ಆ್ಯಪ್ನಗರ

ಅನಾರೋಗ್ಯದಿಂದ ಬಾಗಲಕೋಟೆಯ ಸಿಆರ್‌ಪಿಎಫ್ ಯೋಧ ಸಾವು

ಬಾಗಲಕೋಟೆಯಲ್ಲಿರುವ ಹಲವರು ಮಂದಿ ದೇಶಸೇವೆಯಲ್ಲಿ ತೊಡಗಿದ್ದಾರೆ. ಒರಿಸ್ಸಾದಲ್ಲಿ ಸಿಆರ್‌ಪಿಎಫ್‌ 4ನೇ ಬೆಟಾಲಿಯನ್‌ನಲ್ಲಿ ಇದ್ದ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

Vijaya Karnataka Web 24 Jul 2019, 7:58 pm
ಬಾಗಲಕೋಟೆ: ಬಾಗಲಕೋಟೆಯ ಸಿಆರ್‌ಪಿಎಫ್‌ ಯೋಧರೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
Vijaya Karnataka Web ರಂಗಪ್ಪ ಭೀಮಪ್ಪ ಬಡಿಗೇರ
ರಂಗಪ್ಪ ಭೀಮಪ್ಪ ಬಡಿಗೇರ


ಒರಿಸ್ಸಾದ 4ನೇ ಬಟಾಲಿಯನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ

ರಂಗಪ್ಪ ಭೀಮಪ್ಪ ಬಡಿಗೇರ (39) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಿರೇಬೂದಿಹಾಳ ಗ್ರಾಮದ ರಂಗಪ್ಪ ಭೀಮಪ್ಪ ಪತ್ನಿ, ಇಬ್ಬರು ಮಕ್ಕಳು, ತಂದೆ, ತಾಯಿಯನ್ನು ಅಗಲಿದ್ದಾರೆ.

ಯೋಧ ರಂಗಪ್ಪ ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಕರೆತರಲಾಗುವುದು. ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಯೋಧ ರಂಗಪ್ಪ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಯೋಧನ ಸಹೋದರರಾದ ಗಂಗಾಧರ ಹಾಗೂ ಮೌನೇಶ ಕೂಡ ಸಿಆರ್ ಪಿಎಫ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ