ಆ್ಯಪ್ನಗರ

ಬಾಗಲಕೋಟೆ: ಹೆದ್ದಾರಿ ತಡೆದು ರೈತರ ಪ್ರತಿಭಟನೆ, ರಸ್ತೆಯಲ್ಲೇ ಮಕ್ಕಳಿಂದ ಆಹಾರ ಸೇವನೆ!

ಬಾಗಲಕೋಟೆಯ ಹುನಗುಂದದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೂ ರೈತರ ಪರವಾಗಿ ರಸ್ತೆ ತಡೆ ಕಾರ್ಯಕ್ರಮ ನಡೆದಿದೆ. ಚಿತ್ರದುರ್ಗ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 54ರಲ್ಲಿ ಕುಳಿತು ರೈತರು,ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

Vijaya Karnataka Web 6 Feb 2021, 2:49 pm
ಬಾಗಲಕೋಟೆ: ದೆಹಲಿ ರೈತರ ಹೋರಾಟ ಬೆಂಬಲಿಸಿಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ಹೆದ್ದಾರಿ ತಡೆಯನ್ನು ಅನ್ನದಾತರು ಮಾಡಿದರು. ಇನ್ನು ರೈತರ ಹೋರಾಟಕ್ಕೆ ರೈತರ ಮಕ್ಕಳು ಸಾಥ್ ನೀಡಿದರು. ಹೆದ್ದಾರಿ ಮೇಲೆಯೇ ಮಕ್ಕಳು ಉಪಹಾರ ಸೇವಿಸಿ ಪ್ರತಿಭಟಿಸಿದರು. ಹುಬ್ಬಳ್ಳಿ ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ (218) ತಡೆದು ತಮ್ಮ ಆಕ್ರೋಶ ಹೊರಹಾಕಿದರು.
Vijaya Karnataka Web bagalkot Farmers Protest


ಹಸಿರು ಶಾಲು,ಧ್ವಜ ಹಿಡಿದ ರೈತರ ಮಕ್ಕಳು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಅಲ್ಲದೆ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಹೊರವಲಯದಲ್ಲಿ ಹಾಯ್ದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ.

ಹುನಗುಂದದಲ್ಲಿ ಪ್ರತಿಭಟನೆ!
ಇನ್ನು ಬಾಗಲಕೋಟೆಯ ಹುನಗುಂದದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೂ ರೈತರ ಪರವಾಗಿ ರಸ್ತೆ ತಡೆ ಕಾರ್ಯಕ್ರಮ ನಡೆದಿದೆ. ಚಿತ್ರದುರ್ಗ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 54ರಲ್ಲಿ ಕುಳಿತು ರೈತರು,ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ರೈತರ ಪ್ರತಿಭಟನೆಗೆ ಕರವೇ ಕಾರ್ಯಕರ್ತರು ಸಾಥ್ ನೀಡಿದರು.

ನಾನು ಹೇಳಿದಂತೆ ಯಶಸ್ವಿ ಆಗದಿದ್ದರೆ ಜೆಡಿಎಸ್‌ ವಿಸರ್ಜನೆ: ಎಚ್‌ಡಿ ಕುಮಾರಸ್ವಾಮಿ ಶಪಥ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ