ಆ್ಯಪ್ನಗರ

ವಂಚಕರ ವಿರುದ್ಧ ಮತ್ತೊಂದು ದೂರು

ಬಾಗಲಕೋಟ : ಹಣ ದ್ವಿಗುಣಗೊಳಿಸುವುದಾಗಿ ವಂಚನೆ ಮಾಡಿದ ವಂಚಕರ ತಂಡದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

Vijaya Karnataka 31 Oct 2018, 5:00 am
ಬಾಗಲಕೋಟ : ಹಣ ದ್ವಿಗುಣಗೊಳಿಸುವುದಾಗಿ ವಂಚನೆ ಮಾಡಿದ ವಂಚಕರ ತಂಡದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
Vijaya Karnataka Web another complaint against the fraudulent
ವಂಚಕರ ವಿರುದ್ಧ ಮತ್ತೊಂದು ದೂರು


ನಗರದಲ್ಲಿ ಭಾನುವಾರ ಲಾಡ್ಜ್‌ವೊಂದರ ಮೇಲೆ ದಾಳಿ ಮಾಡಿದ್ದ ಪೊಲೀಸರು ಹಣ ದ್ವಿಗುಣ ಹಾಗೂ ಹಳೆಯ ನೋಟು ಬದಲಾಯಿಸುವ ವಂಚಕರನ್ನು ಬಂಧಿಸಿದ್ದರು. 12 ವಂಚಕರ ವಿರುದ್ಧ ದೂರು ದಾಖಲಿಸಿ ವಿಚಾರಣೆ ನಡೆಸಲಾಗಿತ್ತು. ಇದೀಗ ಮಂಗಳವಾರ ನೀಲಾನಗರ ತಾಂಡಾದ ಸೋಮಲಪ್ಪ ಗಚ್ಚಿನಮನಿ ವಂಚಕರ ವಿರುದ್ಧ ದೂರು ದಾಖಲಿಸಿದ್ದಾರೆ. ಹಣ ದ್ವಿಗುಣಗೊಳಿಸಿ ಕೊಡುವುದಾಗಿ 25 ಸಾವಿರ ರೂ. ಪಡೆದು ವಂಚಿಸಿದ್ದಾರೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಪೊಲೀಸರು 420 ಸೆಕ್ಷನ್‌ ಅಡಿ ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ, ಪಿಎಸ್‌ಐ ಪಿ.ಎಸ್‌.ಮನಗೂಳಿ ತನಿಖೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ