ಆ್ಯಪ್ನಗರ

Bharath Jodo Yatra-ಭಾರತ್ ಜೋಡೋ ಯಾತ್ರೆ: ಮೂರನೇ ದಿನದ ಪಾದಯಾತ್ರೆ ಆರಂಭ

ರಾಹುಲ್ ಗಾಂಧಿ ನೇತೃತ್ವದ ಮೂರನೇ ದಿನದ ಪಾದಯಾತ್ರೆ ವರುಣಾ ವಿಧಾನ ಸಭಾ ಕ್ಷೇತ್ರದ ಕಡಕೋಳ ಕೈಗಾರಿಕಾ ಪ್ರದೇಶದಿಂದ ಭಾನುವಾರ ಆರಂಭಗೊಂಡಿದೆ. ರಾಹುಲ್ ಗಾಂಧಿ ಜೊತೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ ಮಾಜಿ ಕೇಂದ್ರ ಸಚಿವ.ದಿವಂಗತ ಆಸ್ಕರ್ ಫರ್ನಾಂಡೀಸ್ ಅವರ ಪತ್ನಿ ಬ್ಲೋಸಂ ಫರ್ನಾಂಡೀಸ್ ಕೂಡಾ ರಾಹುಲ್ ಜೊತೆ ಹೆಜ್ಜೆ ಹಾಕಿದರು.

Authored byಇರ್ಷಾದ್ ಉಪ್ಪಿನಂಗಡಿ | Vijaya Karnataka Web 2 Oct 2022, 5:38 pm

ಹೈಲೈಟ್ಸ್‌:

  • ವರುಣಾ ವಿಧಾನಸಭಾ ಕ್ಷೇತ್ರದ ಕಡಕೋಳಶದಿಂದ 3ನೇ ದಿನದ ಪಾದಯಾತ್ರೆ ಆರಂಭ
  • ರಾಹುಲ್ ಗಾಂಧಿಗೆ ಸಿದ್ದರಾಮಯ್ಯ, ವೇಣುಗೋಪಾಲ್, ಡಿ.ಕೆೆ.ಶಿವಕುಮಾರ್, ಸುರ್ಜೇವಾಲ ಸಾಥ್
  • ಆಸ್ಕರ್ ಫರ್ನಾಂಡೀಸ್ ಪತ್ನಿ ಬ್ಲೋಸಂ ಫರ್ನಾಂಡೀಸ್ ಕೂಡ ರಾಹುಲ್ ಜೊತೆ ಹೆಜ್ಜೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web BHARATH JODO YATRA.
ಕಡಕೋಳ ಕೈಗಾರಿಕಾ ಪ್ರದೇಶದಿಂದ ಭಾನುವಾರ ಆರಂಭಗೊಂಡ ಭಾರತ್ ಜೋಡೋ ಪಾದಯಾತ್ರೆ.
ಮೈಸೂರು: ಭಾರತ್ ಜೋಡೋ ಯಾತ್ರೆಯ ಮ‌ೂರನೇ ದಿನದ ಪಾದಯಾತ್ರೆ ಆರಂಭಗೊಂಡಿದೆ. ವರುಣಾ ವಿಧಾನಸಭಾ ಕ್ಷೇತ್ರದ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಆರಂಭಗೊಂಡಿದೆ.

ಗಾಂಧಿ ಜಯಂತಿಯ ದಿನ ಸಂಜೆ ಪಾದಯಾತ್ರೆ ಆರಂಭಗೊಂಡಿದ್ದು ದೊಡ್ಡ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಸಿ ವೇಣುಗೋಪಾಲ್, ಡಿಕೆ ಶಿವಕುಮಾರ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ. ಪಾದಯಾತ್ರೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ ಆಸ್ಕರ್ ಫರ್ನಾಂಡೀಸ್ ಅವರ ಪತ್ನಿ ಬ್ಲೋಸಂ ಫರ್ನಾಂಡೀಸ್ ಕೂಡಾ ರಾಹುಲ್ ಜೊತೆ ಹೆಜ್ಜೆ ಹಾಕಿದರು.

Bharath Jodo Yatra- ಬದನವಾಳು ಸರ್ಕಾರಿ ಶಾಲೆಯಲ್ಲಿ ಹಸ್ತ ಮೂಡಿಸಿದ ರಾಹುಲ್‌
ಜನರನ್ನು ನಿಯಂತ್ರಣ ಮಾಡಿದ ಕೆಸಿ ವೇಣುಗೋಪಾಲ್

ಇನ್ನು ಪಾದಯಾತ್ರೆಯಲ್ಲಿ ಸ್ವತಃ ಕೆಸಿ ವೇಣುಗೋಪಾಲ್ ಜನರನ್ನು ನಿಯಂತ್ರಣ ಮಾಡಿದರು. ದೊಡ್ಡ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಜನರು ಸೇರಿದ್ದರು. ಈ ಸಂದರ್ಭದಲ್ಲಿ ಸ್ವತಃ ಕೆಸಿ ವೇಣುಗೋಪಾಲ್ ಜನರನ್ನು ನಿಯಂತ್ರಣ ಮಾಡಿದರು.
ಮಕ್ಕಳ ಜೊತೆ ರಾಹುಲ್ ಹೆಜ್ಜೆ
ರಾಹುಲ್ ಗಾಂಧಿ ಪಾದಯಾತ್ರೆ ಸಂದರ್ಭದಲ್ಲಿ ಮಕ್ಕಳ ಜೊತೆಗೆ ಹೆಜ್ಜೆ ಹಾಕಿದರು. ಇಬ್ಬರು ಪುಟ್ಟ ಮಕ್ಕಳ ಕೈಹಿಡಿದುಕೊಂಡು ನಡೆದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ