ಆ್ಯಪ್ನಗರ

ವಲಸಿಗರಿಗೆ ಊಟದ ವ್ಯವಸ್ಥೆ : ಡಿಸಿಎಂ

ಬಾಗಲಕೋಟೆ: ಜಿಲ್ಲೆಯ ಗೂಗಲಮರಿ ಸೇರಿದಂತೆ ಹಲವೆಡೆ ಅತಂತ್ರರಾಗಿರುವ ಕಾರ್ಮಿಕರಿಗೆ ಊಟ, ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಜಿಲ್ಲಾಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

Vijaya Karnataka 31 Mar 2020, 5:00 am
ಬಾಗಲಕೋಟೆ: ಜಿಲ್ಲೆಯ ಗೂಗಲಮರಿ ಸೇರಿದಂತೆ ಹಲವೆಡೆ ಅತಂತ್ರರಾಗಿರುವ ಕಾರ್ಮಿಕರಿಗೆ ಊಟ, ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಜಿಲ್ಲಾಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
Vijaya Karnataka Web dining arrangements for immigrants dcm
ವಲಸಿಗರಿಗೆ ಊಟದ ವ್ಯವಸ್ಥೆ : ಡಿಸಿಎಂ


ನಗರದಲ್ಲಿಸೋಮವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು ಕೊಪ್ಪಳ ಜಿಲ್ಲೆಯಿಂದ ಸಾವಿರಾರು ಜನರು ಜಿಲ್ಲೆಯ ಗಡಿ ಬಳಿಗೆ ಬಂದಿದ್ದಾರೆ. ಇವರಿಗೆಲ್ಲಊಟ, ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಇವರೆಲ್ಲಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿರುವುದರಿಂದ ಆ ಜಿಲ್ಲೆಗೆ ವಾಪಸ್‌ ಕಳಿಸಲು ಅಲ್ಲಿನ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

11 ವ್ಯಕ್ತಿಗಳ ಮಾದರಿ ಸಂಗ್ರಹ: ಜಿಲ್ಲೆಯಲ್ಲಿಯಾವ ವ್ಯಕ್ತಿಗೂ ಕೊರೊನಾ ಸೋಂಕು ತಗುಲಿಲ್ಲಎಂಬುದು ಸಮಾಧಾನಕರ ಸಂಗತಿಯಾಗಿದೆ. ಕೊರೊನಾ ಖಚಿತಪಡಿಸಲು 11 ವ್ಯಕ್ತಿಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲರ ವರದಿ ನೆಗೆಟಿವ್‌ ಬಂದಿವೆ, ಜೀವ ಇದ್ದರೆ ಮಾತ್ರ ಜೀವನ ಎಂಬುದನ್ನು ಅರಿತುಕೊಂಡು ಜನರು ಮನೆಗಳಿಂದ ಹೊರ ಬರಬಾರದು. ಕಲಬುರಗಿಯಲ್ಲಿಕೊರೊನಾ ಸಂಬಂಧಿಸಿದಂತೆ ಸಭೆ ನಡೆಸಿ ಪ್ರಗತಿ ಪರಿಶೀಲಿಸಿದ್ದೇನೆ. ಅಲ್ಲಿಪರಿಸ್ಥಿತಿ ನಿಯಂತ್ರಣದಲ್ಲಿದೆ. ಜಮಖಂಡಿಯಲ್ಲಿಹೆಚ್ಚಿನ ಸಂಖ್ಯೆಯಲ್ಲಿಜನರು ರಸ್ತೆಗಳಲ್ಲಿದ್ದುದು ಕಂಡುಬಂದಿದ್ದು, ವಿನಾಕಾರಣ ರಸ್ತೆ ಮೇಲೆ ಸಂಚರಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಕಠಿಣ ಕ್ರಮ: ಕೊರೊನಾ ಸೋಂಕು ಪಸರಿಸಿದೆ ಎಂದು ವದಂತಿ ಪಸರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಅಂತಹ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಪ್ರಧಾನಿ ಎಲ್ಲಜಿಲ್ಲೆಗಳ ಉಸ್ತುವಾರಿ ಸಚಿವರಿಂದ ಪ್ರತಿ ದಿನ ಮಾಹಿತಿ ಪಡೆಯುತ್ತಿದ್ದಾರೆ ಎಂದು ವಿವರಿಸಿದರು. ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ, ಎಸ್‌ಪಿ ಲೋಕೇಶ್‌ ಜಗಲಾಸರ್‌, ಜಿಪಂ ಸಿಇಒ ಗಂಗೂಬಾಯಿ ಮಾನಕರ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ