ಆ್ಯಪ್ನಗರ

ನಮ್ಮ ಕರ್ನಾಟಕ: ಎಸ್‌.ನಿಜಲಿಂಗಪ್ಪ

ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಎಸ್‌ನಿಜಲಿಂಗಪ್ಪ ಪ್ರಮುಖರು...

Vijaya Karnataka 25 Jun 2018, 5:00 am
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದವರಲ್ಲಿ ಎಸ್‌.ನಿಜಲಿಂಗಪ್ಪ ಪ್ರಮುಖರು. ಸಿದ್ಧವನಹಳ್ಳಿ ನಿಜಲಿಂಗಪ್ಪನವರು ಹಿರಿಯ ಕಾಂಗ್ರೆಸ್‌ ರಾಜಕಾರಣಯಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿದ್ದರು. ಅವರ ಮೊದಲ ಅಧಿಕಾರಾವಧಿ 1956ರಿಂದ 1958ರವರೆಗೂ ಹಾಗೂ ಎರಡನೆ ಅಧಿಕಾರಾವಧಿ 1962ರಿಂದ 1968. ಅವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲೂ, ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಏಕಕಾಲದಲ್ಲಿ ತೊಡಗಿಸಿಕೊಂಡಿದ್ದ ಕ್ರಿಯಾಶೀಲ ನಾಯಕರಾಗಿದ್ದರು. ಇವರು ಬಳ್ಳಾರಿ ಜಿಲ್ಲೆಯ ಒಂದು ಚಿಕ್ಕ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನಲ್ಲಿ ಪದವಿ ಓದಿದ ಅವರು ಪುಣೆಯ ಕಾನೂನು ಕಾಲೇಜಿನಲ್ಲಿ ಲಾ ಪದವಿ ಪಡೆದರು.
Vijaya Karnataka Web nijaligappa


ಅವರ ರಾಜಕೀಯ ಜೀವನ ಪ್ರಾರಂಭವಾದದ್ದು 1936ರಲ್ಲಿ. ಡಾ.ಎನ್‌.ಎಸ್‌.ಹರ್ಡಿಕರ್‌ರೊಡನೆ ಸಂಪರ್ಕ ಬೆಳೆಸಿ ಸಂಘಟನೆಯ ಕೆಲಸದಲ್ಲಿ ತೊಡಗಿಕೊಂಡು ನಂತರ ಪ್ರದೇಶ ಕಾಂಗ್ರೆಸ್‌ ಕಮಿಟಿಯ ಅಧ್ಯಕ್ಷರಾದರು. 1968ರಲ್ಲಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದರು. ನಿಜಲಿಂಗಪ್ಪನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾದ ನಂತರ 1968ರಿಂದ 1971ರ ತನಕ ಭಾರತೀಯ ರಾಷ್ಟ್ರೀಯ ಕಾಂಗೆಸ್ಸಿನ ಅಧ್ಯಕ್ಷರಾಗಿದ್ದರು. 1946-1950ರ ತನಕ ಸಂವಿಧಾನ ಸಭೆಯ ಸದಸ್ಯರಾಗಿದ್ದರು. ಚಿತ್ರದುರ್ಗ ಕ್ಷೇತ್ರದಿಂದ ಪ್ರತಿನಿಧಿಸಿ ಕೇಂದ್ರ ಸಂಸತ್ತಿನ ಸದಸ್ಯರಾದರು. ಅವರನ್ನು ಆಧುನಿಕ ಕರ್ನಾಟಕದ ನಿರ್ಮಾಣಕಾರರೆಂದು ಕರೆಯಲಾಗುತ್ತದೆ. ಅವರು ವ್ಯವಸಾಯ, ನೀರಾವರಿ, ಕೈಗಾರಿಕೆ ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ವಿಶೇಷ ಅಭಿವೃದ್ಧಿಯನ್ನು ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ