ಆ್ಯಪ್ನಗರ

ಡೇ ಸ್ಪೆಷಲ್‌: ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಿನ

ಭಯೋತ್ಪಾದನೆಯಿಂದಾಗುವ ಹಿಂಸೆ, ಅಪಾಯ ಮತ್ತು ಜನರ, ಸಮಾಜ ಮತ್ತು ದೇಶಗಳ ಮೇಲೆ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆ ದೇಶದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 21ರಂದು ಭಾರತಾದ್ಯಂತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಿನವನ್ನು ಆಚರಿಸಲಾಗುತ್ತದೆ.

Vijaya Karnataka Web 21 May 2018, 3:03 pm
ಭಯೋತ್ಪಾದನೆಯಿಂದಾಗುವ ಹಿಂಸೆ, ಅಪಾಯ ಮತ್ತು ಜನರ, ಸಮಾಜ ಮತ್ತು ದೇಶಗಳ ಮೇಲೆ ಅದರಿಂದ ಉಂಟಾಗುವ ಪರಿಣಾಮದ ಬಗ್ಗೆ ದೇಶದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 21ರಂದು ಭಾರತಾದ್ಯಂತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಿನವನ್ನು ಆಚರಿಸಲಾಗುತ್ತದೆ.
Vijaya Karnataka Web terrorism control


1991ರ ಮೇ 21ರಂದು ಅಂದಿನ ಪ್ರಧಾನ ಮಂತ್ರಿ ರಾಜೀವ್‌ ಗಾಂಧಿಯವರು ಭಯೋತ್ಪಾದಕರ ಅಟ್ಟಹಾಸಕ್ಕೆ ಬಲಿಯಾದರು. ಅವರ ಪುಣ್ಯಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ.

ಭಯೋತ್ಪಾದನೆ ಮತ್ತು ಹಿಂಸೆಯಿಂದ ಜನರನ್ನು ದೂರವಿಡುವುದು, ರಾಷ್ಟ್ರದ ಉದ್ದಗಲಕ್ಕೂ ಏಕತೆ, ಶಾಂತಿ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದು ಈ ದಿನದ ಪ್ರಮುಖ ಉದ್ದೇಶವಾಗಿದೆ. ಈ ದಿನದಂದು ಶಾಲಾ ಕಾಲೇಜುಗಳಲ್ಲಿ, ಇನ್ನಿತರ ಸಭೆ ಸಮಾರಂಭಗಳಲ್ಲಿ ಭಯೋತ್ಪಾದನೆ ಕುರಿತ ಚರ್ಚೆಗಳು, ವಿಚಾರಗೋಷ್ಠಿಗಳು, ಉಪನ್ಯಾಸಗಳನ್ನು ಆಯೋಜಿಸಲಾಗುತ್ತದೆ. ಅನೇಕ ಎನ್‌ಜಿಒಗಳು, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳು ಭಯೋತ್ಪಾದನೆಯ ದುಷ್ಪರಿಣಾಮಗಳ ವಿಷಯಗಳನ್ನು ಹೈಲೈಟ್ಸ್‌ ಮಾಡಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ವಿಶ್ವ ಎದುರಿಸುತ್ತಿರುವ ಬಹುದೊಡ್ಡ ಪಿಡುಗು ಭಯೋತ್ಪಾದನೆ. ಅಭಿವೃದ್ದಿ ಹೊಂದಿದ ಹಾಗೂ ಅಭಿವೃದ್ಧಿ ಶೀಲ ರಾಷ್ಟ್ರಗಳು ಇದರಿಂದ ನಲುಗಿ ಹೋಗಿವೆ. ಇದಕ್ಕೆ ಭಾರತವು ಹೊರತಾಗಿಲ್ಲ. ಭಾರತದಲ್ಲಿ ಹಲವಾರು ಭಯೋತ್ಪಾದನೆ ದಾಳಿಗಳು ನಡೆದಿವೆ. ಇದರಿಂದ ಸಾವಿರಾರು ಮಂದಿ ತಮ್ಮ ಜೀವ ಹಾಗೂ ಜೀವನವನ್ನೇ ಕಳೆದುಕೊಂಡಿದ್ದಾರೆ. ಇಂಥಹ ಸಾಮಾಜಿಕ ಪಿಡುಗನ್ನು ನಿರ್ಮೂಲನ ಮಾಡಲು ಇಡೀ ವಿಶ್ವವೇ ಹೋರಾಡುತ್ತಿದೆ. ನಮ್ಮ ದೇಶದಲ್ಲೂ ಭಯೋತ್ಪಾನ ನಿಗ್ರಹ ಕಾಯಿದೆ ಇದೆ. ಭಯೋತ್ಪಾದನೆ ಮಟ್ಟಹಾಕಲು ಅವಿರತ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಸಾರ್ವಜನಿಕರ ಬೆಂಬಲ ಹಾಗೂ ಸಹಕಾರ ನೀಡಬೇಕಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ