ಆ್ಯಪ್ನಗರ

ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್‌ ಬದ್ಧ

ಬಾಗಲಕೋಟ: ಕಾಂಗ್ರೆಸ್‌ ಪಕ್ಷ ದೀನ, ದಲಿತರ, ಮಾದಿಗರ ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಹೆಚ್ಚಿನ ಪಾತ್ರವಹಿಸಿದೆ. ಅದರೆ ಪಕ್ಷ ದಲ್ಲಿ ಕಾಣದ ಕೈಗಳು ನ್ಯಾ.ಸದಾಶಿವ ಆಯೋಗದ ವರದಿಯ ಜಾರಿಗೆ ಹೋರಾಟದ ನೆಪವನ್ನು ಇಟ್ಟುಕೊಂಡು ಪಕ್ಷ , ನಾಯಕರನ್ನು ದೂರುತ್ತಿದ್ದಾರೆಂದು ಕಾಂಗ್ರೆಸ್‌ ಮುಖಂಡ ಪೀರಪ್ಪ ಮ್ಯಾಗೇರಿ ಹೇಳಿದರು.

Vijaya Karnataka 10 Mar 2019, 5:00 am
ಬಾಗಲಕೋಟ: ಕಾಂಗ್ರೆಸ್‌ ಪಕ್ಷ ದೀನ, ದಲಿತರ, ಮಾದಿಗರ ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಹೆಚ್ಚಿನ ಪಾತ್ರವಹಿಸಿದೆ. ಅದರೆ ಪಕ್ಷ ದಲ್ಲಿ ಕಾಣದ ಕೈಗಳು ನ್ಯಾ.ಸದಾಶಿವ ಆಯೋಗದ ವರದಿಯ ಜಾರಿಗೆ ಹೋರಾಟದ ನೆಪವನ್ನು ಇಟ್ಟುಕೊಂಡು ಪಕ್ಷ , ನಾಯಕರನ್ನು ದೂರುತ್ತಿದ್ದಾರೆಂದು ಕಾಂಗ್ರೆಸ್‌ ಮುಖಂಡ ಪೀರಪ್ಪ ಮ್ಯಾಗೇರಿ ಹೇಳಿದರು.
Vijaya Karnataka Web congress is committed to social justice
ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್‌ ಬದ್ಧ


ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾದಿಗ ಸಮುದಾಯದಿಂದ ಕಾಂಗ್ರೆಸ್‌ ಪಕ್ಷ ದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಕೆಲವರು ಪಕ್ಷ ದಲ್ಲಿದ್ದುಕೊಂಡು ಕಾಂಗ್ರೆಸ್‌ ಪಕ್ಷ , ಸಚಿವರು, ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಅದರೆ ಕಾಂಗ್ರೆಸ್‌ ಪಕ್ಷ ದಲ್ಲಿ ಸಚಿವರು, ಶಾಸಕರು, ಮಾದಿಗ ಸಮುದಾಯದ ಜನರು ಅನ್ಯೋನ್ಯ ಸಂಬಂಧವಿದೆ ಎಂದರು.

ಮಾದಿಗ ಸಮುದಾಯದ ಅಭಿವೃದ್ಧಿಗೆ ಬೇಕಾದ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲು ಸಚಿವ ಅರ್‌.ಬಿ.ತಿಮ್ಮಾಪುರ, ಜಿ.ಪರಮೇಶ್ವರ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಚ್ಛೆ ತೋರುತ್ತಿಲ್ಲ. ಮಾದಿಗ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕೆಲವರು ದೂರಿದ್ದು ಸರಿಯಲ್ಲ. ರಾಜ್ಯದಲ್ಲಿ ಈ ಹಿಂದೆ ನಾಲ್ಕು ಅವಧಿಯಲ್ಲಿ ಯಾವ ಸರಕಾರವು ನ್ಯಾ.ಸದಾಶಿವ ವರದಿ ಗಮನ ಹರಿಸಿಲ್ಲ. ಆದರೂ ಕಾಂಗ್ರೆಸ್‌ ಪಕ್ಷ ಮಾದಿಗರ ಬೆಂಬಲಕ್ಕೆ ನಿಂತಿದೆ. ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಶ್ರಮಿಸಿದೆ ಎಂದರು.

ಈ ಹಿಂದೆ ಇದ್ದ ಬಿಜೆಪಿ ಸರಕಾರದಲ್ಲಿ ಸದಾಶಿವ ವರದಿ ಜಾರಿಗೆ ಮಾಡುವಲ್ಲಿ ಹಿಂದೇಟು ಹಾಕಿತು. ಮಾದಿಗ ಸಮುದಾಯ ಎಂದಿಗೂ ಕಾಂಗ್ರೆಸ್‌ ಪಕ್ಷ ಕ್ಕೆ ಬೆಂಬಲವಿರುತ್ತದೆ. ಮಾಜಿ ಸಚಿವರಾದ ಎಸ್‌.ಆರ್‌.ಪಾಟೀಲ್‌, ಎಚ್‌.ವೈ.ಮೇಟಿ, ಆರ್‌.ಬಿ.ತಿಮ್ಮಾಪುರ ಅವರ ಕೈ ಬಲಪಡಿಸಲು ಮಾದಿಗ ಸಮುದಾಯ ಬದ್ಧವಾಗಿದೆ. ಮಾಜಿ ಸಿಎಂ, ಶಾಸಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮುಖಂಡರು ಮಾದಿಗ ಸಮುದಾಯದ ಸಾಮಾಜಿಕ ನ್ಯಾಯಕ್ಕೆ ಶ್ರಮಿಸಿದ್ದಾರೆ ಎಂದರು.

ಮಾದಿಗ ಸಮಾಜದ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವೈ.ವೈ.ತಿಮ್ಮಾಪುರ ಮಾತನಾಡಿ, ಕಾಂಗ್ರೆಸ್‌ ಪಕ್ಷ ದಲ್ಲಿದ್ದು ಕಾಂಗ್ರೆಸ್‌ಗೆ ಮತ ನೀಡಬೇಡಿ ಎಂದು ಕೆಲವರು ಹೇಳಿಕೆ ನೀಡಿದ್ದು ಪಕ್ಷ ವಿರೋಧಿ ಕೆಲಸವಾಗಿದೆ. ವಿಪರ್ಯಾಸವೆಂದರೆ ಕಾಂಗ್ರೆಸ್‌ ಪಕ್ಷ ದೀನ ದಲಿತರ, ಮಾದಿಗರ, ಅಲ್ಪಸಂಖ್ಯಾತ ರ ಸಮುದಾಯಗಳ ಪರವಾಗಿ ಅಭಿವೃದ್ಧಿ ಕಾರ್ಯ ಮಾಡಿದೆ. ಅದರೆ ಕೆಲವರು ಈ ಹಿಂದೆ ಆರ್‌.ಬಿ.ತಿಮ್ಮಾಪುರ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬಾರದು. ಕೈ ಬಿಡಬೇಕು ಎಂದು ಹೇಳಿಕೆ ನೀಡಿದ್ದು ಸರಿಯಲ್ಲ. ಯಾವುದೇ ರೀತಿಯಲ್ಲಿ ಪಕ್ಷ ಕ್ಕೆ ಅನ್ಯಾಯ ಮಾಡಿಲ್ಲ. ಮಾದಿಗ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಮುಖಂಡರಾದ ಗೋಪಾಲ ಮಾದರ, ಶಿವಾನಂದ ಮಾದರ, ಗಣೇಶ ಮೇತ್ರಿ, ಮುತ್ತಣ್ಣ ಗಾಜಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ