ಆ್ಯಪ್ನಗರ

ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ

ಲಂಚ್ ಪಡೆಯುತ್ತಿದ್ದ ಮಹಿಳಾ ಅಧಿಕಾರಿಯನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

Vijaya Karnataka Web 1 Jul 2019, 3:13 pm
ಬಾಗಲಕೋಟ : ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಎಂಜಿನಿಯರ್‌ರನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web Arrest


ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕು ಪಂಚಾಯಿತಿ ತಾಂತ್ರಿಕ ಸಹಾಯಕಿ ಸವಿತಾ ಕಾಡದೇವರಮಠ ಬಂಧಿತ ಎಂಜಿನಿಯರ್. ರಸ್ತೆ ಕಾಮಗಾರಿ ಪೂರೈಸಿದ್ದ ಗುತ್ತಿಗೆದಾರ ಮಹಾಂತೇಶ ಜುಂಗನೂರ ಅವರ ಬಿಲ್ ಪಾವತಿಸಲು ಸವಿತಾ 1 ಲಕ್ಷ ರೂ‌. ಲಂಚ ಕೇಳಿದ್ದರು. ಈ ಪೈಕಿ 25 ಸಾವಿರ ರೂ. ಲಂಚ ಪಡೆಯುತ್ತಿರುವಾಗ ಸವಿತಾರನ್ನು ಬಂಧಿಸಲಾಗಿದೆ.

ಎಸಿಬಿ ಡಿಎಸ್ ಪಿ ಸಂತೋಷ ಬನ್ನಟ್ಟಿ, ಸಿಪಿಐಗಳಾದ ರಾಘವೇಂದ್ರ ಹಳ್ಳೂರ, ಚಂದ್ರಶೇಖರ ಮಠಪತಿ ದಾಳಿ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ