ಆ್ಯಪ್ನಗರ

ಮಾನಸಿಕ ಒತ್ತಡ ಕಡಿಮೆ ಮಾಡಲು ಧ್ಯಾನ ಸಹಕಾರಿ

ಭಾರತೀಯರನ್ನು ಮಾನಸಿಕ ಆರೋಗ್ಯ ಸಮಸ್ಯೆ ವ್ಯಾಪಕವಾಗಿ ಕಾಡುತ್ತಿದ್ದು, ಪ್ರತಿ ಆರರಲ್ಲಿ ಒಬ್ಬರು ಮಾನಸಿಕ ಅನಾರೋಗ್ಯದಿಂದ ಬಳಲುತ್ತಿದ್ದಾರೆಂದು ಮಾನಸಿಕ ಆರೋಗ್ಯ ಸಂಶೋಧನೆಯಲ್ಲಿ ಕಂಡು ಬಂದಿದೆ.

Vijaya Karnataka Web 26 Jul 2019, 10:53 am
Vijaya Karnataka Web meditation

ಮಾನಸಿಕ ಅನಾರೋಗ್ಯವು 30 ರಿಂದ 49 ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. 60ಕ್ಕಿಂತ ಹೆಚ್ಚಿನ ವಯಸ್ಸಿನವರಲ್ಲಿಯೂ ಅಧಿಕವಾಗಿ ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಮನಸ್ಸಿನ ಶಾಂತಿ-ನೆಮ್ಮದಿಗೆ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತದೆ. ಇದಕ್ಕೆ ಮುಖ್ಯವಾಗಿ ಸಹಕರಿಸುವ ಯೋಗಾಭ್ಯಾಸಗಳೆಂದರೆ ಧಾರಣ ಮತ್ತು ಧ್ಯಾನ. ಧಾರಣವು ಮಾನಸಿಕ ಏಕಾಗ್ರತೆಗೆ ಬಹಳಷ್ಟು ಉಪಯುಕ್ತ. ಧ್ಯಾನವು ಮನಸ್ಸಿನ ಎಲ್ಲ ಆಲೋಚನೆಗಳನ್ನು ದೂರ ಮಾಡುತ್ತದೆ.

ಧಾರಣ, ಧ್ಯಾನದ ಅಭ್ಯಾಸವು ಮನಸ್ಸಿನ ಎಲ್ಲ ಚಿಂತೆಗಳನ್ನು ದೂರ ಮಾಡುತ್ತದೆ.

* ಮಾನಸಿಕ ನೆಮ್ಮದಿಯನ್ನು ನೀಡುತ್ತದೆ.

* ಮನಸ್ಸಿನ ಚಂಚಲತೆಯನ್ನು ದೂರ ಮಾಡುತ್ತದೆ.

* ಮನಸ್ಸಿನ ಅರಿವು, ಸೂಕ್ಷ ಸಂವೇದನೆಯನ್ನು ಸೃಷ್ಠಿಸುತ್ತದೆ.

* ಏಕಾಗ್ರತೆ ಮತ್ತು ಗ್ರಹಣ ಶಕ್ತಿಯನ್ನು ಹೆಚ್ಚಿಸುತ್ತದೆ.

* ಋುಣಾತ್ಮಕ ಭಾವನೆಗಳನ್ನು ಮನಸ್ಸಿನಿಂದ ಹೊರಹಾಕುತ್ತದೆ.

* ಧನಾತ್ಮಕ ಭಾವನೆಗಳ ಬೆಳವಣಿಗೆಗೆ ಸಹಾಯಕಾರಿ.

* ಮಾನಸಿಕ ಉದ್ವೇಗ ನಿಯಂತ್ರಣಕ್ಕೆ

* ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಬೇಕು.

* ದಿನದಲ್ಲಿ ಆಗಾಗ ವಿಶ್ರಾಂತಿ ತೆಗೆದುಕೊಳ್ಳುವುದು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಹಳ ಮುಖ್ಯ. ಆದ್ದರಿಂದ ಇದಕ್ಕೂ ಕೂಡ ಕಾಲ ನಿಗದಿ ಮಾಡಿಕೊಳ್ಳಬೇಕು. ಆಹಾರ ಸೇವಿಸುವಂತೆ ವಿಶ್ರಾಂತಿಯು ಅತ್ಯವಶ್ಯಕ.

* ಬಿಡುವಿನ ವೇಳೆಯಲ್ಲಿ ಯಾವುದಾದರೂ ಸೃಜನಶೀಲ ಮತ್ತು ಮನಸ್ಸಿಗೆ ಮುದ ಮತ್ತು ತೃಪ್ತಿಯನ್ನು ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳುವುದು.

* ಕನಿಷ್ಠ 5 ನಿಮಿಷಗಳವರೆಗಾದರೂ ದೀರ್ಘವಾಗಿ ಉಸಿರಾಡಿ.

* ಉದ್ವೇಗದ ಸಮಯದಲ್ಲಿ ಕ್ಷಿಪ್ರವಾಗಿ ಸ್ಪಂದಿಸದೇ ಆ ಸಂದರ್ಭದಲ್ಲಿ ಪೂರ್ಣವಾಗಿ ಭಾಗಿಯಾಗಿ.

* ಈಗಾಗಲೇ ನಾವು ಹೊಂದಿರುವುದಕ್ಕೆ ಧನ್ಯತಾ ಭಾವನೆಯನ್ನು ಅನುಭವಿಸುವುದು.

* ನಮ್ಮ ಮನಸ್ಸಿಗೆ ಒತ್ತಡ ತರುವ ಮೋಹಗಳನ್ನು ತ್ಯಜಿಸುವುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ