ಆ್ಯಪ್ನಗರ

ಕಾನ್‌ಸ್ಟೇಬಲ್‌ ಪರೀಕ್ಷೆ ಸುಸೂತ್ರ

ಬಾಗಲಕೋಟ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಂದೂಡಿದ್ದ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಜ.27ರಂದು ನಗರದಲ್ಲಿ ನಡೆದ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.

Vijaya Karnataka 28 Jan 2019, 5:00 am
ಬಾಗಲಕೋಟ: ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಂದೂಡಿದ್ದ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಜ.27ರಂದು ನಗರದಲ್ಲಿ ನಡೆದ ಪರೀಕ್ಷೆಗಳು ಸುಸೂತ್ರವಾಗಿ ನಡೆದವು.
Vijaya Karnataka Web bagalkot dist constable test suite
ಕಾನ್‌ಸ್ಟೇಬಲ್‌ ಪರೀಕ್ಷೆ ಸುಸೂತ್ರ


ಈ ಹಿಂದೆ ಕಾನ್‌ಸ್ಟೇಬಲ್‌ ಹುದ್ದೆಗಾಗಿ ನಡೆದ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದ್ದರಿಂದ ಇಲಾಖೆ ಪರೀಕ್ಷೆಗಳನ್ನು ಮುಂದೂಡಿತ್ತು. ಮುಂದೂಡಿದ ಪರೀಕ್ಷೆಗಳು ಜ.27ರಂದು ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ 8 ಪರೀಕ್ಷೆ ಕೇಂದ್ರದಲ್ಲಿ ನಡೆದವು.

ಮುಂಜಾಗ್ರತೆ ವಹಿಸಿದ್ದ ಪೊಲೀಸ್‌ ಇಲಾಖೆ ಪರೀಕ್ಷೆ ನಡೆಯುವ ಎಲ್ಲ ಕೋಣೆಗೂ ಸಿಸಿಟಿವಿ ಅಳವಡಿಕೆ ಮಾಡುವ ಮೂಲಕ ಪರೀಕ್ಷೆ ಚಟುವಟಿಕೆ ಹಾಗೂ ಅಭ್ಯರ್ಥಿಗಳ ಮೇಲೆ ನಿಗಾ ವಹಿಸಿತ್ತು. ಕೇಂದ್ರಕ್ಕೆ ಪ್ರಶ್ನೆಪತ್ರಿಕೆ ತರುವ ಹಾಗೂ ವಾಪಸ್‌ ಮಾಡುವ ಸಂದರ್ಭದಲ್ಲಿ ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಯಿತು. ಶನಿವಾರವೇ ಕೇಂದ್ರಗಳಿಗೆ ಭೇಟಿ ನೀಡಿದ ಹಿರಿಯ ಅಧಿಕಾರಿಗಳು ಪರೀಕ್ಷೆಗೆ ಕೈಗೊಂಡ ಕ್ರಮಗಳ ಕುರಿತು ಸಿದ್ಧತೆ ಪರಿಶೀಲನೆ ನಡೆಸಿದ್ದರು.

ಬಾಗಲಕೋಟ, ಗದಗ ಹಾಗೂ ವಿಜಯಪುರ ಜಿಲ್ಲೆಯ ಅಂದಾಜು 5 ಸಾವಿರ ಅಭ್ಯರ್ಥಿಗಳು ಕಾನ್‌ಸ್ಟೇಬಲ್‌ ಪರೀಕ್ಷೆ ಎದುರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ