ಆ್ಯಪ್ನಗರ

ಚಿದಂಬರಂ ಹೇಳಿಕೆ ವೈಯಕ್ತಿಕ : ಪರಮೇಶ್ವರ್‌

ಬಾಗಲಕೋಟ: 'ರಾಹುಲ್‌ ಗಾಂಧಿನ ಮುಂದಿನ ಪ್ರಧಾನಿ ಅಭ್ಯರ್ಥಿಯಲ್ಲ ಎಂಬ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಹೇಳಿಕೆ ವೈಯಕ್ತಿಕವಾದದ್ದು' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.

Vijaya Karnataka 23 Oct 2018, 5:00 am
ಬಾಗಲಕೋಟ: 'ರಾಹುಲ್‌ ಗಾಂಧಿನ ಮುಂದಿನ ಪ್ರಧಾನಿ ಅಭ್ಯರ್ಥಿಯಲ್ಲ ಎಂಬ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಹೇಳಿಕೆ ವೈಯಕ್ತಿಕವಾದದ್ದು' ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದರು.
Vijaya Karnataka Web chidambarams statement is personal parameshwar
ಚಿದಂಬರಂ ಹೇಳಿಕೆ ವೈಯಕ್ತಿಕ : ಪರಮೇಶ್ವರ್‌


ಜಮಖಂಡಿಯಲ್ಲಿ ಸೋಮವಾರ ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರಕ್ಕೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 'ಚಿದಂಬರಂ ಅವರ ಹೇಳಿಕೆಗೂ ಪಕ್ಷದ ತೀರ್ಮಾನಕ್ಕೂ ಸಂಬಂಧವಿಲ್ಲ. ರಾಹುಲ್‌ ಗಾಂಧಿ ನಮ್ಮ ನಾಯಕರಾಗಿದ್ದಾರೆ, ಪಕ್ಷದ ಅಧ್ಯಕ್ಷರಾಗಿದ್ದಾರೆ. ಸಾಮಾನ್ಯವಾಗಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಪ್ರಧಾನಮಂತ್ರಿ ಅಭ್ಯರ್ಥಿಯಾಗುತ್ತಾರೆ' ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ವೇಣುಗೋಪಾಲ್‌ ಅವರ ಲೈಂಗಿಕ ಹಗರಣದ ಕುರಿತು ಕೇಳಿದ ಪ್ರಶ್ನೆಗೆ 'ಅದನ್ನೆಲ್ಲ ಯಾಕೆ ಕೇಳ್ತೀರಿ, ಅದು ನಮಗೆ ಸಂಬಂಧವಿಲ್ಲದ್ದು. ಸಂಬಂಧವಿಲ್ಲದ್ದು ಕೇಳಬೇಡಿ, ಅವರ ಹಗರಣದ ಎಫೆಕ್ಟ್ ಏನಿಲ್ಲ. ಅವರು ಅಲ್ಲಿ ಏನೋ ಮಾಡಿಕೊಂಡಿದ್ದಾರೆ ಅಂತಿದ್ದರೆ ಅವರೇ ಉತ್ತರ ಕೊಡುತ್ತಾರೆ' ಎಂದು ಗರಂ ಆದರು.

'ಕೇಂದ್ರ ಸರಕಾರ ನೀಡಿರುವ ಭರವಸೆಗಳನ್ನು ಈಡೇರಿಸಿಲ್ಲ. ಉದ್ಯೋಗ ಸೃಷ್ಟಿ, ಕಪ್ಪು ಹಣ ತರುವ ಭರವಸೆಗಳೆಲ್ಲ ಸುಳ್ಳಾಗಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂಧನ ಬೆಲೆ ಕಡಿಮೆಯಿದ್ದಾಗ ಇಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಿಸಲಾಗಿದೆ. ಉಪ ಚುನಾವಣೆಗಳ ಫಲಿತಾಂಶ ಸಮ್ಮಿಶ್ರ ಸರಕಾರಕ್ಕೆ ಶಕ್ತಿ ನೀಡಲಿದೆ. ನಮ್ಮ ಕಾರ್ಯಕ್ರಮಗಳ ಬಗ್ಗೆ ಜನಾಭಿಪ್ರಾಯ ಪ್ರದರ್ಶಿತಗೊಳ್ಳಲಿದೆ. ಜಮಖಂಡಿಯಲ್ಲಿ ಚುನಾವಣೆಗಾಗಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ಹಾಗೂ ನಾನಾ ಭಾಗಗಳಿಗೆ ಸಚಿವರಿಗೆ ಉಸ್ತುವಾರಿ ನೀಡಲಾಗಿದೆ. ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಿದೆ. ಆನಂದ ನ್ಯಾಮಗೌಡ ಅವರ ಗೆಲುವು ನೂರಕ್ಕೆ ನೂರರಷ್ಟು ನಿಶ್ಚಿತ' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ