ದೌರ್ಜನ್ಯ ಪ್ರಕರಣ: 53.62 ಲಕ್ಷ ರೂ.ಗಳ ಪರಿಹಾರ ವಿತರಣೆ
ಪ್ರಸಕ್ತ ಸಾಲಿಗೆ ಏ.1 ರಿಂದ ಮೇ 31ರ ವರೆಗೆ 13 ದೌರ್ಜನ್ಯ ಪ್ರಕರಣಗಳಲ್ಲಿ53.62 ಲಕ್ಷ ರೂ.ಗಳ ಪರಿಹಾರ ವಿತರಿಸಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
Vijaya Karnataka Web 26 Jun 2020, 5:00 am
ಬಾಗಲಕೋಟೆ: ಪ್ರಸಕ್ತ ಸಾಲಿಗೆ ಏ.1 ರಿಂದ ಮೇ 31ರ ವರೆಗೆ 13 ದೌರ್ಜನ್ಯ ಪ್ರಕರಣಗಳಲ್ಲಿ53.62 ಲಕ್ಷ ರೂ.ಗಳ ಪರಿಹಾರ ವಿತರಿಸಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಗುರುವಾರ ಜರುಗಿದ ಜಿಲ್ಲಾಮಟ್ಟದ ಜಾಗೃತಿ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದೌರ್ಜನ್ಯ ಪ್ರಕರಣಗಳ ತನಿಖೆ ಚುರುಕುಗೊಳ್ಳಬೇಕು. ಎಫ್ಐಆರ್ ಹಂತದಲ್ಲಿರುವ 9 ಪ್ರಕರಣ ಹಾಗೂ ದೋಷಾರೋಪಣೆ ಪಟ್ಟಿ ಸಲ್ಲಿಸಿದ ನಂತರದ 4 ಪ್ರಕರಣಗಳಿಗೆ ಪರಿಹಾರ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಜ.1ರಿಂದ ಮಾ.31ರ ವರೆಗಿನ 7 ದೌರ್ಜನ್ಯ ಪ್ರಕರಣದಲ್ಲಿ15.87 ಲಕ್ಷ ರೂ.ಗಳ ಪರಿಹಾರ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಗೆ ಹೊಸದಾಗಿ ಮಂಜೂರಾದ ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಜಮೀನು ಗುರುತಿಸಿದ್ದು ಮಂಜೂರಿ ನೀಡಲಾಗುತ್ತಿದೆ. ನಾನಾ ಕಡೆ ಡಾ.ಬಿ.ಆರ್.ಅಂಬೇಡ್ಕರ ಭವನ, ವಾಲ್ಮೀಕಿ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಿದ್ದರೂ ಇದುವರೆಗೆ ಪೂರ್ಣಗೊಳ್ಳದಿರುವ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು. ಇದಕ್ಕೆ ಸಮಿತಿ ಸದಸ್ಯರು, ಅಧಿಕಾರಿಗಳ ಬೇವಾಬ್ದಾರಿ ಸರಿಯಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಸಮಿತಿಯ ಸದಸ್ಯರಾದ ಡಾ.ಎಂ.ಎಚ್.ಚಲವಾದಿ, ದುಂಡಪ್ಪ ಸಾವಳಗಿ, ಯಲ್ಲಪ್ಪ ಮೇತ್ರಿ, ಮುತ್ತಣ್ಣ ಬೆಣ್ಣೂರ, ಶಂಭುಗೌಡ ಪಾಟೀಲ, ಸುಭಾಸ ಗಸ್ತಿ ಇತರರು ಇದ್ದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿಗುರುವಾರ ಜರುಗಿದ ಜಿಲ್ಲಾಮಟ್ಟದ ಜಾಗೃತಿ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ದೌರ್ಜನ್ಯ ಪ್ರಕರಣಗಳ ತನಿಖೆ ಚುರುಕುಗೊಳ್ಳಬೇಕು. ಎಫ್ಐಆರ್ ಹಂತದಲ್ಲಿರುವ 9 ಪ್ರಕರಣ ಹಾಗೂ ದೋಷಾರೋಪಣೆ ಪಟ್ಟಿ ಸಲ್ಲಿಸಿದ ನಂತರದ 4 ಪ್ರಕರಣಗಳಿಗೆ ಪರಿಹಾರ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.
ಜ.1ರಿಂದ ಮಾ.31ರ ವರೆಗಿನ 7 ದೌರ್ಜನ್ಯ ಪ್ರಕರಣದಲ್ಲಿ15.87 ಲಕ್ಷ ರೂ.ಗಳ ಪರಿಹಾರ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಗೆ ಹೊಸದಾಗಿ ಮಂಜೂರಾದ ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಜಮೀನು ಗುರುತಿಸಿದ್ದು ಮಂಜೂರಿ ನೀಡಲಾಗುತ್ತಿದೆ. ನಾನಾ ಕಡೆ ಡಾ.ಬಿ.ಆರ್.ಅಂಬೇಡ್ಕರ ಭವನ, ವಾಲ್ಮೀಕಿ ಭವನಗಳ ನಿರ್ಮಾಣಕ್ಕೆ ಅನುದಾನ ನೀಡಿದ್ದರೂ ಇದುವರೆಗೆ ಪೂರ್ಣಗೊಳ್ಳದಿರುವ ಕಾಮಗಾರಿ ಶೀಘ್ರ ಪೂರ್ಣಗೊಳ್ಳಬೇಕು. ಇದಕ್ಕೆ ಸಮಿತಿ ಸದಸ್ಯರು, ಅಧಿಕಾರಿಗಳ ಬೇವಾಬ್ದಾರಿ ಸರಿಯಲ್ಲಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ, ಸಮಿತಿಯ ಸದಸ್ಯರಾದ ಡಾ.ಎಂ.ಎಚ್.ಚಲವಾದಿ, ದುಂಡಪ್ಪ ಸಾವಳಗಿ, ಯಲ್ಲಪ್ಪ ಮೇತ್ರಿ, ಮುತ್ತಣ್ಣ ಬೆಣ್ಣೂರ, ಶಂಭುಗೌಡ ಪಾಟೀಲ, ಸುಭಾಸ ಗಸ್ತಿ ಇತರರು ಇದ್ದರು.