ಆ್ಯಪ್ನಗರ

ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ! ಮಕ್ಕಳು ಸಾವು, ತಾಯಿ ಗಂಭೀರ

ಇತ್ತೀಚೆಗೆ ಭಾಗ್ಯಶ್ರೀ ಅವರ ಗಂಡ ಚಿಕ್ಕಯ್ಯ ಮೃತಪಟ್ಟಿದ್ದರು. ಅವರ ಸಾವಿನಿಂದ ಮಾನಸಿಕವಾಗಿ ನೊಂದು ಹೋಗಿದ್ದ ಭಾಗ್ಯಶ್ರೀ, ತನ್ನ ಮಕ್ಕಳನ್ನು ಬಂಡಿಗಣಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗ್ತಿದೆ.

Vijaya Karnataka Web 4 Jul 2020, 6:05 pm
ಬಾಗಲಕೋಟೆ: ತನ್ನ ಮೂವರು ಪುಟ್ಟ ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಕರುಣಾಜನಕ ಘಟನೆ ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
Vijaya Karnataka Web SUICIDE


ಬಾಗಲಕೋಟೆಯಲ್ಲಿ ಆರತಕ್ಷತೆಯಿಂದ ಹರಡಿದ ಸೋಂಕು; ವಿವಾಹಿತ, ತಂದೆ, ಮಾವನ ವಿರುದ್ಧ ಕೇಸ್!

ಭಾಗ್ಯಶ್ರೀ ಎಂಬಾಕೆ ತನ್ನ ಮೂವರು ಮಕ್ಕಳಿಗೆ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ಮೂರೂ ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ತಾಯಿ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿರೋ ಮಕ್ಕಳನ್ನು ಶಿವಾನಿ (10), ಶಿವಶಂಕರ (10) ಮತ್ತು ಶಿವಸ್ತ್ರಿ (9) ಎಂದು ಗುರುತಿಸಲಾಗಿದೆ.

ಗೋವಿಂದ ಕಾರಜೋಳ ಆಪ್ತ ಸಹಾಯಕನಿಗೆ ಕ್ವಾರಂಟೈನ್, ಕೊರೊನಾ ಭೀತಿ

ಮೂವರು ಮಕ್ಕಳ ಮೃತದೇಹ ಕಂಡು ಕುಟುಂಬಿಕರ ಆಕ್ರಂದನ ಮುಗಿಲುಮುಟ್ಟಿದ್ದು, ನೆರೆದಿದ್ದವರನ್ನು ಮೌನವನ್ನಾಗಿಸಿತ್ತು. ಸದ್ಯ ಮಕ್ಕಳ ಮೃತದೇಹವನ್ನು ಪೋಸ್ಟ್‌ ಮಾರ್ಟಂಗೆ ಕಳುಹಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಮೃತ ಮಕ್ಕಳ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಗಲಕೋಟೆ: ಕ್ವಾರಂಟೈನ್ ಕೇಂದ್ರದಲ್ಲಿ ಅವ್ಯವಸ್ಥೆ, ಆಹಾರದಲ್ಲಿ ಹುಳು ಕಂಡು

ಇತ್ತೀಚೆಗೆ ಭಾಗ್ಯಶ್ರೀ ಅವರ ಗಂಡ ಚಿಕ್ಕಯ್ಯ ಮೃತಪಟ್ಟಿದ್ದರು. ಅವರ ಸಾವಿನಿಂದ ಮಾನಸಿಕವಾಗಿ ನೊಂದು ಹೋಗಿದ್ದ ಭಾಗ್ಯಶ್ರೀ, ತನ್ನ ಮಕ್ಕಳನ್ನು ಬಂಡಿಗಣಿಯ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನಲಾಗ್ತಿದೆ. ಘಟನೆ ಸಂಬಂಧ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ