ಆ್ಯಪ್ನಗರ

ಸ್ವಚ್ಛಮೇವ ಜಯತೆ ಆಂದೋಲನ 11ರಂದು

ಬಾಗಲಕೋಟ : ಜಿಲ್ಲಾಡಳಿತ, ಜಿಪಂ, ವಾರ್ತಾ ಇಲಾಖೆ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆಯಡಿ ಜೂ.11ರಿಂದ ಜು.10ರ ವರೆಗೆ ತಿಂಗಳ ಕಾಲ ಜಿಲ್ಲೆ, ತಾಲೂಕು ಮತ್ತು ಗಾಪಂ ಮಟ್ಟದಲ್ಲಿ ನಾನಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

Vijaya Karnataka 10 Jun 2019, 5:00 am
ಬಾಗಲಕೋಟ : ಜಿಲ್ಲಾಡಳಿತ, ಜಿಪಂ, ವಾರ್ತಾ ಇಲಾಖೆ ಸಹಯೋಗದಲ್ಲಿ ಸ್ವಚ್ಛ ಭಾರತ ಮಿಷನ್‌ (ಗ್ರಾಮೀಣ) ಯೋಜನೆಯಡಿ ಜೂ.11ರಿಂದ ಜು.10ರ ವರೆಗೆ ತಿಂಗಳ ಕಾಲ ಜಿಲ್ಲೆ, ತಾಲೂಕು ಮತ್ತು ಗಾಪಂ ಮಟ್ಟದಲ್ಲಿ ನಾನಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಸಿಇಓ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
Vijaya Karnataka Web cleanliness jayate campaign on 11th
ಸ್ವಚ್ಛಮೇವ ಜಯತೆ ಆಂದೋಲನ 11ರಂದು


ಪ್ರಕಟಣೆ ನೀಡಿರುವ ಅವರು, ಪ್ರತಿಯೊಂದು ಗ್ರಾಮದಲ್ಲಿ ಸ್ವಚ್ಛತೆಯ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಬೀದಿನಾಟಕ, ಜನಪದ ಸಂಗೀತ ಕಾರ್ಯಕ್ರಮ, ಸ್ವಚ್ಛತಾ ರಥಯಾತ್ರೆ, ಪ್ರಬಂಧ, ಚರ್ಚಾಸ್ಪರ್ಧೆ, ಶ್ರಮದಾನ, ಜಾಗೃತಿ ಜಾಥಾ, ಗೋಡೆ ಬರಹ, ಕರಪತ್ರ, ಬ್ಯಾನರ್‌ ಸೇರಿದಂತೆ ಶೌಚಾಲಯ ಬಳಕೆ ಅಭಿಯಾನದಂತಹ ಹಲವು ಕಾರ್ಯಕ್ರಮಗಳನ್ನು ತಿಂಗಳ ಪರ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಸ್ವಚ್ಛ ಭಾರತ ಮಿಷನ್‌(ಗ್ರಾಮೀಣ)ಯೋಜನೆಯಡಿ ಘನ ಮತ್ತು ದ್ರವ್ಯ ತ್ಯಾಜ್ಯ ವಿಲೇವಾರಿ ಕಾರ್ಯಕ್ರಮ ಅನುಷ್ಠಾನಕ್ಕೆ ಉದ್ದೇಶಿಸಲಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮೀಣ ಸಮುದಾಯಕ್ಕೆ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವೈಯಕ್ತಿಕ ಶೌಚಾಲಯ, ಸಮುದಾಯ ಶೌಚಾಲಯ ಬಳಕೆ, ಮಕ್ಕಳ ಮಲ ವಿಲೇವಾರಿ, ಶಾಲೆ ಮತ್ತು ಅಂಗನವಾಡಿ ಶೌಚಾಲಯ ಉಪಯೋಗಿಸುವಂತೆ ವಿದ್ಯಾರ್ಥಿ ಮತ್ತು ಶಿಕ್ಷ ಕರಲ್ಲಿ ಜಾಗೃತಿ ಮೂಡಿಸುವುದು. ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗ್ಗೆ ಗ್ರಾಮೀಣ ಜನರಲ್ಲಿ ಅರಿವು ಮೂಡಿಸಲು ಸ್ಚಚ್ಛಮೇವ ಜಯತೆ ಆಂದೋಲನ ಆರಂಭಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಹಮ್ಮಿಕೊಂಡ ಲಕ್ಷ ಗಿಡ ನೆಡುವ ವನಮಹೋತ್ಸವ ಕಾರ್ಯಕ್ರಮದಡಿ ಪ್ರತಿ ಗ್ರಾಪಂನಲ್ಲಿ 500 ಗಿಡ ನೆಡುವ ಹಾಗೂ ಜನರಲ್ಲಿ ನೀರನ್ನು ಮಿತವಾಗಿ ಬಳಸುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜೂ.11ರಂದು ತಾಲೂಕಿನ ಕದಾಂಪೂರ ಆರ್‌ಸಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಲಿದ್ದಾರೆ.

ಅಂದು ಬೆಳಗ್ಗೆ 9ಕ್ಕೆ ಸ್ವಚ್ಛತಾ ರಥ ಹಾಗೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಾಗೃತಿ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದೆ. ವೇದಿಕೆ ಕಾರ್ಯಕ್ರಮ ಕಸ್ತೂರಬಾ ವಸತಿ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಚಿವ ಆರ್‌.ಬಿ.ತಿಮ್ಮಾಪೂರ, ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡ ಸೇರಿದಂತೆ ಶಾಸಕರು, ಪರಿಷತ್‌ ಸದಸ್ಯರು, ಜಿಪಂ, ತಾಪಂ ಸದಸ್ಯರು, ಶೀಗಿಕೇರಿ ಗ್ರಾಪಂ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ