ಆ್ಯಪ್ನಗರ

UPSC NDA Recruitment 2019: ಎನ್‌ಡಿಎ-ಎನ್‌ಎ ಪರೀಕ್ಷೆಗೆ ಅಧಿಸೂಚನೆ - 392 ಅಭ್ಯರ್ಥಿಗಳಿಗೆ ಅವಕಾಶ

2019ರ ಏಪ್ರಿಲ್‌ 21ರಂದು ಪರೀಕ್ಷೆ ನಡೆಯಲಿದೆ. ರಾಜ್ಯದ ಅಭ್ಯರ್ಥಿಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

Vijaya Karnataka 10 Jan 2019, 2:49 pm
ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಏಪ್ರಿಲ್‌ನಲ್ಲಿ ನಡೆಸಲಿರುವ ಮೊದಲ ಹಂತದ ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ಮತ್ತು ನೇವಲ್‌ ಅಕಾಡೆಮಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಫೆಬ್ರವರಿ 14ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Vijaya Karnataka Web jobs


2019ರ ಏಪ್ರಿಲ್‌ 21ರಂದು ಪರೀಕ್ಷೆ ನಡೆಯಲಿದೆ. ರಾಜ್ಯದ ಅಭ್ಯರ್ಥಿಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿಗೆ 342(ಭೂಸೇನೆ-208, ನೌಕಾಪಡೆ-42 ಮತ್ತು ವಾಯುಪಡೆ-92) ಮತ್ತು ನೇವಲ್‌ ಅಕಾಡೆಮಿಗೆ 50 ಅಭ್ಯರ್ಥಿಗಳು ಸೇರಿ ಈ ಬಾರಿ ಒಟ್ಟು 392 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 14, 2019

ಪರೀಕ್ಷೆ ನಡೆಯುವ ದಿನಾಂಕ: ಏಪ್ರಿಲ್‌ 21, 2019

ರಾಜ್ಯದಲ್ಲಿ ಪರೀಕ್ಷಾ ಕೇಂದ್ರ: ಬೆಂಗಳೂರು ಮತ್ತು ಧಾರವಾಡ

ಫಲಿತಾಂಶ ಪ್ರಕಟ: ಜೂನ್‌, 2019

ಸಹಾಯವಾಣಿ ಸಂಖ್ಯೆ: 011-23385271/23381125/23098543

ವೆಬ್‌ವಿಳಾಸ: www.upsc.gov.in


ಅರ್ಹತೆ ಏನು?

ಕಲೆ, ವಿಜ್ಞಾನ, ವಾಣಿಜ್ಯ, ತಾಂತ್ರಿಕ ಇತ್ಯಾದಿ ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ಅವಿವಾಹಿತ ಯುವಕರು ಈ ಪರೀಕ್ಷೆ ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. 2019ರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳೂ ಅರ್ಜಿಸಲ್ಲಿಸಬಹುದು. ನೌಕಾ ಸೇನೆ ಮತ್ತು ವಾಯುಸೇನೆ ವಿಭಾಗಕ್ಕೆ ಸೇರಬೇಕೆಂದು ಇಚ್ಚಿಸಿದ್ದಲ್ಲಿ ದ್ವಿತೀಯ ಪಿಯುಸಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯವನ್ನು ಕಡ್ಡಾಯವಾಗಿ ಕಲಿತಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2000ನೇ ಇಸವಿ ಜುಲೈ 2 ಮತ್ತು 2003ನೇ ಇಸವಿ ಜುಲೈ 1ರ ನಡುವೆ ಜನಿಸಿರಬೇಕು.

ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ ಮತ್ತು ಸೇನೆಯ ಅಧಿಕಾರಿಗಳ (ಜೆಸಿಎ/ಎನ್‌ಸಿಎ/ಒಆರ್‌) ಪುತ್ರರಾಗಿದ್ದಲ್ಲಿ ಅಂಥ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಯಾವುದೇ ಎಸ್‌ಬಿಐ ಶಾಖೆಯಲ್ಲಿ ಶುಲ್ಕ ಪಾವತಿಸಬಹುದಾಗಿದೆ ಅಥವಾ ವೀಸಾ ಕಾರ್ಡ್‌/ಮಾಸ್ಟರ್‌ ಕಾರ್ಡ್‌/ರುಪೇ ಕಾರ್ಡ್‌ /ಡೆಬಿಟ್‌ ಕಾರ್ಡ್‌ಗಳ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ನ್ಯಾಷನಲ್‌ ಡಿಫೆನ್ಸ್‌ ಅಕಾಡೆಮಿ ಅಥವಾ ನೇವಲ್‌ ಅಕಾಡೆಮಿಗೆ ಆಯ್ಕೆಯಾಗಲು ಅಭ್ಯರ್ಥಿಯು ಮೂರು ಹಂತಗಳನ್ನು ದಾಟಬೇಕು. ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪ್ರವೇಶ ಪರೀಕ್ಷೆ ಮೊದಲನೇ ಹಂತ. ಇದರಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ಬೌದ್ಧಿಕ ಹಾಗೂ ವ್ಯಕ್ತಿತ್ವ ಪರೀಕ್ಷೆಗೆ ಹಾಜರಾಗಬೇಕು. ಅಧಿಕಾರಿಗೆ ಇರಬೇಕಾದ ಅರ್ಹತೆಗಳನ್ನು ಈ ವ್ಯಕ್ತಿತ್ವ ಪರೀಕ್ಷೆಯ ಸಂದರ್ಭದಲ್ಲಿ ಒರೆಗೆ ಹಚ್ಚಿ ನೋಡಲಾಗುತ್ತದೆ. ಈ ಎರಡನೇ ಹಂತ ದಾಟಿದ ಅಭ್ಯರ್ಥಿಗಳು ಎಸ್‌ಎಸ್‌ಬಿ ನಡೆಸುವ ದೈಹಿಕ ಸಾಮರ್ಥ್ಯ‌ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಗೆ ಹಾಜರಾಗಬೇಕು. ಈ ಮೂರೂ ಹಂತಗಳಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಿಗೆ ಅವರವರ ಆಯ್ಕೆಯ ಕೋರ್ಸ್‌ಗಳಿಗೆ ಲಭ್ಯತೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ