ಆ್ಯಪ್ನಗರ

ಮೀಸಲಾತಿ ಪರಿಷ್ಕರಣೆಗೆ ಹೈಕೋರ್ಟ್‌ಗೆ ಮನವಿ

ಬಾಗಲಕೋಟ : ಇಲ್ಲಿನ ನಗರಸಭೆಯ ಮೀಸಲಾತಿ ಪರಿಷ್ಕರಿಸುವಂತೆ ಒತ್ತಾಯಿಸಿ ಬಿಜೆಪಿ ನಗರಸಭೆ ಸದಸ್ಯರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Vijaya Karnataka 8 Aug 2018, 5:00 am
ಬಾಗಲಕೋಟ : ಇಲ್ಲಿನ ನಗರಸಭೆಯ ಮೀಸಲಾತಿ ಪರಿಷ್ಕರಿಸುವಂತೆ ಒತ್ತಾಯಿಸಿ ಬಿಜೆಪಿ ನಗರಸಭೆ ಸದಸ್ಯರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
Vijaya Karnataka Web
ಮೀಸಲಾತಿ ಪರಿಷ್ಕರಣೆಗೆ ಹೈಕೋರ್ಟ್‌ಗೆ ಮನವಿ

ಇತ್ತೀಚೆಗಷ್ಟೇ ಪ್ರಕಟಿಸಲಾದ ನಗರಸಭೆಯ ಮೀಸಲಾತಿ ಪಟ್ಟಿ ಪ್ರಕಾರ ಹಾಲಿ 15 ಸದಸ್ಯರು ಸ್ಪರ್ಧೆಯಿಂದ ವಂಚಿತರಾಗಲಿದ್ದಾರೆ. ಮೀಸಲಾತಿ ಪರಿಷ್ಕರಿಸಿ ಪ್ರಕಟಿಸಲು ಸರಕಾರಕ್ಕೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಧಾರವಾಡ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸದಸ್ಯರಾದ ಬಸವರಾಜ ನಾಶಿ ಹಾಗೂ ರಾಜು ಬಳೂಲಮಠ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ಪರಿಶೀಲಿಸಲಿದ್ದು, ಅರ್ಜಿ ಸ್ವೀಕೃತವಾದರೆ ತಡೆಯಾಜ್ಞೆ ನೀಡುವ ಸಾಧ್ಯತೆಯಿದೆ. ಹೈಕೋರ್ಟ್‌ ತಡೆಯಾಜ್ಞೆ ನೀಡಿದರೆ ಬಾಗಲಕೋಟ ನಗರಸಭೆಯ ಚುನಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬಹುದಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ