ಆ್ಯಪ್ನಗರ

ಮೈಸೂರಿನ ಶ್ರೀ ಚಾಮುಂಡೇಶ್ವರಿ ಶ್ರೀಕ್ಷೇತ್ರದ ವಿಶೇಷತೆ

ಕರ್ನಾಟಕದ ಸಾಂಸಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶ್ರೀ ಚಾಮುಂಡೇಶ್ವರಿ ಶ್ರೀಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.

Vijaya Karnataka Web 23 May 2018, 3:42 pm
ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿರುವ ಶ್ರೀ ಚಾಮುಂಡೇಶ್ವರಿ ಶ್ರೀಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ.
Vijaya Karnataka Web chamundeshwari


ಚಾಮುಂಡಿ ಬೆಟ್ಟದಲ್ಲಿರುವ ಈ ದೇವಾಲಯ ಚೌಕಾಕೃತಿಯಲ್ಲಿ ನಿರ್ಮಾಣವಾಗಿದೆ. ಈ ದೇವಾಲಯವನ್ನು ದ್ರಾವಿಡ ಶೈಲಿಯಲ್ಲಿ ಕಟ್ಟಲಾಗಿದ್ದು ಹೆಬ್ಬಾಗಿಲು, ಪ್ರವೇಶ ದ್ವಾರ, ನವರಂಗ, ಅಂತರಾಳ, ಗರ್ಭಗೃಹ, ಮತ್ತು ಪ್ರಾಕಾರಗಳನ್ನು ಹೊಂದಿದೆ. ಚಾಮುಂಡೇಶ್ವರಿ
ದೇವಾಲಯದ ಮಹಾದ್ವಾರದ ಮೇಲೆ ಸುಂದರವಾದ 'ಗೋಪುರ' ಹಾಗೂ ಗರ್ಭ ಗುಡಿಯ ಮೇಲೆ 'ವಿಮಾನ' ಶಿಖರಗಳಿವೆ. ಏಳು ಅಂತಸ್ತುಗಳ ಗೋಪುರ 19ನೇ ಶತಮಾನದಲ್ಲಿ ನಿರ್ಮಿತವಾಗಿದ್ದು ಪಿರಮಿಡ್‌ ಆಕಾರದಲ್ಲಿ ದ್ರಾವಿಡ ಶೈಲಿಯಲ್ಲಿದೆ.

ಇಲ್ಲಿ ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿ ದುರ್ಗಾದೇವಿಯ ರೌದ್ರಾವತಾರದಲ್ಲಿ ವಿರಾಜಮಾನವಾಗಿರುವ ವಿಗ್ರಹ ಇದೆ. ಮಹಿಷಾಸುರ ಎಂಬ ರಾಕ್ಷಸನ ಉಪಟಳ ಸಹಿಸಲು ಅಸಾಧ್ಯವಾದಾಗ ದೇವತೆಗಳೆಲ್ಲಾ ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರನ ಮೊರೆ ಹೋಗುತ್ತಾರೆ.

ನಂತರ ದೇವತೆಗಳು ತಮ್ಮ ಶಕ್ತಿಯನ್ನು ಒಟ್ಟುಗೂಡಿಸಿ ದೇವಿಯನ್ನು ಸೃಷ್ಟಿಸುತ್ತಾರೆ. ಆ ದೇವಿ ಉಗ್ರ ಸ್ವರೂಪವನ್ನು ತಾಳಿ ರಾಕ್ಷಸನನ್ನು ಸಂಹಾರ ಮಾಡುತ್ತಾಳೆ. ದುಷ್ಟಶಕ್ತಿಯ ಸಂಹಾರವಾದ ಪ್ರತೀಕವಾಗಿ ನವರಾತ್ರಿ ಹಬ್ಬವನ್ನು ಆಚರಿಸಲಾಗುವುದು.

ಇಲ್ಲಿರುವ ದೇವಿಯ ವಿಗ್ರಹವನ್ನು ಮಾರ್ಖಂಡೇಯ ಋಷಿಗಳು ಸ್ಥಾಪಿಸಿದರೆಂದು ಪುರಾಣ ಹೇಳುತ್ತದೆ. 1827ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ಪುರಾತನ ದೇವಾಲಯವನ್ನು ಜೀರ್ಣೋದ್ಧಾರ ಮಾಡಿ ಮಹಾದ್ವಾರದ ಮೇಲೆ ದೊಡ್ಡ ಗೋಪುರವನ್ನು ಕಟ್ಟಿಸಿ, 'ಸಿಂಹ ವಾಹನ'ವನ್ನು ಕೊಡುಗೆಯಾಗಿ ನೀಡುತ್ತಾರೆ. ರಥೋತ್ಸವ ಸಂದರ್ಭದಲ್ಲಿ ಈ ಸಿಂಹ ವಾಹನದಲ್ಲಿ ನಾಡ ದೇವತೆಯನ್ನು ಕೂರಿಸಿ ಮೆರವಣಿಗೆ ಮಾಡಲಾಗುವುದು.

ಈ ದೇವಾಲಯಕ್ಕೆ ರಾಜ್ಯ-ಹೊರ ರಾಜ್ಯದ ಭಕ್ತರಲ್ಲದೆ ವಿದೇಶಿಯರು ಭೇಟಿ ನೀಡುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ