ಆ್ಯಪ್ನಗರ

ಇಳಕಲ್‌ನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತನ್ನಿ

ಇಳಕಲ್‌: ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಪಕ್ಷ ವನ್ನು ಅಧಿಕಾರಕ್ಕೆ ತನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕರೆ ನೀಡಿದರು.

Vijaya Karnataka 30 Aug 2018, 5:00 am
ಇಳಕಲ್‌: ಕಾಂಗ್ರೆಸ್‌ ಪಕ್ಷ ದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಪಕ್ಷ ವನ್ನು ಅಧಿಕಾರಕ್ಕೆ ತನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕರೆ ನೀಡಿದರು.
Vijaya Karnataka Web bring congress to power
ಇಳಕಲ್‌ನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತನ್ನಿ


ಅವರು ನಗರಸಭೆ ಚುನಾವಣೆ ನಿಮಿತ್ತ ಇಲ್ಲಿನ ಗಾಂದಿ ಚೌಕ್‌ದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ ಕಾಂಗ್ರೆಸ್‌ ಪಕ್ಷ ದ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಮಾಜಿ ಸಿ.ಎಂ.ಸಿದ್ಧರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರಕಾರ ಅವಳಿ ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಸಾಕಷ್ಟು ಜನಪರ ಅಭಿವೃದ್ಧಿ ಕಾರ್ಯ ಮಾಡಿದೆ. ಅವುಗಳ ಪ್ರತಿಫಲವಾಗಿ ಜನತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭರ್ಥಿಗಳನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೋಮುವಾದಿ ಬಿಜೆಪಿಗೆ ಅಧಿಕಾರ ನೀಡದೇ ಕಾಂಗ್ರೆಸ್‌ ಪಕ್ಷ ದ ಸಾಧನೆ ಹಾಗೂ ಅಭಿವೃದ್ಧಿಪರ ಚಿಂತನೆಗೆ ಆದ್ಯತೆ ನೀಡಿ ಕಾಂಗ್ರೆಸ್‌ ಪಕ್ಷ ದ ಗೆಲ್ಲಿಸುವ ಮೂಲಕ ಇಳಕಲ್‌ ನಗರಸಭೆಯಲ್ಲಿ ಕಾಂಗ್ರೆಸ್‌ ಪಕ್ಷ ಸ್ಪಷ್ಟವಾಗಿ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಆಶೀರ್ವದಿಸಬೇಕೆಂದು ಮನವಿ ಮಾಡಿದರು. ಅಧ್ಯಕ್ಷ ತೆ ವಹಿಸಿದ್ದ ಮಾಜಿ ಶಾಸಕ ವಿಜಯಾನಂದ ಎಸ್‌. ಕಾಶಪ್ಪನವರ ಮಾತನಾಡಿ ಹುನಗುಂದ ಮತಕ್ಷೇತ್ರಕ್ಕೆ ಸರಕಾರದಿಂದ 3500 ಕೋಟಿಗೂ ಅಧಿಕ ಅನುದಾನದಲ್ಲಿ ಸಾಕಷ್ಟು ಅಭಿವೃದ್ಧಿಪರ ಕಾರ್ಯ ಮಾಡಿದ್ದು ಜನತೆ ಕಾಂಗ್ರೆಸ್‌ ಪಕ್ಷ ಬೆಂಬಲಿಸಿ ಅಧಿಕಾರದ ಚುಕ್ಕಾಣಿ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಹನಸಸಾಬ ದೋಟಿಹಾಳ, ಎಂ.ಬಿ. ಸೌದಾಗರ್‌, ಗಂಗಾಧರ ದೊಡ್ಡಮನಿ, ಎಂ.ಎಲ್‌. ಶಾಂತಗೇರಿ, ಮಹಿಬೂಬಸಾಬ ಹಳ್ಳಿ, ಅರುಣ ಬಿಜ್ಜಲ, ಮಹಾಂತೇಶ ನರಗುಂದ, ರಾಜಕುಮಾರ ಬಾದವಾಡಗಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ