ಆ್ಯಪ್ನಗರ

73ನೇ ಸ್ವಾತಂತ್ರ್ಯ ದಿನಾಚರಣೆ: ಅರ್ಥಪೂರ್ಣ ಸಂದೇಶ, ಶುಭಾಶಯಗಳು

73ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಇಡೀ ದೇಶ ಸಡಗರ ಸಂಭ್ರಮದಿಂದ ಸಜ್ಜಾಗಿದೆ. ಈ ಭಾರಿ ಆರ್ಟಿಕಲ್‌ 370 ರದ್ದಾಗಿದ್ದು, ಕಾಶ್ಮೀರದಲ್ಲೂ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ.

Vijaya Karnataka Web 15 Aug 2019, 7:47 am
ಇಂದು ನಾವು ಆಚರಿಸುತ್ತಿರುವ 73ನೇ ಸ್ವಾತಂತ್ರ್ಯ ದಿನಾಚರಣೆ ಹಿಂದೆ ನಮ್ಮ ಪೂರ್ವಜರು ಮಾಡಿರುವ ತ್ಯಾಗದ ಫಲ. ಅವರ ಬಲಿದಾನವನ್ನು ಸ್ಮರಿಸುತ್ತಾ, ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುವ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನ ಮೇಲಿದೆ.
Vijaya Karnataka Web independence day3


ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಸಾರುವ ಅರ್ಥಪೂರ್ಣ ಸಂದೇಶಗಳು ನೋಡಿ ಇಲ್ಲಿವೆ:
* ಸ್ವಾತಂತ್ರ್ಯ ಎಂಬುವುದು ಪ್ರತಿಯೊಬ್ಬ ಜೀವನದಲ್ಲಿ ಬಹುಮುಖ್ಯವಾದ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ಸ್ವಾತಂತ್ರ್ಯ ದಿನಾಚರಣೆ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನ ಫಲ. ಅವರ ಬಲಿದಾನವನ್ನು ಸಾರ್ಥಕವಾಗಿಸೋಣ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ಸ್ವಾತಂತ್ರ್ಯ ದಿನಾಚರಣೆ ಎಂಬುವುದು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದ ಹೀರೋಗಳನ್ನು ಸ್ಮರಿಸುವ ದಿನ. ಜೈ ಹಿಂದ್

* ದೇಶದ ತಿರಂಗ ಧ್ವಜ ಹಾರುವಾಗ ನಮ್ಮ ಎದೆಯು ಹೆಮ್ಮೆಯಿಂದ ಉಬ್ಬುತ್ತದೆ, ಸಂತೋಷವನ್ನು ಹರಡುತ್ತದೆ. ನಮ್ಮ ದೇಶ ನಮ್ಮ ಹೆಮ್ಮೆ-ಜೈ ಹಿಂದ್‌, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ನಮ್ಮನ್ನು ನಿನ್ನ ತೋಳಿನಲ್ಲಿ ಅಪ್ಪಿಕೊಂಡಿರುವುದಕ್ಕೆ ಧನ್ಯವಾದಗಳು ಭಾರತಮಾತೆ, ನಿನ್ನ ರಕ್ಷಣೆ ನಮ್ಮ ಹೊಣೆ, ಅದಕ್ಕಾಗಿ ಎಂಥ ಬಲಿದಾನಕ್ಕೂ ಸದಾ ಸಿದ್ಧ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ಸ್ವಾತಂತ್ರ್ಯವಿಲ್ಲದ ಮೇಲೆ ಹೆಸರಿಲ್ಲ, ಗುರಿಯಿಲ್ಲ, ದೇಶವಿಲ್ಲ, ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡಿ ನಮಗೆ ಸ್ವಾತಂತ್ರ್ಯಕೊಡಿಸಿದ್ದಾರೆ, ಅವರಿಗೆ ನಮ್ಮ ನಮನಗಳು, 74ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ಈ ದೇಶಕ್ಕೆ ಸ್ವಾತಂತ್ರ್ಯ ನೀಡಲು ಲಕ್ಷಾಂತರು ದೇಶ ಭಕ್ತರು ತಮ್ಮ ರಕ್ತವನ್ನು ಬಲಿದಾನ ಮಾಡಿದ್ದಾರೆ, ಅವರಿಗೆ ನಮ್ಮದೊಂದು ಸಲಾಂ-ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

* ನಮ್ಮ ಹಿರಿಯರ ಬಲಿದಾನ ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ನಾವು ದೇಶದ ರಕ್ಷಣೆಗಾಗಿ ಸದಾ ಸಿದ್ಧ-ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ