ಆ್ಯಪ್ನಗರ

ಜಿಲ್ಲೆಗೆ ಆಗ್ರಹಿಸಿ ಜಮಖಂಡಿ ಬಂದ್: ಶಾಲಾ ಕಾಲೇಜುಗಳಿಗೆ ರಜೆ, ಸಾರಿಗೆ ಸಂಚಾರ ಅಸ್ತವ್ಯಸ್ತ

ಜಿಲ್ಲೆಗೆ ಆಗ್ರಹಿಸಿ ಇಂದು (ಗುರುವಾರ) ಜಮಖಂಡಿ ಬಂದ್‌ಗೆ ಕರೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Vijaya Karnataka Web 3 Oct 2019, 10:27 am
ಬಾಗಲಕೋಟ: ಜಮಖಂಡಿ ನಗರವನ್ನು ಜಿಲ್ಲೆಯನ್ನಾಗಿ ಮತ್ತು ಸಾವಳಗಿಯನ್ನು ತಾಲೂಕು ಕೇಂದ್ರವನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಇಂದು (ಗುರುವಾರ) ಕರೆ ನೀಡಲಾಗಿದ್ದ ಜಮಖಂಡಿ ಬಂದ್‌ ಬಹುತೇಕ ಯಶಸ್ವಿಯಾಗಿದೆ.
Vijaya Karnataka Web jamakhandi


ಬಂದ್ ಹಿನ್ನೆಲೆಯಲ್ಲಿ ಅಂಗಡಿ, ಮುಗ್ಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸರಕಾರಿ ಕಚೇರಿಗಳಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದೆ.

'ವಿಜಯನಗರ' ಜಿಲ್ಲೆ ವಿರೋಧಿಸಿ ಬಳ್ಳಾರಿ ಬಂದ್:

ಜಮಖಂಡಿಯಿಂದ ತೆರಳುವ ಸರಕಾರಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಲ್ಲಲ್ಲಿ ಖಾಸಗಿ ವಾಹನಗಳ ಸಂಚಾರ ಕಂಡು ಬರುತ್ತಿದೆ.

ಇಂದು ಮಧ್ಯಾಹ್ನ ವಿವಿಧ ಸಂಘಟನೆ ಹಾಗೂ ಮಠಾಧೀಶರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

'ವಿಜಯನಗರ'ದ ವಿರುದ್ಧ ಬಂಡೆದ್ದ ಬಳ್ಳಾರಿ ಜನತೆ!

ಜಮಖಂಡಿಯನ್ನು ಜಿಲ್ಲೆ ಮತ್ತು ಸಾವಳಗಿಯನ್ನು ತಾಲೂಕು ಕೇಂದ್ರ ಮಾಡಬೇಕೆಂದು ಒತ್ತಾಯಿಸಿ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಗುರುವಾರ ಜಮಖಂಡಿ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಓಲೇಮಠದ ಡಾ. ಚನ್ನಬಸವ ಮಹಾಸ್ವಾಮಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ