ಬಾಗಲಕೋಟ: ಹಿಂದಿನ ಕಾಲದಲ್ಲಿ ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನವಾಗಿದ್ದು, ಇಂದಿನ ಚುನಾವಣೆ ಸಂದರ್ಭದಲ್ಲಿ ದಾನದಲ್ಲಿಯೇ ಶ್ರೇಷ್ಠವಾದುದು ಮತದಾನವೆಂದು ಮನದಟ್ಟು ಮಾಡಿಕೊಳ್ಳಬೇಕೆಂದು ಡಿಸಿ ಆರ್.ರಾಮಚಂದ್ರನ್ ತಿಳಿಸಿದರು.
ನವನಗರದ ಪೊಲೀಸ್ ಪ್ಯಾಲೇಸ್ ಹತ್ತಿರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಲ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿಗಾಗಿ ಬೃಹತ್ ಜಾಥಾ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
æೕಶದಲ್ಲಿ ಪ್ರಗತಿ ಕಾರ್ಯಗಳು ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಾದರೆ ಆಡಳಿತ ಉತ್ತಮವಾಗಿರಬೇಕು. ನಮ್ಮನ್ನಾಳುವ ಜನಪ್ರತಿನಿಧಿಗಳು ನಮಗೆ ಬೇಕಾಗುವ ಕುಂದು ಕೊರತೆ ನೀಗಿಸುವಂತವಾಗಿರಬೇಕು. ಅಂತಹ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಹಕ್ಕು ನಿಮ್ಮದಾಗಿದ್ದು, ಯಾವುದೇ ಆಸೆ ಆಮೀಷಕ್ಕೆ ಒಳಗಾಗದೆ ಮತ ಚಲಾಯಿಸಿ ಉತ್ತಮ ಆಡಳಿತಕ್ಕೆ ಕಾರಣಿಭೂತರಾಗಬೇಕು ಎಂದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಕಳೆದ ಚುನಾವಣೆಯಲ್ಲಿ ಶೇ.68ರಷ್ಟು ಮತದಾನವಾಗಿದ್ದು, ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಗುರಿ ಹೊಂದಲಾಗಿದೆ. ಅದಕ್ಕಾಗಿ ವಿನೂತನ ರೀತಿಯ ಜಾಗೃತಿ ಕಾರ್ಯಕ್ರಮಗಳಲ್ಲಿ ರಕ್ತದಾನ ಶಿಬಿರವು ಒಂದಾಗಿದೆ. ಈ ಚುನಾವಣೆಯಲ್ಲಿ ಮಹಿಳೆಯರಿಗೆ, ಪುರುಷರಿಗೆ ಹಾಗೂ ವಿಶೇಷಚೇತನ ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಏ.23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಬೇಕು. ತಾವು ಮತದಾನ ಮಾಡುವುದರ ಜತೆ ಇತರರು ಮತದಾನ ಮಾಡುವಂತೆ ಪ್ರೇರೇಪಿಸಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷಚೇತನರಿಗೆ ಮನೆಯಿಂದ ಮತಗಟ್ಟೆಗೆ ಹಾಗೂ ಮತಗಟ್ಟೆಯಿಂದ ಮನೆಯವರೆಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ನವನಗರದ ಪೊಲೀಸ್ ಪ್ಯಾಲೇಸ್ನಿಂದ ಹೊರಟ ಜಾಗೃತಿ ಜಾಥಾ ಎಲ್ಐಸಿ ಸರ್ಕಲ್ ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಘೋಷಣಾ ಫಲಕ ಹಿಡಿದು ನೆರೆದ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ಪಾಲ್ಗೊಂಡ ನೂರಾರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಮತದಾನ ಜಾಗೃತಿಯ ಘೋಷಣೆ ಕೂಗಿದರು. ನಂತರ ಜಾಥಾ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು.
ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಟೆಕ್ನಾಲಜಿ ಸಂಘ, ವೈದ್ಯಾಧಿಕಾರಿಗಳ ಸಂಘ, ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರ ಸಂಘ ಹಾಗೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಸಂಘಗಳ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 51 ಜನ ರಕ್ತದಾನ ಮಾಡಿದರು. ಜಿಪಂ ಸಿಇಓ ಗಂಗೂಬಾಯಿ ಮಾನಕರ ರಕ್ತದಾನ ಮಾಡುವ ಮೂಲಕ ಮತದಾನ ಜಾಗೃತಿಗೆ ಸಾಥ್ ನೀಡಿದರು.
ಜಾಥಾ ಹಾಗೂ ರಕ್ತದಾನ ಶಿಬಿರದಲ್ಲಿ ಡಿಎಚ್ಒ ಡಾ.ಅನಂತ ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ಬಳ್ಳಾರಿ, ಜಿಲ್ಲಾ ವಯಸ್ಕರ ಶಿಕ್ಷ ಣಾಧಿಕಾರಿ ಬಸವರಾಜ ಶಿರೂರ ಹಾಗೂ ತಾಲೂಕಾ ಅಧಿಕಾರಿಗಳು, ಆರೋಗ್ಯ ಇಲಾಖೆಯ ಎಲ್ಲ ವೃಂದ ಸಂಘಗಳ ಅಧ್ಯಕ್ಷ ರು ಹಾಗೂ ಪದಾಧಿಕಾರಿಗಳು ಇದ್ದರು.
ನವನಗರದ ಪೊಲೀಸ್ ಪ್ಯಾಲೇಸ್ ಹತ್ತಿರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಲ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿಗಾಗಿ ಬೃಹತ್ ಜಾಥಾ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
æೕಶದಲ್ಲಿ ಪ್ರಗತಿ ಕಾರ್ಯಗಳು ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಾದರೆ ಆಡಳಿತ ಉತ್ತಮವಾಗಿರಬೇಕು. ನಮ್ಮನ್ನಾಳುವ ಜನಪ್ರತಿನಿಧಿಗಳು ನಮಗೆ ಬೇಕಾಗುವ ಕುಂದು ಕೊರತೆ ನೀಗಿಸುವಂತವಾಗಿರಬೇಕು. ಅಂತಹ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡುವ ಹಕ್ಕು ನಿಮ್ಮದಾಗಿದ್ದು, ಯಾವುದೇ ಆಸೆ ಆಮೀಷಕ್ಕೆ ಒಳಗಾಗದೆ ಮತ ಚಲಾಯಿಸಿ ಉತ್ತಮ ಆಡಳಿತಕ್ಕೆ ಕಾರಣಿಭೂತರಾಗಬೇಕು ಎಂದರು.
ಜಿಪಂ ಸಿಇಒ ಗಂಗೂಬಾಯಿ ಮಾನಕರ ಮಾತನಾಡಿ, ಕಳೆದ ಚುನಾವಣೆಯಲ್ಲಿ ಶೇ.68ರಷ್ಟು ಮತದಾನವಾಗಿದ್ದು, ಈ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಗುರಿ ಹೊಂದಲಾಗಿದೆ. ಅದಕ್ಕಾಗಿ ವಿನೂತನ ರೀತಿಯ ಜಾಗೃತಿ ಕಾರ್ಯಕ್ರಮಗಳಲ್ಲಿ ರಕ್ತದಾನ ಶಿಬಿರವು ಒಂದಾಗಿದೆ. ಈ ಚುನಾವಣೆಯಲ್ಲಿ ಮಹಿಳೆಯರಿಗೆ, ಪುರುಷರಿಗೆ ಹಾಗೂ ವಿಶೇಷಚೇತನ ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸರತಿ ವ್ಯವಸ್ಥೆ ಮಾಡಲಾಗಿದೆ ಎಂದರು.
ಏ.23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಬೇಕು. ತಾವು ಮತದಾನ ಮಾಡುವುದರ ಜತೆ ಇತರರು ಮತದಾನ ಮಾಡುವಂತೆ ಪ್ರೇರೇಪಿಸಬೇಕು. ಯಾವುದೇ ಅರ್ಹ ಮತದಾರ ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ವಿಶೇಷಚೇತನರಿಗೆ ಮನೆಯಿಂದ ಮತಗಟ್ಟೆಗೆ ಹಾಗೂ ಮತಗಟ್ಟೆಯಿಂದ ಮನೆಯವರೆಗೆ ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ನವನಗರದ ಪೊಲೀಸ್ ಪ್ಯಾಲೇಸ್ನಿಂದ ಹೊರಟ ಜಾಗೃತಿ ಜಾಥಾ ಎಲ್ಐಸಿ ಸರ್ಕಲ್ ಆಗಮಿಸಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಘೋಷಣಾ ಫಲಕ ಹಿಡಿದು ನೆರೆದ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಜಾಥಾದಲ್ಲಿ ಪಾಲ್ಗೊಂಡ ನೂರಾರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಮತದಾನ ಜಾಗೃತಿಯ ಘೋಷಣೆ ಕೂಗಿದರು. ನಂತರ ಜಾಥಾ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು.
ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಟೆಕ್ನಾಲಜಿ ಸಂಘ, ವೈದ್ಯಾಧಿಕಾರಿಗಳ ಸಂಘ, ಕಿರಿಯ ಮತ್ತು ಹಿರಿಯ ಆರೋಗ್ಯ ಸಹಾಯಕರ ಸಂಘ ಹಾಗೂ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ಸಂಘಗಳ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 51 ಜನ ರಕ್ತದಾನ ಮಾಡಿದರು. ಜಿಪಂ ಸಿಇಓ ಗಂಗೂಬಾಯಿ ಮಾನಕರ ರಕ್ತದಾನ ಮಾಡುವ ಮೂಲಕ ಮತದಾನ ಜಾಗೃತಿಗೆ ಸಾಥ್ ನೀಡಿದರು.
ಜಾಥಾ ಹಾಗೂ ರಕ್ತದಾನ ಶಿಬಿರದಲ್ಲಿ ಡಿಎಚ್ಒ ಡಾ.ಅನಂತ ದೇಸಾಯಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಎಂ.ಬಿ.ಬಳ್ಳಾರಿ, ಜಿಲ್ಲಾ ವಯಸ್ಕರ ಶಿಕ್ಷ ಣಾಧಿಕಾರಿ ಬಸವರಾಜ ಶಿರೂರ ಹಾಗೂ ತಾಲೂಕಾ ಅಧಿಕಾರಿಗಳು, ಆರೋಗ್ಯ ಇಲಾಖೆಯ ಎಲ್ಲ ವೃಂದ ಸಂಘಗಳ ಅಧ್ಯಕ್ಷ ರು ಹಾಗೂ ಪದಾಧಿಕಾರಿಗಳು ಇದ್ದರು.