ಆ್ಯಪ್ನಗರ

ಗ್ಯಾಸ್ಟ್ರಿಕ್‌ ಸಮಸ್ಯೆ ಇರುವವರಿಗೆ ಈ ಆಹಾರಗಳು ಒಳ್ಳೆಯದಲ್ಲ

ಕೆಲವೊಂದು ಆಹಾರಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಆದರೆ ಅವುಗಳನ್ನು ತಿಂದರೆ ಹೊಟ್ಟೆ ಉಬ್ಬರಿಸುವುದು, ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗುವುದು. ಇಲ್ಲಿ ಗ್ಯಾಸ್ಟ್ರಿಕ್ ಸಮಸ್ಯೆ ಉಂಟು ಮಾಡುವ ಸೂಪರ್‌ಫುಡ್‌ಗಳ ಬಗ್ಗೆ ಹೇಳಿದ್ದೇವೆ.

Vijaya Karnataka Web 24 Aug 2020, 5:31 pm
ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಈ ಆಹಾರವನ್ನು ಮಿತಿಯಲ್ಲಿ ತಿಂದರೆ ಒಳ್ಳೆಯದು:
Vijaya Karnataka Web water melon


ಕಲ್ಲಂಗಡಿ ಹಣ್ಣು:
ಇದರಲ್ಲಿ ಫ್ರೂಕ್ಟೋಸ್‌ ಮತ್ತು ಸಕ್ಕರೆಯಂಶ ಇದ್ದು, ಜೀರ್ಣಕ್ರಿಯೆಗೆ ತೊಂದರೆ ಉಂಟಾಗುವುದು.

ಮಾವಿನ ಹಣ್ಣು:
ಮಾವಿನಹಣ್ಣಿನಲ್ಲಿ ಲ್ಯಾಕ್ಟೋಸ್‌ಗಿಂತ ಫ್ರೂಕ್ಟೋಸ್‌ ಅಂಶ ಅಧಿಕವಿದ್ದು, ಇದನ್ನು ತಿಂದರೆ ಕೆಲವರಿಗೆ ಅಜೀರ್ಣ ಉಂಟಾಗಿ ಗ್ಯಾಸ್ಟ್ರಿಕ್‌ ಸಮಸ್ಯೆ ಉಂಟಾಗುವುದು.

ಸೇಬು:ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಸೇಬು ತಿಂದರೆ ಹೊಟ್ಟೆ ಉಬ್ಬರಿಸುವುದು.

ಪ್ಲಮ್‌ ಹಣ್ಣು:ಪ್ಲಮ್‌ ಹಣ್ಣು ಕೂಡ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚು ಮಾಡುವುದು.

ಬೆಣ್ಣೆಹಣ್ಣು: ಬೆಣ್ಣೆಹಣ್ಣು ಕೂಡ ಗ್ಯಾಸ್ಟ್ರಿಕ್‌ ಸಮಸ್ಯೆ ಹೆಚ್ಚು ಮಾಡುವುದು.

ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿ ಫ್ರೂಕ್ಟೋಸ್‌ ಕಣಗಳಿರುವುದರಿಂದ ಇದು ಕೂಡ ಗ್ಯಾಸ್ಟ್ರಿಕ್‌ ಸಮಸ್ಯೆ ಹೆಚ್ಚು ಮಾಡುತ್ತದೆ.

ಈರುಳ್ಳಿ: ಈರುಳ್ಳಿ ಕೂಡ ಗ್ಯಾಸ್ಟ್ರಿಕ್ ಸಮಸ್ಯೆ ಉಂಟಾಗುವುದು.

ಬಟಾಣಿ: ಅಜೀರ್ಣ ಸಮಸ್ಯೆ ಇರುವವರು ಬಟಾಣಿಯನ್ನು ತಿನ್ನದಿದ್ದರೆ ಒಳ್ಳೆಯದು.

ಟೊಮೆಟೊ: ಟೊಮೆಟೊದಲ್ಲಿರುವ ಅಸಿಡಿಕ್‌ ಅಂಶವಿರುವುದರಿಂದ ಹೊಟ್ಟೆ ಉಬ್ಬರಿಸುವುದು.

ಬ್ರೆಡ್: ಬ್ರೆಡ್‌ನಲ್ಲಿ ಫ್ರೂಕ್ಟಾನ್ ಅಂಶ ಇದ್ದು ಇದು ಕೆಲವರಿಗೆ ಅಜೀರ್ಣ ಸಮಸ್ಯೆ ಉಂಟು ಮಾಡುತ್ತದೆ.

ಗ್ಯಾಸ್ಟ್ರಿಕ್' ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದುಗಳು

ಜೀರಿಗೆ ಕುದಿಸಿದ ನೀರು
ವಾಯುಪ್ರಕೋಪಕ್ಕೆ ಜೀರಿಗೆ ಕುದಿಸಿದ ನೀರಿನ ಸೇವನೆ ಅತ್ಯುತ್ತಮ ಮನೆಮದ್ದುಗಳಲ್ಲಿ ಒಂದಾಗಿದೆ. ಜೀರಿಗೆಯಲ್ಲಿರುವ ಅವಶ್ಯಕ ತೈಲಗಳು ಲಾಲಾರಸವನ್ನು ಹೆಚ್ಚು ಹೆಚ್ಚಾಗಿ ಸ್ರವಿಸುವಂತೆ ಪ್ರಚೋದಿಸುತ್ತವೆ ಹಾಗೂ ಇದು ಆಹಾರವನ್ನು ಇನ್ನಷ್ಟು ಸುಲಭವಾಗಿ ಜೀರ್ಣಗೊಳಿಸಲು ನೆರವಾಗುತ್ತದೆ ಮತ್ತು ಅತಿಯಾಗಿ ಅನಿಲಗಳು ಉತ್ಪತ್ತಿಯಾಗದಂತೆ ತಡೆಯುತ್ತದೆ.

ಇದಕ್ಕಾಗಿ ಒಂದು ದೊಡ್ಡ ಚಮಚದಷ್ಟು ಜೀರಿಗೆಯನ್ನು ಎರಡು ಕಪ್ ನೀರಿನಲ್ಲಿ ಚೆನ್ನಾಗಿ ಕುದಿಸಬೇಕು. ಸುಮಾರು ಹತ್ತರಿಂದ ಹದಿನೈದು ನಿಮಿಷ ಚಿಕ್ಕ ಉರಿಯಲ್ಲಿ ಕುದಿಸಿದ ಬಳಿಕ ಉರಿ ಆರಿಸಿ ತಣಿಯಲು ಬಿಡಬೇಕು. ಬಳಿಕ ಈ ನೀರನ್ನು ಸೋಸಿ ಉಗುರುಚೆಚ್ಚನಿದ್ದಂತೆ ಊಟವಾದ ಕೊಂಚ ಹೊತ್ತಿನ ಬಳಿಕ ಸೇವಿಸಬೇಕು.

ದಿನಕ್ಕೆ ಎರಡು ಲೋಟ ಜೀರಿಗೆ ನೀರು ಕುಡಿದರೆ-ತೂಕ ಇಳಿಯುತ್ತೆ!

ಇಂಗು
ಒಂದು ವೇಳೆ ವಾಯುಪ್ರಕೋಪ ಎದುರಾಗಿ ಹೊಟ್ಟೆಯುಬ್ಬರಿಕೆ ಕಾಣಿಸಿಕೊಂಡರೆ ತಕ್ಷಣವೇ ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ (ಉಗುರು ಬೆಚ್ಚಗಾಗಿಸಲು ಸಾಧ್ಯವಿಲ್ಲದಿದ್ದರೆ ತಣ್ಣೀರೂ ಸರಿ) ಅರ್ಧ ಚಿಕ್ಕ ಚಮಚ ಇಂಗು ಹಾಕಿ ಕುಡಿದು ಬಿಡಬೇಕು.

ಇಂಗಿನಲ್ಲಿ ಬ್ಯಾಕ್ಟೀರಿಯಾಗಳು ಅಹಾರವನ್ನು ಅತಿಯಾಗಿ ಜೀರ್ಣಿಸಿಕೊಂಡು ಉತ್ಪತ್ತಿ ಮಾಡಿದ ಅನಿಲಗಳನ್ನು ಇಲ್ಲವಾಗಿಸುವ ಗುಣವಿದೆ. ಆಯುರ್ವೇದದ ಪ್ರಕಾರ, ಇದು ದೇಹದಲ್ಲಿ ವಾತ ದೋಷವನ್ನು ಸರಿಪಡಿಸಲು ನೆರವಾಗುತ್ತದೆ. "ವಾತ ದೋಷಕ್ಕೆ ದೊಡ್ಡ ಕರುಳು ಪ್ರಮುಖ ಕಾರಣವಾಗಿದೆ. ಇದು ವಾಯುವಿನಿಂದ ಬರುವ ದೋಶವಾಗಿದೆ. ಕರುಳಿನಲ್ಲಿ ವಾತ ಹೆಚ್ಚಾಗುತ್ತಿದ್ದಂತೆಯೇ ವಾಯುವೂ ಹೆಚ್ಚುತ್ತದೆ"

ಚಿಟಿಕೆಯಷ್ಟು ಹಿಂಗಿನಲ್ಲಿದೆ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತೇ?

ತ್ರಿಫಲ
ಹೆಸರೇ ತಿಳಿಸುವಂತೆ ಇದು ಮೂರು ಫಲಗಳ ಮಿಶ್ರಣವಾಗಿದೆ ಹಾಗೂ ಹೊಟ್ಟೆಯಲ್ಲಿ ಎದುರಾಗುವ ವಾಯುಪ್ರಕೋಪಕ್ಕೆ ಸಾಕಷ್ಟು ಮಟ್ಟಿನ ಪರಿಹಾರ ಒದಗಿಸುತ್ತದೆ. ಇದಕ್ಕಾಗಿ ಒಂದು ಲೋಟ ಕುದಿಯುವ ನೀರಿಗೆ ಅರ್ಧ ಚಿಕ್ಕ ಚಮಚ ತ್ರಿಫಲ ಚೂರ್ಣವನ್ನು ಹಾಕಿ ಐದರಿಂದ ಹತ್ತು ನಿಮಿಷ ಚಿಕ್ಕ ಉರಿಯಲ್ಲಿ ಕುದಿಸಿ.

ಈ ನೀರನ್ನು ತಣಿಸಿ ಉಗುರು ಬೆಚ್ಚನಿದ್ದಂತೆ ರಾತ್ರಿ ಮಲಗುವ ಮುನ್ನ ಕುಡಿಯಿರಿ. ಆದರೆ ಇದರಲ್ಲಿ ಹೆಚ್ಚಿನ ನಾರಿನಂಶ ಇರುವ ಕಾರಣ ಹೆಚ್ಚಿನ ಪ್ರಮಾಣ ಸೇವಿಸಬಾರದು ಹಾಗೂ ಹೆಚ್ಚು ದಿನಗಳವರೆಗೂ ಸೇವಿಸಬಾರದು. ಹೆಚ್ಚಿನ ಪ್ರಮಾಣದ ಸೇವನೆಯಿಂದ ಹೊಟ್ಟೆ ಉಬ್ಬರಿಕೆ ಎದುರಾಗಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ