾಷ್ಟ್ರೀಯ ತನಿಖಾ ದಳದಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಕ್ಕೆ ಕಳೆದ ಫೆಬ್ರವರಿ 11ರಿಂದ ಮಾರ್ಚ್‌ 11ರ ವರೆಗೆ ನಡೆಸಿದ್ದ ಕಂಪ್ಯೂಟರ್‌ ಆಧರಿತ ಪರೀಕ್ಷೆ ನ್ನು ಒಟ್ಟು 30,41,284ಅಭ್ಯರ್ಥಿಗಳು ಬರೆದಿದ್ದಾರೆ.
Vijaya Karnataka Web Board Exam


ಒಟ್ಟು 58,373 ಹುದ್ದೆಗಳ ನೇಮಕಕ್ಕೆ ಈ ಪರೀಕ್ಷೆ ನಡೆಸಲಾಗಿತ್ತು. 52,20,335 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರಾದರೂ, ಬರೆಕ್ಷೆ ಬರೆದವರ ಸಂಖ್ಯೆ ನಿರೀಕ್ಷೆಗಿಂತ ಕಡಿಮೆ ಇತ್ತು. ಕೇವಲ ಶೇ. 58.26 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ ಎಂದು ಎಸ್‌ಎಸ್‌ಸಿಯ ಪ್ರಕಟಣೆಯು ತಿಳಿಸಿದೆ.

ದೇಶದ ವಿವಿಧ ಭಾಗಗಳಲ್ಲಿನ 125 ನಗರಗಳಲ್ಲಿ 297 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಪ್ರತಿದಿನ 3 ಶಿಫ್ಟ್‌ಗಳಂತೆ ಒಟ್ಟು 54 ಶಿಫ್ಟ್‌ಗಳಲ್ಲಿ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ನಡೆದಿತ್ತು.

ಈಗ ಮೌಲ್ಯಮಾಪನ ಆರಂಭಗೊಂಡಿದ್ದು, ಮೇ 31ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಎಸ್‌ಎಸ್‌ಸಿಯು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌: https://ssc.nic.in


ಕೂಡಲೇ ಅರ್ಜಿ ಸಲ್ಲಿಸಿ: ಆಯೋಗವು ಈಗಾಗಲೇ ಕಂಬೈನ್ಡ್‌ ಹೈಯರ್‌ ಸೆಕೆಂಡರಿ ಲೆವೆಲ್‌ (10+2) ಪರೀಕ್ಷೆಗೆ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸ್ಲಲಿಸಬೇಕೆಂದು ಎಸ್‌ಎಸ್‌ಸಿಯು ಕೋರಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್‌ 5 ಕೊನೆಯ ದಿನವಾಗಿರುತ್ತದೆ. ಕೊನೆಯ ದಿನಗಳಲ್ಲಿ ಹೆಚ್ಚಿನ ಒತ್ತಡ ಉಂಟಾಗಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ಅಭ್ಯರ್ಥಿಗಳು ಮೊದಲೇ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಆಯೋಗವು ವಿಶೇಷ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ