ಆ್ಯಪ್ನಗರ

ಡೇ ಸ್ಪೆಷಲ್‌: ಕೆಂಪೇಗೌಡ ಜಯಂತಿ

ಬೆಂಗಳೂರು ನಗರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೆಂಪೇಗೌಡರು ನೀಡಿರುವ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ...

Vijaya Karnataka 27 Jun 2018, 5:00 am
ಬೆಂಗಳೂರು ನಗರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೆಂಪೇಗೌಡರು ನೀಡಿರುವ ಕೊಡುಗೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತಿ ವರ್ಷ ಜೂನ್‌ 27ರಂದು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತದೆ.
Vijaya Karnataka Web kempe gowda jayanthi


ಕೆಂಪೇಗೌಡರು ವಿಜಯ ನಗರ ಸಾಮ್ರಾಜ್ಯದ ಸಾಮಂತ ರಾಜ್ಯವಾಗಿದ್ದ ಯಲಹಂಕ ನಾಡಿನ ಪಾಳೇಗಾರರಾಗಿದ್ದರು. ಕೆಂಪೇಗೌಡರ ವಂಶಸ್ಥರನ್ನು ಯಲಹಂಕ ಪ್ರಭುಗಳೆಂದೇ ಕರೆಯಲಾಗುತ್ತದೆ. ಕೆಂಪೇಗೌಡರು ಕೆಂಪನಂಜೇಗೌಡ ಗಾಗೂ ಲಿಂಗಾಂಬೆ ದಂಪತಿಗೆ 1510 ಜೂನ್‌ 27ರಂದು ಯಲಹಂಕದಲ್ಲಿ ಜನಿಸಿದರು. ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿದ ಬೆಂಗಳೂರು ನಗರ ಕರ್ನಾಟಕ ರಾಜಧಾನಿಯಾಗಿರುವುದಲ್ಲದೆ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ. ಬೆಂಗಳೂರು ಸಮುದ್ರ ಮಟ್ಟಕ್ಕಿಂತ ಸಾವಿರಾರು ಅಡಿಗಳ ಮೇಲಿದ್ದು, ಹಿಂದೆ ಈ ನಗರದ ಸುತ್ತಲೂ ಹಲವು ಕೆರೆಗಳಿತ್ತು. ಇಲ್ಲಿನ ಹವಾಗುಣ ಉತ್ತಮವಾಗಿದ್ದರಿಂದ ಕೆಂಪೇಗೌಡರು ಇಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು ಎನ್ನಲಾಗಿದೆ. 1531ರಿಂದ 1569ರವರೆಗೆ ಆಳ್ವಿಕೆ ನಡೆಸಿದ ಕೆಂಪೇಗೌಡರು ತಮ್ಮ ದೂರದರ್ಶಿತ್ವ, ರಾಜಕೀಯ ನೈಪುಣ್ಯತೆ, ಅಭಿವೃದ್ಧಿಯ ಮುನ್ನೋಟ, ವ್ಯಾವಹಾರಿಕ ಮನೋಭಾವ, ಕಲೆಗೆ ನೀಡಿದ ಪ್ರೋತ್ಸಾಹ ಮುಂತಾದ ಅಂಶಗಳಿಂದ ಇಂದು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ ಹಾಗೂ ಬೃಹತ್‌ನಗರವಾಗಿ ವೇಗವಾಗಿ ಬೆಳೆಯುತ್ತಿದೆ. ಇದರ ಜತೆಗೆ ಅವರ ಹೆಸರು ಕೂಡಾ ವಿಶ್ವವಿಖ್ಯಾವಾಗಿದೆ.

ಈ ದಿನದಂದು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸಲಾಗಿರುವ ಕೆಂಪೇಗೌಡರ ಪ್ರತಿಮೆಗಳಿಗೆ ವಿಶೇಷ ಅಲಂಕಾರ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡಯುತ್ತವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ